ಶಿವಮೊಗ್ಗ | ಜಿಲ್ಲಾಧಿಕಾರಿಗಳಿಂದ, ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಜಾಗೃತಿ ಅಭಿಯಾನದ ಪೋಸ್ಟರ್ ಬಿಡುಗಡೆ

Date:

ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು. ಆಗಸ್ಟ್ 25 ರಿಂದ 15 ಸೆಪ್ಟೆಂಬರ್ 2025 ವರೆಗೆ ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

ಈ ಸಂಬಂಧ ಇಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಡಿಜಿಟಲ್ ಸ್ವಾತಂತ್ರ್ಯ ರಾಜ್ಯವ್ಯಾಪಿ ಅಭಿಯಾನದ ಪೋಸ್ಟರನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಬಿಡುಗಡೆ ಬಿಡುಗಡೆಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...
1002123957

ಡಿಜಿಟಲ್ ಸ್ವಾತಂತ್ರ್ಯ- ಸೈಬರ್ ವಂಚನೆ, ಜೂಜಾಟ ಮತ್ತು ಅನೈನ್ ಗೇಮಿಂಗ್ ವ್ಯಸನದಿಂದ ಯುವಕರನ್ನು ರಕ್ಷಿಸುವುದು ಜಾಗೃತಿ ಅಭಿಯಾನದ ಮುಖ್ಯ ಉದ್ದೇಶ ಎಂಬುದನ್ನು ಸೋಲಿಡಾರಿಟಿ ಯೂತ್ ಮೂವೆಂಟ್ ತಿಳಿಸಿದೆ.

ಪ್ರಸ್ತುತ ಯುವಕರು ಮತ್ತು ಕುಟುಂಬಗಳು ಸೈಬರ್ ವಂಚನೆ, ಸೈಬರ್ ದಾಳಿಗಳು, ಆನ್‌ಲೈನ್ ಜೂಜಾಟ, ಬೆಟ್ಟಿಂಗ್ ಮತ್ತು ಗೇಮಿಂಗ್ ವ್ಯಸನದಿಂದ ಹೆಚ್ಚುತ್ತಿರುವ ಅಪಾಯಗಳನ್ನು ಎದುರಿಸುತ್ತಿವೆ. ಇವುಗಳು ಜೀವನವನ್ನು ಹಾಳುಮಾಡುವುದು, ಮತ್ತು ಉಳಿತಾಯವನ್ನು ನಾಶಮಾಡುವುದು, ಜನರನ್ನು ಸಾಲದ ಕೂಪಕ್ಕೆ ತಳ್ಳುವುದು ಮತ್ತು ಆತ್ಮಹತ್ಯೆಗಳಿಗೆ ಕಾರಣವಾಗುತ್ತಿರುವುದರಿಂದ ಈ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ ಎಂಬ ಮಾಹಿತಿಯಾಗಿದೆ.

ಅಭಿಯಾನದ ಮುಖ್ಯ ಉದ್ದೇಶಗಳು:

ಯುವಕರು, ಪೋಷಕರು ಮತ್ತು ಸಾರ್ವಜನಿಕರಿಗೆ ಡಿಜಿಟಲ್ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.ಬಲಿಪಶುಗಳು ಮತ್ತು ಕುಟುಂಬಗಳ ಕಥೆಗಳನ್ನು ಹಂಚಿಕೊಳ್ಳಲು ಹಾಗೂ ಸಹಾಯ ಪಡೆಯಲು ಪ್ರೋತ್ಸಾಹಿಸುವುದು ಅಭಿಯಾನದ ಮೂಲ ಉದ್ದೇಶವಾಗಿದೆ.

ಈ ಅಭಿಯಾನದ ಮುಖೇಣ ಸರ್ಕಾರದ ಬಳಿ ಕಠಿಣ ಕಾನೂನುಗಳು ಹಾಗೂ ವ್ಯಸನಮುಕ್ತ ಸೇವೆಗಳಿಗಾಗಿ ಒತ್ತಾಯಿಸುವುದಾಗಿದೆ.

