ಶಿವಮೊಗ್ಗ | ನರಗುಂದದಲ್ಲಿ ಜು. 21ರಂದು ರೈತ ಹುತಾತ್ಮ ದಿನಾಚರಣೆ : ಎಚ್ ಆರ್ ಬಸವರಾಜಪ್ಪ

Date:

ಶಿವಮೊಗ್ಗ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಭೂಸ್ವಾಧೀನದ ಹೋರಾಟದ ಜಯವನ್ನು ಜುಲೈ-21 ರಂದು ನರಗುಂದ-ನವಲಗುಂದ ಹುತಾತ್ಮರಿಗೆ ಹಾಗೂ ಇಲ್ಲಿಯವರೆಗೆ ಹೋರಾಟದಲ್ಲಿ ಹುತಾತ್ಮರಾದ ಎಲ್ಲಾ ಹುತಾತ್ಮರಿಗೆ ಅರ್ಪಿಸಿಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನಹೋರಾಟವನ್ನು ರೂಪಿಸಲು 45ನೇ ರೈತ ಹುತಾತ್ಮ ದಿನಾಚರಣೆಯನ್ನು ಜು.21 ರ ಸೋಮವಾರ 11ಗಂಟೆಗೆ ನರಗುಂದದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜಪ್ಪ ತಿಳಿಸಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್ ಆರ್. ಬಸವರಾಜಪ್ಪ , ದೇವನಹಳ್ಳಿ ಚನ್ನರಾಯಪಟ್ಟಣ ಭೂಸ್ವಾಧೀನದ ವಿರುದ್ಧ 1,198ದಿನದ ಹೋರಾಟದಲ್ಲಿ 1,777ಎಕರೆ ಕೆ.ಐ.ಎ.ಡಿ.ಬಿ ಗೆ ನೋಟೀಫಿಕೆಷನ್‌ ಮಾಡಿದ್ದನ್ನು ಹೋರಾಟದ ಫಲವಾಗಿ ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ರೈತ, ಕಾರ್ಮಿಕ, ದಲಿತ ಸಂಘಟನೆಗಳ ಹೋರಾಟಕ್ಕೆ ಪ್ರಗತಿಪರ ಚಿಂತಕರು, ಸಿನಿಮಾ ನಟರು, ಕಲಾವಿದರ ಬೆಂಬಲ ವ್ಯಕ್ತವಾಗಿದ್ದರಿಂದ ಸರ್ಕಾರ ಹೋರಾಟಕ್ಕೆ ಮಣಿದು ಸ್ವತಃ ಮುಖ್ಯಮಂತ್ರಿಗಳೇ ಇದೊಂದು ಐತಿಹಾಸಿಕ ಹೋರಾಟ ಇದು ಎಲ್ಲಾ ಹೋರಾಟಗಾರರಿಗೆ ಸಂದ ಜಯ ಎಂದು ಭೂಮಿಯನ್ನು ಡಿನೋಟೀಫೈ ಮಾಡಲು ಘೋಷಿಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
1001918649

ಈ ಐಕ್ಯ ಹೋರಾಟಕ್ಕೆ ಸಂದ ಜಯವನ್ನು ನರಗುಂದ-ನವಲಗುಂದ ರೈತ ಹುತಾತ್ಮರಿಗೆ ಜುಲೈ 21ರಂದು ಅರ್ಪಣೆ ಮಾಡಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳನ್ನ ಇಟ್ಟುಕೊಂಡು ಮುಂದಿನ ಹೋರಾಟದ ರೂಪುರೇಷೆಗಳನ್ನು ಈ ಬೃಹತ್‌ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಆದ್ದರಿಂದ ಈ ಬೃಹತ್‌ ಬಹಿರಂಗ ಸಭೆಗೆ ರೈತರು, ರೈತ ಮಹಿಳೆಯರು, ಕೃಷಿ ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕೋರಿದರು.

1001918652

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ರೈತರಿಗೆ ಮಹತ್ತರ ನೀರಾವರಿ ಯೋಜನೆಯಾದ ಮಹಾದಾಯಿ ಸುಮಾರು 2 ದಶಕಗಳು ಕಳೆದರೂ ಈಗಿನವರೆಗೂ ಯಾವುದೇ ರೀತಿಯಲ್ಲೂ ಕಾಮಗಾರಿ ಆರಂಭಗೊಂಡಿಲ್ಲ. ಮಹಾದಾಯಿ ಯೋಜನೆಯ ಹೆಸರಿನಲ್ಲಿ ವಿವಿಧ ರಾಜಕೀಯ ಪಕ್ಷದ ರಾಜಕಾರಣಿಗಳು ಅಧಿಕಾರಕ್ಕೆ ಬಂದು ಆಡಳಿತ ನಡೆಸಿದರೂ ಸಹ ಯೋಜನೆಯ ಬಗ್ಗೆ ಗಮನಹರಿಸಿಲ್ಲ. ಮಹಾದಾಯಿ ಯೋಜನೆಯನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರಗಳು ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.

ಆಲಮಟ್ಟಿ ಜಲಾಶಯದ ಎತ್ತರವನ್ನು ಸುಪ್ರೀಂ ಕೋರ್ಟ್ ಆದೇಶದಂತೆ 524 ಮೀಟರ್ ಎತ್ತರಿಸಿ ಆ ಭಾಗದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕೆಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...