ಶಿರೂರು ದುರಂತ | ಶೋಧ ಕಾರ್ಯಾಚರಣೆಯ ವೇಳೆ ಎರಡು ಮಾನವ ಮೂಳೆ ಪತ್ತೆ

Date:

Advertisements

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಕಳೆದ ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 72 ದಿನಗಳ ಬಳಿಕ ಕಳೆದ ಸೆ.25ರಂದು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಮೂರನೇ ಹಂತದ ಕಾರ್ಯಾಚರಣೆಯಲ್ಲಿ ಎರಡು ಮಾನವ ಮೂಳೆ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, “ಅಂಕೋಲಾ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾದವರಿಗಾಗಿ ನಡೆಸಲಾಗುತ್ತಿರುವ ಮೂರನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಇಂದು ಎರಡು ಮೂಳೆಗಳು ಗಂಗಾವಳಿ ನದಿಯಲ್ಲಿ ದೊರೆತಿದೆ.ಅದನ್ನು ಡಿ.ಎನ್.ಎ ಪರೀಕ್ಷೆಗಾಗಿ ಕಳುಹಿಸಲಾಗಿದೆ” ಎಂದು ತಿಳಿಸಿದ್ದಾರೆ.

ಶಿರೂರು ದುರಂತದಿಂದ ಗಂಗಾವಳಿಯಲ್ಲಿ ಮುಳುಗಿ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಡ್ರೆಜ್ಜಿಂಗ್ ಮೂಲಕ ಶೋಧ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಮಾನವ ಮೂಳೆ ಪತ್ತೆಯಾಗಿದೆ.

Advertisements

ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ ಉಂಟಾಗಿ 75 ದಿನ ಕಳೆದಿದ್ದು, ಮೂರನೇ ಹಂತದ ಕಾರ್ಯಚರಣೆಯಲ್ಲಿ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆಯಾದ ಬೆನ್ನಲ್ಲೇ ಇದೀಗ ವಿದ್ಯುತ್‌ ಟವ‌ರ್ ಸಿಕ್ಕಿರುವ ಸ್ಥಳದಲ್ಲೆ ಮಾನವ ಮೂಳೆ ಪತ್ತೆಯಾಗಿದೆ. ಯಾರಿಗೆ ಸೇರಿದ್ದು ಎನ್ನುವುದು ಡಿಎನ್ಎ ಪರೀಕ್ಷೆ ಬಳಿಕವೇ ಪತ್ತೆಯಾಗಬೇಕಿದೆ. ಶಿರೂರಿನ ಲೋಕೇಶ್ ನಾಯ್ಕ ಹಾಗೂ ಹೋಟೆಲ್ ನಡೆಸುತ್ತಿದ್ದ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ಮುಂದುವರಿಸಲಾಗಿದೆ.

ಶಾಸಕ ಸತೀಶ ಸೈಲ್ ಕೂಡ ಕಾರ್ಯಾಚರಣೆ ಸ್ಥಳದಲ್ಲಿ ನಿರಂತರವಾಗಿ ಇದ್ದರು. ‘ಇನ್ನೂ ಕೆಲ ದಿನಗಳ ಕಾಲ ಕಾರ್ಯಾಚರಣೆ ಮುಂದುವರೆಯಲಿದೆ. ಕಣ್ಮರೆಯಾಗಿರುವ ಇಬ್ಬರನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತೇವೆ’ ಎಂದು ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾರ್ಕಳದಲ್ಲಿ ದಾರುಣ ಘಟನೆ : ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಕಳೆದ ಜುಲೈ 16ರಂದು ಶಿರೂರು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಎರಡು ತಿಂಗಳ ಬಳಿಕ ನಡೆಸಿದ ಡ್ರಜ್ಜಿಂಗ್ ಕಾರ್ಯಾಚರಣೆಯ ವೇಳೆ ಗಂಗಾವಳಿ ನದಿಯಲ್ಲಿ ಲಾರಿ ಸಹಿತ ಚಾಲಕ ಅರ್ಜುನ್ ಶವವು ಸೆ.25ರಂದು ಪತ್ತೆಯಾಗಿತ್ತು. ಡಿಎನ್‌ಎ ಪರೀಕ್ಷೆಯಲ್ಲಿ ಶವ ಅರ್ಜುನ್‌ನದ್ದೇ ಎಂದು ದೃಢೀಕರಿಸಿದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತವು ಶವವನ್ನು ಪೊಲೀಸ್‌ ಸೂಕ್ತ ಬೆಂಗಾವಲಿನೊಂದಿಗೆ ಕೇರಳದ ಕೋಝಿಕ್ಕೂಡ್‌ನ ಅರ್ಜುನ್‌ನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಆ ಬಳಿಕ ಸೆ.28ರಂದು ಅರ್ಜುನ್ ಅವರ ಮೃತದೇಹವನ್ನು, ಅರ್ಜುನ್ ನಿರ್ಮಿಸಲು ಬಯಸಿದ್ದ ಮನೆಯ ಬಳಿಯಲ್ಲಿಯೇ ದಹನ ಮಾಡಲಾಗಿತ್ತು. ಅಂತ್ಯಸಂಸ್ಕಾರದ ವೇಳೆ ಭಾರೀ ಜನಸ್ತೋಮ ನೆರೆದಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X