ಶಿವಮೊಗ್ಗ | ʼದಸಂಸʼ ಹೆಸರು ದುರುಪಯೋಗದ ವಿರುದ್ಧ ಕ್ರಮ: ಗುರುಮೂರ್ತಿ

Date:

Advertisements

ದಲಿತ ಸಂಘರ್ಷ ಸಮಿತಿ (ದಸಂಸ)ಯ ಹೆಸರು ಬಳಸಿಕೊಳ್ಳಲು ನಾವು ಮಾತ್ರ ಅರ್ಹರು. ಆ ಹೆಸರನ್ನು ಇತರೆ ದಲಿತ ಹೋರಾಟ ಸಂಘಟನೆಗಳು ಬಳಸಿಕೊಳ್ಳಬಾರದೆಂದು ದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ತಾಕೀತು ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮಗೆ ಮಾತ್ರ ದಸಂಸ ಬಳಸಿಕೊಳ್ಳಲು ಎಂದು ನ್ಯಾಯಾಲಯ ಆದೇಶಿದೆ. ದಲಿತ ಸಂಘರ್ಷ ಸಮಿತಿ ಹೆಸರನ್ನು ಹಲವು ಮಂದಿ ತಮ್ಮದು ಎಂಬಂದೆ ಬಿಂಬಿಸಿಕೊಳ್ಳುತ್ತಿದ್ದಾರೆ. ಸಂಘಟನೆಯ ಹೆಸರು ಬಳಸಬಾರದು. ಬಳಸಿದಲ್ಲಿ ರಾಜ್ಯಾದ್ಯಂತ ಪ್ರಕರಣ ದಾಖಲಿಸಲಾಗುವುದು. ಹೈಕೋರ್ಟ್ ನಲ್ಲಿ ಕೆವಿಟ್ ಹಾಕಲಾಗುವುದು” ಎಂದು ಎಚ್ಚರಿಸಿದ್ದಾರೆ.

ಈ ಕುರಿತು ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ವಕೀಲ ಸೀತಾರಾಮ್ ಮಾತನಾಡಿ, “ದಲಿತ ಸಂಘರ್ಷ ಸಮಿತಿ ಹೆಸರನ್ನ ಪ್ರೊ.ಕೃಷ್ಣಪ್ಪ 74/75 ಎಂದು ನೋಂದಣಿ ಮಾಡಿಸಿದ್ದರು. ಗುರುಮೂರ್ತಿ 2008 ರವರೆಗೆ ಆಡಿಟ್ ಮಾಡಿಸುತ್ತಿದ್ದರು. ಸತ್ಯ ಮತ್ತು ಇತರರು ಡಿಆರ್‌ಗೆ ಪತ್ರ ಬರೆದು ತಕರಾರು ಮಾಡಿದ್ದರು. ತಕರಾರಿಗೆ ಸಮಿತಿ ರಚಿಸಲಾಗಿತ್ತು. ಸಮಿತಿಯು ಸಾಧ್ಯವಿಲ್ಲದ ಪ್ರಕರಣ ಎಂದು ಬರೆದು, ನ್ಯಾಯಾಲಯದಲ್ಲಿ ಫೈಟ್ ಮಾಡಲು ಸೂಚಿಸಿತ್ತು. ಗುರುಮೂರ್ತಿ ಅವರು ಭದ್ರಾವತಿಯ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಭದ್ರಾವತಿಯ ನ್ಯಾಯಾಲಯ ಗುರುಮೂರ್ತಿ ಪರ ನ್ಯಾಯ ಪ್ರಕಟಿಸಿದ್ದರು. ಸತ್ಯರವರು ಕೆಳ ನ್ಯಾಯಾಲಯದ ಆದೇಶವನ್ನ ಪ್ರಶ್ನಿಸಿ ಹೈಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ ಕಂಡಿಷನ್ ಮೇಲೆ ಸ್ಟೇ ನೀಡುತ್ತದೆ. ಕಂಡಿಷನ್ ಪ್ರಕಾರ ಗುರುಮೂರ್ತಿಗೆ ಸಂಘಟನೆ ಹೆಸರು ಬಳಸಿಕೊಳ್ಳಲು ಮಾತ್ರ ಅಧಿಕಾರವಿದ್ದು, ಇತರರು ಬಳಸಿಕೊಳ್ಳದಂತೆ ಸೂಚಿಸಿತ್ತು” ಎಂದರು.

Advertisements

“ನಂತರ ಹೈಕೋರ್ಟ್ ವಿಚಾರಣೆ ನಡೆಸಿ ಕೆಳ ನ್ಯಾಯಾಲಯದ ಆದೇಶವನ್ನ ಎತ್ತಿಹಿಡಿದಿದೆ. ಇದರ‌ ಮಧ್ಯೆ ಸತ್ಯರವರು ಭದ್ರಾವತಿಯಲ್ಲಿ ದಲಿತ ಸಂಘರ್ಷ ಸಮಿತಿ ಹೆಸರಿನಲ್ಲಿ ಕಾರ್ಯಕ್ರಮ ನಡೆಸಿದ್ದರು. ಡಿವೈಎಸ್‌ಪಿ ಆಕ್ಷೇಪಣಾರ್ಹ ಹಿಂಬರಹ ಕೊಟ್ಟು ಈ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟಿದ್ದರು. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ಶಿವಮೊಗ್ಗ | ಮೀಟರ್ ಬಳಸದ ಆಟೋಗಳು; ಕಣ್ಮುಚ್ಚಿ ಕುಳಿತ ಪೊಲೀಸರು

ದಲಿತ ಸಂಘರ್ಷ ಸಮಿತಿಯ ಭದ್ರಾವತಿ ವಕೀಲ ಶಿವಕುಮಾರ್, ದಸಂಸ ಜಿಲ್ಲಾ ಸಂಚಾಲಕ ಏಳುಕೋಟಿ, ಬೊಮ್ಮನ್ ಕಟ್ಟೆ ಕೃಷ್ಣಪ್ಪ, ಮೂಗೂರು ಪರಶುರಾಮ್, ಚಿಕ್ಕಮರಡಿ ರಮೇಶ್, ನಾಗರಾಜ್, ದೌರ್ಜನ್ಯ ಸಮಿತಿ ಸದಸ್ಯ ಹನುಮಂತಪ್ಪ ಯಡವಾಲ, ಹರಗೆ ರವಿ, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X