ಶಿವಮೊಗ್ಗ | ಒಳ “ಮೀಸಲಾತಿ ವರ್ಗಿಕರಣ ವಿರೋಧಿಸಿ” ಸೆಪ್ಟೆಂಬರ್ 12 ರಿಂದ ಬಂಜಾರರ ಅನಿರ್ದಿಷ್ಟ ಧರಣಿ

Date:

Advertisements

“ಶಿವಮೊಗ್ಗ:ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ” ಸೆಪ್ಟೆಂಬರ್ 12 ರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ (ಲಂಬಾಣಿ) ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಅನಿರ್ದಿಷ್ಟ ಧರಣಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಅಶೋಕ್ ನಾಯ್ಕ್, ಅಂದು ಬೆಳಿಗ್ಗೆ 10.00 ಗಂಟೆಗೆ ಅನಿರ್ದಿಷ್ಟ ಧರಣಿ ಆರಂಭವಾಗಲಿದೆ ಎಂದರು.

ಇದರಲ್ಲಿ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬದ ವಿವಿಧ ಗ್ರಾಮಗಳ ಬಂಜಾರರು ಪಾಳಿ ಪ್ರಕಾರ ಭಾಗವಹಿಸುವರು ಎಂದರು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ರಚನೆಯಾಗಿದ್ದ ನಿವೃತ್ತ ನ್ಯಾ. ನಾಗಮೋಹನದಾಸ ಏಕಸದಸ್ಯ ಆಯೋಗವು ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನೆ ಕೆಲವು ಬದಲಾವಣೆಯೊಂದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವುದು ಬಂಜಾರ ಸಮುದಾಯ ಸೇರಿದಂತೆ ಇತರೆ ಸಮುದಾಯಗಳಲ್ಲಿ ಆತಂಕವನ್ನುಂಟು ಮಾಡಿದೆ ಎಂದರು.

ಸುಪ್ರೀಂ ಕೋರ್ಟಿನ ಮಾನದಂಡಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಸಿದ್ಧಪಡಿಸಲಾಗಿರುವ ನಾಗಮೋಹನದಾಸ ವರದಿಯು ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ಮುಂದುವರೆದ ಭಾಗದಂತಿದೆ. ಈ ವರದಿಯ ಸಾರಾಂಶಗಳು ವಾಸ್ತವಿಕ ಅಂಕಿ ಸಂಖ್ಯೆಗಳಿಂದ ದೂರವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ, ಶಿಕ್ಷಣ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಅಂಕಿ ಅಂಶಗಳು ದಮನಿತ ಸಮುದಾಯಗಳ ಅನುಮಾನಕ್ಕೆ ಕಾರಣವಾಗಿದೆ ಎಂದರು.

ಈ ಅಂಕಿ ಸಂಖ್ಯೆಗಳು ಯಾವ ಮೂಲದಿಂದ ಪಡೆಯಲಾಗಿದೆ ಎಂಬುದನ್ನು ಆಯೋಗ ಸ್ಪಷ್ಟಪಡಿಸಬೇಕಿದೆ. ನಾಗಮೋಹನದಾಸರವರು ವರದಿಯಲ್ಲಿ ತಿಳಿಸಿರುವಂತೆ ಸರ್ಕಾರದ ಕೆಲವು ಇಲಾಖೆಗಳು ಪರಿಶಿಷ್ಟ ಜಾತಿಯ ಅಂಕಿ ಸಂಖ್ಯೆಗಳು ನೀಡಿರುವುದಿಲ್ಲ, ಕೆಲವು ಕುಟುಂಬಗಳು ನಗರ ಹಾಗೂ ಗ್ರಾಮದಲ್ಲಿ ಅಲಭ್ಯತೆಯ ಕಾರಣಕ್ಕೆ ಸಮೀಕ್ಷೆ ಅಪೂರ್ಣವಾಗಿದೆ ಎಂದು ತಿಳಿಸಿರುವಾಗ, ಸರ್ಕಾರ ಈ ಅಪೂರ್ಣ ವರದಿಯನ್ನೇ ಸಣ್ಣ ಪುಟ್ಟ ಬದಲಾವಣೆಯೊಂದಿಗೆ ಜಾರಿಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು.

