ಶಿವಮೊಗ್ಗ | ಸೊರಬದ ಹಿರೇಶಕುನ ಗ್ರಾಮದಲ್ಲಿ ಹೆಡೆಗೆ ಜಾತ್ರೆ ಸಂಪನ್ನ

Date:

Advertisements

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಪುರಸಭಾ ವ್ಯಾಪ್ತಿಯ ಹಿರೇಶಕುನ ಗ್ರಾಮದಲ್ಲಿ ಆರಿದ್ರಾ ಮಳೆಯಲ್ಲಿ ಜರುಗುವ ಹೆಡೆಗೆ ಜಾತ್ರೆಯು ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು.

ಗ್ರಾಮದಲ್ಲಿ ೨೩ ವರ್ಷಗಳಿಂದ ನಿಂತು ಹೋಗಿದ್ದ ಹೆಡೆಗೆ ಜಾತ್ರಾ ಸಂಪ್ರದಾಯವನ್ನು ಈ ವರ್ಷ ಗ್ರಾಮಸ್ಥರೆಲ್ಲರೂ ಬೆಳಗ್ಗೆಯಿಂದ ಸಂಜೆಯವರೆಗೂ ಗ್ರಾಮ ದೇವತೆಗಳಿಗೆ ಪೂಜೆ ಸಲ್ಲಿಸಿ ವಿವಿಧ ರೀತಿಯ ಸಾಂಪ್ರದಾಯಕ ಉಡುಗೆಗಳನ್ನು ತೊಟ್ಟು ಪೂಜೆ ಸಲ್ಲಿಸುವ ಬುಟ್ಟಿಗೆ ತೋರಣಗಳನ್ನು ಕಟ್ಟಿ ಶೃಂಗಾರ ಮಾಡಿ ದೇವತೆಗಳಿಗೆ ನೈವೇದ್ಯ ಇಟ್ಟುಕೊಂಡು ಗ್ರಾಮದ ಮಾರಿಕಾಂಬ ಹಾಗೂ ದುರ್ಗಾಂಬ ದೇವಾಲಯಗಳಲ್ಲಿ ಪೂಜಿಸಿ,

ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿ ಗ್ರಾಮದ ಹಿರಿಯರು ಮಕ್ಕಳು ನಾರಿಯರು ಸೇರಿದಂತೆ ನೂರಾರು ಜನರು ಪಾಲ್ಗೊಂಡು ಗ್ರಾಮದ ಹೊರ ಬೀಡುವಿನಲ್ಲಿ ಪೂಜಾ ಕಂಕಾರ್ಯಗಳನ್ನ ಸಂಪನ್ನಗೊಳಿಸಿದರು.

Advertisements

ಈ ಸಂದರ್ಭದಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷ ಗುರುಮೂರ್ತಿ, ಉಮೇಶ್, ರೇವಣ್ ಕುಮಾರ್, ಹನುಮಂತಪ್ಪ, ರಾಮಪ್ಪ, ಪರಶುರಾಮ ಸಣ್ಣಬೈಲು, ಮೋಹನ್ ಸುರಭಿ, ಢಾಕಪ್ಪ, ಗೋಪಾಲ್, ಚಿನ್ನಪ್ಪ, ಲಿಂಗರಾಜ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X