ಶಿವಮೊಗ್ಗ | ಕಾಂಗ್ರೆಸ್ ನಿಂದ ಮತಗಳ್ಳತನದ ಅರಿವು, ಜನಜಾಗೃತಿ : ವಿನಯಕುಮಾರ್ ಸೊರಕೆ

Date:

Advertisements

ಶಿವಮೊಗ್ಗ, ಮತಗಳತನ ವಿರುದ್ಧ ರಾಜ್ಯದ ಜನರಿಗೆ ಅರಿವು ಮೂಡಿಸುವುದರ ಜೊತೆಗೆ ಪಕ್ಷದ ಜನಪರ ಕಾರ್ಯಕ್ರಮಗಳನ್ನು ತಿಳಿಸುವ ಸಲುವಾಗಿ ಈಗ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಪ್ರವಾಸ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಳ್ಳತನದ ವಿರುದ್ಧದ ರಾಹುಲ್ ಗಾಂಧಿ ಅವರ ಹೋರಾಟ ಹೊಸ ಇತಿಹಾಸ ಸೃಷ್ಟಿಸಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿರುವುದು ಹೋರಾಟಕ್ಕೆ ಸಿಕ್ಕ ಜಯ ಆಗಿದೆ. , ಮತಗಳ್ಳತನ ಕೇವಲ ಕರ್ನಾಟಕ, ಬಿಹಾರ ಅಥವಾ ಮಹಾರಾಷ್ಟ್ರಕ್ಕೆ ಮಾತ್ರ ಸಿಮೀತವಾಗಿಲ್ಲ. ಇಡೀ ದೇಶಕ್ಕೆ ವ್ಯಾಪಿಸಿದೆ.

ಮಹಾರಾಷ್ಟ್ರ ದಲ್ಲಿ ವಿಧಾನ ಸಭೆ ಚುನಾವಣೆ ವೇಳೆ ೧ ಲಕ್ಷದಷ್ಟು ಹೆಚ್ಚುವರಿ ಇದ್ದ ವೋಟ ಸಂಖ್ಯೆ ಪಾರ್ಲಿಮೆಂಟ್ ಚುನಾವಣೆ ವೇಳೆ ದುಪ್ಪಟ್ಟಾಗುತ್ತದೆ. ಆದ್ದರಿಂದಲೇ ಮತ ಗಳ್ಳತನದ ಬಗ್ಗೆ ದೊಡ್ಡ ಅನುಮಾನವೇ ಮೂಡಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪಕ್ಷದ ಕೆಲಸವಾಗಿದೆ ಎಂದರು.

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ತಾನು ಕಳೆದ ವಿಧನಸಭಾ ಚುನಾವಣೆಯಲ್ಲಿ ಪಕ್ಷದ ಚುನಾವಣಾ ವೀಕ್ಷಕನಾಗಿದ್ದೆ. ಆ ವೇಳೆ ಒಂದು ಅಪಾರ್ಟ್ ಮೆಂಟ್‌ಗೆ ಹೋದರೆ ಅಲ್ಲಿ ಒಳಹೋಗುವುದಕ್ಕೆ ನಮಗೆ ಬಿಡಲಿಲ್ಲ.

ಇವೆಲ್ಲವನ್ನು ಜನರಿಗೆ ತಿಳಿಸುವ ಸಲುವಾಗಿ ವರದಿ ತಯಾರಿಸಲು ಸೂಚಿಸಿದ್ದರು. ಆ ಪ್ರಕಾರ ನಾವು ಸತ್ಯ ಶೋಧನೆ ನಡೆಸಿ, ವರದಿ ತಯಾರಿಸಿ ಎಐಸಿಸಿಗೆ ಸಲ್ಲಿಸಿದ್ದೆವು. ಅಲ್ಲಿಂದ ಮತಗಳ್ಳತನ ಹೊರಬಂದಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್, ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ, ಡಾ|| ಸಂತೋಷ್, ವೀಕ್ಷಕ ಆನಂತ್, ಸೂಡಾ ಅಧ್ಯಕ್ಷ ಹೆಚ್. ಎಸ್.ಸುಂದರೇಶ್, ಪದಾಧಿಕಾರಿಗಳಾದ ಕಲಗೋಡು ರತ್ನಾಕರ್, ಎಸ್.ಪಿ. ಶೇಷಾದ್ರಿ, ಇಕ್ಕೇರಿ ರಮೇಶ್, ಇಸ್ಮಾಯಿಲ್ ಖಾನ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ರಮೇಶ್ ಶಂಕರ್ ಘಟ್ಟ, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಉಪಸ್ಥಿತರಿದ್ದರು..

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X