ನಾಗಮೋಹನದಾಸ ವರದಿಯಲ್ಲಿರುವ 324, 325, 326 ನೇ ಪುಟದಲ್ಲಿ ಇಡೀ ಸಮೀಕ್ಷೆಯ ಫಲಿತಾಂಶವನ್ನು ವಿಶ್ಲೇಷಿಸಿ, ಸಿದ್ಧಪಡಿಸಿರುವ ಕೋಷ್ಟಕದಲ್ಲಿ 26 ವಿವಿಧ ವಿಷಯಗಳ ಮಾನದಂಡಗಳ ಮೇಲೆ ಬೆಳಕು ಚೆಲ್ಲಲಾಗಿದೆ, ಆಯಾ ಜಾತಿಗಳ ಪ್ರಗತಿಯ ಮೇಲೆ ಸಿದ್ಧಪಡಿಸಿರುವ 23 ವಿಷಯವಾರು ಮಾನದಂಡಗಳಲ್ಲಿ ‘ಡಿ’ ಗುಂಪಿನಲ್ಲಿ ಬರುವ ಲಂಬಾಣಿ ಮತ್ತು ಇತರೆ ಸಮುದಾಯ ಕೇವಲ 6 ವಿಷಯಗಳಲ್ಲಿ ಮಾತ್ರ ತುಸು ಮುಂದಿವೆ ಎಂದು ಕಾಣಿಸಲಾಗಿದೆ. ಉಳಿದ 17 ವಿಷಯಗಳಲ್ಲಿ ‘ಸಿ’ ಗುಂಪಿಗಿಂತ ತುಂಬಾ ಹಿಂದುಳಿದಿದೆ ಎಂದು ಅಂಕಿ ಸಂಖ್ಯೆಗಳ ಮೂಲಕ ತೋರಿಸಲಾಗಿದೆ. ವಿಷಯ ಹೀಗಿರುವಾಗ ‘ಡಿ’ ಗುಂಪಿಗಿಂತ ‘ಸಿ’ ಗುಂಪಿನ ಸಮುದಾಯಕ್ಕೆ ಶೇಕಡವಾರು ಹೆಚ್ಚಿನ ಮೀಸಲಾತಿ ನೀಡಿರುವುದು ಯಾವ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಹುನ್ನಾರವಿದೆ ಎಂಬುದನ್ನು ನಾಗಮೋಹನ್‌ದಾಸರವರೇ ಹೇಳಬೇಕಿದೆ ಎಂದರು.

ಯಾವುದೇ ದೃಷ್ಟಿಕೋನದಿಂದಲೂ ಹೊಂದಾಣಿಕೆ ಆಗದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದ ‘ಸಿ’ ವರ್ಗದವರೊಂದಿಗೆ ಸೇರಿಸಿ ಅಲೆಮಾರಿಗಳಿಗೆ ಮೀಸಲಾತಿಯಿಂದ ವಂಚನೆ ಮಾಡಲು ಮುಂದಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಹಲವು ಆಯೋಗಗಳ ವರದಿಯಲ್ಲಿ ತಿಳಿಸಿರುವಂತೆ ಅಲೆಮಾರಿಗಳಿಗೂ ಶೇ.1 ರಷ್ಟು ಮೀಸಲಾತಿ ನೀಡಬೇಕು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ ಸಿ ವರ್ಗದಲ್ಲಿ ಬರುವ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದವರಿಗೂ ಶೇ. 6 ರಷ್ಟು ಮೀಸಲಾತಿ ನಿಗದಿಗೊಳಿಸಲು ಸರ್ಕಾರ ಮುಂದಾಗಬೇಕಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

Download Eedina App Android / iOS

X