ಶಿವಮೊಗ್ಗ | ಆ. 16 ರಿಂದ 28ರ ವರೆಗೆ : “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2”

Date:

Advertisements

ಶಿವಮೊಗ್ಗ, ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಚಲನ ಚಿತ್ರಗೀತೆಗಳ ಗಾಯನ ಸ್ಪರ್ಧೆಯನ್ನು “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2” ಎಂಬ ಹೆಸರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಸಂಘದ ಅಧ್ಯಕ್ಷ ಬಿ ಎ ಮಂಜುನಾಥ , ಕಾರ್ಯಕ್ರಮದ ಗಾಯಕ-ಗಾಯಕಿಯರ ಆಡಿಶನ್ ಆ. 16 ರಂದು ಲಯನ್ಸ್ ಕ್ಲಬ್, ಶುಗರ್ ಟೌನ್, ಇಲ್ಲಿ ನಡೆಯಲಿದೆ.

ಆಡಿಶನ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ಸೆಮಿಫೈನಲ್ ರೌಂಡ್ ‌ಆ. 17-08-2025 ರಂದು ಲಯನ್ಸ್ ಕ್ಲಬ್, ಜೆ.ಟಿ.ಎಸ್. ಸ್ಕೂಲ್ ಪಕ್ಕ, ಶುಗರ್ ಟೌನ್. ಇಲ್ಲಿ ಸೆಮಿಫೈನಲ್‌ ನಡೆಯಲಿದೆ ಎಂದರು.

Advertisements

ಸೆಮಿಫೈನಲ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ರಾಜ್ಯ ಮಟ್ಟದ ಚಲನಚಿತ್ರಗೀತೆಗಳ ಫೈನಲ್ ಮತ್ತು ಗ್ರಾಂಡ್ ಫಿನಾಲೆ ಸ್ಪರ್ಧೆಯು ಆ. 24 ರ ಭಾನುವಾರ ಬಸವೇಶ್ವರ ಸಭಾ ಭವನ ಸಿದ್ಧರೂಢನಗರ, ಭದ್ರಾವತಿಯಲ್ಲಿ ನಡೆಯಲಿದೆ. ವಿಜೇತರಾದವರಿಗೆ ಪ್ರಥಮ ಬಹುಮಾನ 25000/- ನಗದು ಮತ್ತು ಪಾರಿತೋಷಕ. ದ್ವೀತಿಯ ಬಹುಮಾನ 15000/- ನಗದು ಮತ್ತು ಪಾರಿತೋಷಕ. ತೃತೀಯ ಬಹುಮಾನ 10000/- ನಗದು ಮತ್ತು ಪಾರಿತೋಷಕ. ಸಮಾಧಾನಕರ ಬಹುಮಾನ 2000/- ಭಾಗವಹಿಸಿದ ಎಲ್ಲಾ ಗಾಯಕ ಗಾಯಕಿಯರಿಗೆ ಸರ್ಟಿಫೀಕೆಟ್‌ಗಳನ್ನು ನೀಡಕಾಗುವುದು ಎಂದರು.

ಇದೇ ಕಾರ್ಯಕ್ರಮದಲ್ಲಿ ಇಬ್ಬರು ಹಿರಿಯ ಕಲಾವಿದರಿಗೆ ದಿ॥ ಜಯಶೀಲನ್ ರಾಜ್ಯಪ್ರಶಸ್ತಿ ಮತ್ತು ದಿ| ಗೀತಾಂಜಲಿ ಶ್ರೀನಿವಾಸ್‌ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಹಾಗೂ ಸಂಘದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ, ಕಲಾವಿದರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ವೈ ಕೆ ಹನುಮಂತಯ್ಯ, ಚರಣ್ ಕವಾಡ್, ಚಿದಾನಂದ, ಪ್ರಶಾಂತ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X