ಉಡುಪಿ | ಟಿಪ್ಪರ್ ಲಾರಿ ಪಲ್ಟಿ, ಚಾಲಕ ಸಾವು

Date:

Advertisements

ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ‌ಯ ಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಆಕಸ್ಮತ್ತಾಗಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ನಡೆದ ಬಳಿಕ ಸ್ಥಳಕ್ಕೆ ಧಾವಿಸಿದ ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಗುರುರಾಜ್ ಭಟ್, ಸುಧಾಕರ ಪೂಜಾರಿ, ಕೃಷ್ಣ ಆಚಾರ್ಯ ಹಾಗೂ ಶಿರ್ವ ಪೊಲೀಸ್ ಸಿಬ್ಬಂದಿಯವರ ಸಹಕಾರದೊಂದಿಗೆ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಚಾಲಕನ ಮೃತ ದೇಹವನ್ನು ಹೊರತೆಗೆದು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಕಳಿಸಲಾಯಿತು. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X