ಪ್ರಮುಖ ಸಂದೇಶಗಳು

ಸೈಬರ್ ವಂಚನೆಯು ಸಂಪತ್ತನ್ನು ಕದಿಯುತ್ತಿದೆ.ಜೂಜು, ತ್ವರಿತ ಸಾಲ ಮತ್ತು ಬೆಟ್ರೆಂಗ್ ಕುಟುಂಬಗಳನ್ನು ನಾಶಪಡಿಸುತ್ತಿವೆ.ಅನೈನ್ ಗೇಮಿಂಗ್ ವ್ಯಸನ ಯುವಕರ ಅಧ್ಯಯನ, ಆರೋಗ್ಯ ಮತ್ತು ಸಂಬಂಧಗಳನ್ನು ಹಾಳುಮಾಡುತ್ತಿದೆ.

ವಿವಿಧ ಹಂತಗಳ ಚಟುವಟಿಕೆಗಳು

ತಾಲೂಕು/ಸ್ಥಳೀಯರಲ್ಲಿ ಬೀದಿ ನಾಟಕಗಳು, ಜಾಗೃತಿ ಭಾಷಣ, ಪೋಸ್ಟರ್ಗಳು, ಸಾಮಾಜಿಕ ಮಾಧ್ಯಮ ಸವಾಲು.ಬೀದಿ ನಾಟಕಗಳು, ವಿಚಾರ ಸಂಕಿರಣಗಳು, ರ್ಯಾಲಿಗಳು, ಸಾಕ್ಷ್ಯಗಳು,ರಾಜ್ಯ ಮಟ್ಟದಲ್ಲಿ ಬೀದಿ ನಾಟಕಗಳು, ಫ್ರೀಡಂ ಪಾರ್ಕ್‌ನಲ್ಲಿ ಧರಣಿ, ಮಾಧ್ಯಮ ವರದಿ, ವಕಾಲತ್ತು. ಹಾಗೂ ಇವುಗಳನ್ನು ಜಿಲ್ಲಾಧಿಕಾರಿ/ತಹಶೀಲ್ದಾರರಿಗೆ ಮನವಿ ಪತ್ರ ನೀಡುವುದಾಗಿದೆ ಎಂದು ತಿಳಿಸಿದ್ದಾರೆ.

ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರು ಈ ಮೂಲಕ ತಿಳಿಸಿರುವುದೇನಂದರೆ,

“ಯುವಕರು ನಮ್ಮ ದೇಶದ ಭವಿಷ್ಯ. ಡಿಜಿಟಲ್ ಅಪಾಯಗಳಿಂದ ಅವರನ್ನು ರಕ್ಷಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಈ ಅಭಿಯಾನದ ಮೂಲಕ ನಾವು, ಸರ್ಕಾರ, ಸಮಾಜ ಮತ್ತು ಕುಟುಂಬಗಳನ್ನು ಒಗ್ಗೂಡಿಸಿ ಭವಿಷ್ಯವನ್ನು ಸುರಕ್ಷಿತಗೊಳಿಸಲು ಈ ಮೂಲಕ ಪ್ರಯತ್ನಿಸುತ್ತೇವೆ.

ಸಮಾಜಕ್ಕೆ ಕರೆ

ಈ ಅಭಿಯಾನಕ್ಕೆ ಎಲ್ಲಾ ಸಮಾಜ ಸುಧಾರಕ ಮತ್ತು ಯುವ ಸಂಘಟನೆಗಳು ಸಹಕರಿಸಿ ಯುವ ಸಮುದಾಯದ ಭವಿಷ್ಯ ರೂಪಿಸುವಲ್ಲಿ ತಾವೆಲ್ಲರೂ ಒಗ್ಗೂಡಬೇಕೆಂದು ಸೋಲಿಡಾರಿಟಿ ಯೂತ್ ಮೂವೆಂಟ್ ಈ ಮೂಲಕ ಕರೆ ನೀಡುತ್ತದೆ ಎಂದು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ Mob: 70199 51060 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...