ಶಿವಮೊಗ್ಗ | ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Date:

Advertisements

ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅ. 15 ರಂದು ಬೆಳಗ್ಗೆ 9.00 ರಿಂದ ಕುವೆಂಪು ರಂಗಮಂದಿರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ ಹಾಗೂ ಕವಿತೆ ಬರೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ಭಾಗವಹಿಸುವ ಯುವಕ/ಯುವತಿಯರು 15 ರಿಂದ 29 ವರ್ಷ ವಯೋಮಿತಿಯೊಳಗಿದ್ದು, ನೋಂದಣಿ ಸಮಯದಲ್ಲಿ ಆಧಾರ್ ಕಾರ್ಡ್/ಎಸ್.ಎಸ್.ಎಲ್.ಸಿ. ಅಂಕಪಟ್ಟಿ/ ಜನನ ಪ್ರಮಾಣ ಪತ್ರ ಇವುಗಳಲ್ಲಿ ಯಾವುದಾದೊಂದು ದಾಖಲೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಶಿವಮೊಗ್ಗ ಜಿಲ್ಲೆಯಲ್ಲಿ ವಾಸವಾಗಿರುವ ದೃಢೀಕರಣ ಪತ್ರವನ್ನು ತರಬೇಕು. ರಾಷ್ಟçಮಟ್ಟದ ಯುವಜನೋತ್ಸವದಲ್ಲಿ ಸತತವಾಗಿ 3 ವರ್ಷಗಳು ಭಾಗವಹಿಸಿದ್ದು ಅಥವಾ ಒಂದು ಬಾರಿ ಪದಕ ಪಡೆದಿದ್ದರೆ ಅಂತಹ ಯುವಜನರು ಭಾಗವಹಿಸುವಂತಿಲ್ಲ.

ಆಸಕ್ತರು ಅ. 14 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಕಚೇರಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಕಚೇರಿಯನ್ನು ಸಂಪರ್ಕಿಸುವುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು ...

ತುಮಕೂರು | ವಿಧಾನಸಭೆ, ಲೋಕಸಭೆಯಲ್ಲಿ ಒಬಿಸಿಗೂ ಮೀಸಲಾತಿ ಬೇಕು : ಕೆ.ಎನ್.ರಾಜಣ್ಣ

ಪರಿಶಿಷ್ಟ ಜಾತಿ-ಪಂಗಡದವರಿಗೆ ಇರುವಂತೆ ಚುನಾವಣೆಗಳಲ್ಲಿ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರಗಳಲ್ಲಿ ಹಿಂದುಳಿದ...

ಬೀದರ್‌ | ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಲಿ : ರಾಜಕುಮಾರ್‌ ಅಲ್ಲೂರೆ

ಈಗ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಬೇಕು ಎಂದು...

ಹಾವೇರಿ | ಡಿಜಿಟಲ್ ವಂಚನೆ ಬಗ್ಗೆ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು: ಮುಹಮ್ಮದ್ ಇಸ್ಮಾಯಿಲ್

"ಸೈಬರ್ ವಂಚನೆಯಿಂದ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂಪಾಯಿ ಜನರು ವಂಚನೆಗೆ ಒಳಗಾಗುತ್ತಿದ್ದಾರೆ....

Download Eedina App Android / iOS

X