ಶಿವಮೊಗ್ಗ | ಮಾಜಿ ಸಚಿವ ಬೇಗಾನೆ ರಾಮಯ್ಯರಿಗೆ ಗಣ್ಯರಿಂದ ಅಂತಿಮ ನಮನ

Date:

Advertisements

ಅನಾರೋಗ್ಯ ಕಾರಣದ ಹಿನ್ನಲೆಯಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ (83) ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದು ಅವರ ಪಾರ್ಥೀವ ಶರೀರವನ್ನ ಶಿವಮೊಗ್ಗದ ಹೊಸಳ್ಳಿಯ ಸೀತಾ ಪಾರಂ ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಗುಂಡೂರಾವ್ ಅವರು ಮುಖ್ಯಮಂತ್ರಿ ಆಗಿದ್ದಾಗ ಪಂಚಾಯತ್ ರಾಜ್ ಸಚಿವರಾಗಿ ಬೇಗಾನೆ ರಾಮಯ್ಯ ಸೇವೆ ಸಲ್ಲಿಸಿದ್ದರು. ಶೃಂಗೇರಿಯಿ ಶಾಸಕರಾಗಿ ಗೆದ್ದು ಬೇಗಾನೆ ರಾಮಯ್ಯ ಸಚಿವರಾಗಿದ್ದರು.

ಇಂದು ಸಚಿವ ಮಧು ಬಂಗಾರಪ್ಪ ಮತ್ತು ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದ‌ರ್ ಅಂತಿಮ ದರ್ಶನ ಪಡೆದರು. ಸಚಿವ ಮಧು ಬಂಗಾರಪ್ಪನವರ ಎದುರೆ ತ್ರಿವರ್ಣ ಧ್ವಜ ಹೊದಿಸಿ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಹೇಳಲಾಗಿದೆ.

1001524029

ರಾಮಯ್ಯ ಅವರ ಪುತ್ರಿ ಆರತಿ ಕೃಷ್ಣ ಮತ್ತು ಕುಟುಂಬದವರಿಗೆ ಸಭಾಧ್ಯಕ್ಷರು ಸಾಂತ್ವನ ಹೇಳಿದ್ದಾರೆ. ಅಗಲಿದ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರಿಗೆ ಸಕಲ ಸರ್ಕಾರಿ ಗೌರವದೊಂದಗೆ ಅಂತಿಮ ನಮನ ಸಲ್ಲಿಸಲಾಯಿತು.

ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿ ಖಾದ‌ರ್ ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹಾಗೂ ವಿನಯ್ ಗುರೂಜಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X