ಶಿವಮೊಗ್ಗ | ಸ್ವಾತಂತ್ರ್ಯ ಹೋರಾಟದ ಧೃವತಾರೆ ಭಗತ್ ಸಿಂಗ್ : ಶಾಸಕ ಚನ್ನಬಸಪ್ಪ

Date:

Advertisements

ಶಿವಮೊಗ್ಗ, ಸ್ವಾತಂತ್ರ್ಯ ಹೋರಾಟದ ಧೃವತಾರೆಯಾಗಿದ್ದ ಭಗತ್ ಸಿಂಗ್ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯುವಕರನ್ನು ಒಗ್ಗೂಡಿಸಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿವಮೊಗ್ಗ ಶಾಸಕ ಚನ್ನಬಸಪ್ಪ ಹೇಳಿದ್ದಾರೆ.

ಶಿವಮೊಗ್ಗದ ಗಾಂಧಿ ಬಜಾರ್ ನ ಉಪ್ಪಾರ ಕೇರಿಯಲ್ಲಿ, ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕ್ರಾಂತಿಕಾರಿ ಭಗತ್ ಸಿಂಗ್ ಅವರ 118 ಜನುಮ ದಿನಾಚರಣೆ ಕಾರ್ಯಕ್ರಮಕ್ಕೆ ಭಗತ್ ಸಿಂಗ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿ ಅವರು ಮಾತನಾಡಿದರು.

1002317379

ಭಗತ್ ಸಿಂಗ್ ಎಂಬ ಕಿಚ್ಚು ಎಲ್ಲರಲ್ಲೂ ಅದರಲ್ಲೂ ಯುವಕರ ಮನದಲ್ಲಿ ಮೂಡಬೇಕು. ಅವರ ವಿಚಾರಗಳನ್ನು ವಿದ್ಯಾರ್ಥಿ ಹಾಗೂ ಯುವ ಜನರು ಸ್ಫೂರ್ತಿಯಾಗಿ ತಗೆದುಕೊಳ್ಳಬೇಕು ಎಂದರು.

ಕ್ರಾಂತಿಕಾರಿಯಾಗಿದ್ದ ಭಗತ್ ಸಿಂಗ್ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ರು. ದೇಶದ ವಿರುದ್ಧವಾಗಿ ಯಾರೆ ಬಂದರೂ ಅವರನ್ನು ಸದೆಬಡಿಯುವಂತೆ ಅಂದಿನ ಕಾಲದಲ್ಲೇ ಕರೆ ನೀಡಿದ್ದರು ಎಂದರು.

ಭಗತ್ ಸಿಂಗ್ ಎಂದರೆ ರೋಮಾಂಚನಗೊಳ್ಳುವ ಒಂದು ದೊಡ್ಡ ಶಕ್ತಿ. ಭಾರತದ ಸ್ವಾತಂತ್ರ್ಯ ಚಳವಳಿಗೆ ಯುವಕರ ಪಡೆಯನ್ನು ಒಗ್ಗೂಡಿಸಿ ಪ್ರಮುಖ ಪಾತ್ರವಹಿಸಿದ ಭಗತ್ ಸಿಂಗ್ ಇಂದಿನ ಅವ್ಯವಸ್ಥೆ, ಅನ್ಯಾಯದ ವಿರುದ್ಧವಾಗಿ ಸ್ಫೂರ್ತಿಯಾಗಬೇಕಿದೆ ಎಂದು ತಿಳಿಸಿದರು.

1002317380

ಆ ನಿಟ್ಟಿನಲ್ಲಿ ವಿದ್ಯಾರ್ಥಿ-ಯುವಜನರ ಆಲೋಚನೆ ಮಾಡಬೇಕು ಎಂದು ಚನ್ನಬಸಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಜನುಮ ದಿನಾಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಬಳಿಕ ನೂರಾರು ಜನರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್, ಮಾಜಿ ಸೈನಿಕರಾದ ಬಾನೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರಾದ ಅರುಣಗಿರಿ, ಮಂಜು ಆರ್.ಟಿ.ಆರ್. ರಘು ಗೌಡ, ಸಂಜು, ಶಶಿ ಕುಮಾರ್ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X