ಶಿರೂರು ದುರಂತ | ಕಾಣೆಯಾದವರ ಪತ್ತೆ ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

Date:

Advertisements

ಯಾರೂ ಕೂಡ ಅರಗಿಸಿಕೊಳ್ಳಲಾಗದಂತಹ ಗುಡ್ಡ ಕುಸಿತ ಭೀಕರ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ರಾಷ್ಟ್ರೀಯ ಹೆದ್ದಾರಿ ನಲ್ಲಿ ಕಳೆದ ಜುಲೈ 16ರಂದು ನಡೆದಿದೆ.

ಘಟನೆ ನಡೆದು 11 ದಿವಸ ಕಳೆದಿದ್ದು, ಕಾರ್ಯಾಚರಣೆಯು ಯಾವುದೇ ನಿರೀಕ್ಷಿತ ಪ್ರಮಾಣದ ಬೆಳವಣಿಗೆ ನಡೆದಿಲ್ಲ. ಇದುವರೆಗೆ 8 ಜನರ ಮೃತದೇಹ ಪತ್ತೆಯಾಗಿದ್ದು, ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಮತ್ತು ಇತರ ಇಬ್ಬರು ವ್ಯಕ್ತಿಗಳು ಇನ್ನೂ ಪತ್ತೆಯಾಗಿಲ್ಲ.

ದುರಂತ ಸಂಭವಿಸಿದ ಸ್ಥಳದಲ್ಲಿ ಪೊಲೀಸ್ ಇಲಾಖೆ, ಸ್ಥಳೀಯರು, ಅಗ್ನಿಶಾಮಕದಳ, ರಕ್ಷಣಾ ತಂಡಗಳು, ಎನ್ ಡಿ ಆರ್ ಎಫ್, ಎಸ್‌ ಡಿ ಆರ್ ಎಫ್ ಪಡೆ ನಂತರ ಸೇನೆಯನ್ನೂ ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಾಚರಣೆ ಫಲ ಕಾಣದ ಹಿನ್ನೆಲೆಯಲ್ಲಿ ಜನರು ನಿರಾಶೆಗೆ ಒಳಗಾಗಿದ್ದಾರೆ.

Advertisements

ಇದೀಗ ಲಾರಿ ಇದೆ ಎಂದು ಶಂಕಿಸಲಾದ ಸ್ಥಳದಲ್ಲಿ ಲಾರಿ ಇರುವಿಕೆಯನ್ನು ಖಾತ್ರಿ ಪಡಿಸಲು ಮತ್ತು ಲಾರಿ ಒಳಗಡೆ ಇರಬಹುದು ಎಂದು ಶಂಕೆ ಇರುವ ಕೇರಳದ ಚಾಲಕ ಅರ್ಜುನ್ ಅವರನ್ನು ಹೊರತೆಗೆಯಲು ಮುಳುಗು ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆಯವರಿಗೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಂದ ಕರೆ ಹೋಗಿದೆ. ಈ ಸುದ್ದಿಯನ್ನು ಖುದ್ದು ಈಶ್ವರ್ ಮಲ್ಪೆ ತಂಡ ಈ ದಿನ.ಕಾಮ್ಗೆ ಖಾತ್ರಿ ಪಡಿಸಿದೆ.

6134138473754508416

ಈಶ್ವರ್ ಮಲ್ಪೆ ಮತ್ತು ತಂಡ ಮಧ್ಯರಾತ್ರಿ ಮಲ್ಪೆಯಿಂದ ಹೊರಟು, ಶನಿವಾರ ಬೆಳಗ್ಗೆ 7.30ಕ್ಕೆ ಶಿರೂರಿಗೆ ತಲುಪಿ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಈ ಕಾರ್ಯಾಚರಣೆಯು ನಾವೆಣಿಸಿದಷ್ಟು ಸುಲಭವಿಲ್ಲ. ಜೀವದ ಹಂಗನ್ನು ತೊರೆದು ನೀರಿನಾಳದಲ್ಲಿ ಹುಡುಕಾಟ ನಡೆಸಬೇಕಾಗಿದೆ. ಮಡಿಕೇರಿಯ ಕುಶಾಲನಗರದ ಕಾವೇರಿ ನದಿಯಲ್ಲಿ ಕಳೆದ ಐದು ದಿನಗಳಿಂದ ಹುಡುಕಾಟ ನಡೆಸುತ್ತಿದ್ದ ಮೃತದೇಹವನ್ನು ಪತ್ತೆಹಚ್ಚಿ ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡಿ ಈಗ ಶಿರೂರಿಗೆ ಬರುತ್ತಿದ್ದೇವೆ ಎಂದು ಈಶ್ವರ್ ಮಲ್ಪೆ ತಂಡ ಹೇಳಿಕೊಂಡಿದೆ.

ಈ ದಿನ.ಕಾಮ್ ಜೊತೆ ಮಾತನಾಡಿದ ಈಶ್ವರ ಮಲ್ಪೆ ತಂಡದ ರಕ್ಷಿತ್, “ಸದ್ಯ ನಮ್ಮ ತಂಡದಲ್ಲಿ ಎಂಟು ಮಂದಿ ಇದ್ದೇವೆ. ಈಶ್ವರ್ ಮಲ್ಪೆಯವರ ನೇತೃತ್ವದಲ್ಲಿ ನಮ್ಮ ತಂಡ ಹಲವೆಡೆ ಕಾರ್ಯಾಚರಣೆ ನಡೆಸಿದೆ. ಶಿರೂರಿಗೆ ಬರುವಂತೆ ನಮಗೂ ಕರೆ ಬಂದಿದೆ. ಬೆಳಗ್ಗೆ 7.30ರ ಸುಮಾರಿಗೆ ಘಟನಾ ಸ್ಥಳಕ್ಕೆ ತೆರಳಿ, ಅಲ್ಲಿದ್ದವರಿಂದ ಎಲ್ಲ ಮಾಹಿತಿಗಳನ್ನು ಪಡೆದ ನಂತರ ನಮ್ಮ ಕಾರ್ಯಾಚರಣೆಯು ನಡೆಯಲಿದೆ. ಆದಷ್ಟು ಬೇಗನೆ ಕಾರ್ಯಾಚರಣೆ ಯಶಸ್ವಿಯಾಗಲು ಜನರ ಪ್ರಾರ್ಥನೆ ಇರಲಿ” ಎಂದು ಹೇಳಿದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X