ಶಿವಮೊಗ್ಗ | ಒಳಮೀಸಲಾತಿ ಸಮೀಕ್ಷೆಯಿಂದ ಅಲೆಮಾರಿಗಳು ಬಿಟ್ಟುಹೋಗುವ ಅತಂಕ : ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಆರೋಪ

Date:

Advertisements

ಶಿವಮೊಗ್ಗ ಈಗ ನಡೆಯುತ್ತಿರುವ ಒಳಮೀಸಲಾತಿ ಸಮೀಕ್ಷೆಯಲ್ಲಿ ಯಾವುದೇ ನೆಲೆ ಇಲ್ಲದ ಅಲೆಮಾರಿ ಜನಾಂಗಗಳು ಬಿಟ್ಟುಹೋಗುವ ಸಂಭವವಿದೆ ಎಂದು ಕರ್ನಾಟಕ ಪ.ಜಾ ಮತ್ತು ಪ.ಪಂಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲೆಮಾರಿ ಸಮುದಾದವರಲ್ಲಿ ಜಾಗೃತಿ ಮೂಡಿಸಲು ಸಮೀಕ್ಷೆಯನ್ನು ಹೋಬಳಿ ಮಟ್ಟದಲ್ಲಿ ಕನಿಷ್ಠ 3 ದಿನಗಳ ಕಾಲ ನಡೆಸುವಂತೆ ಮುಖ್ಯಮಂತ್ರಿಯ ಮೇಲೆ ಒತ್ತಡ ಹೇರಲು ಜಿಲ್ಲಾಧಿಕಾರಿ ಮೂಲಕ‌ ಮನವಿ ಸಲ್ಲಿಸಲಾಗುವುದು ಎಂದರು.

ಯಾವುದೇ ಸಮುದಾಯಕ್ಕೆ ದತ್ತಾಂಶಗಳು ಇಲ್ಲದೆ ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ಆದುದರಿಂದಲೇ ಮೇ.5 ರಿಂದ ಮನೆ ಮನೆಗಳಿಗೆ ತೆರಳಿ ಸಮೀಕ್ಷೆ ಮಾಡಲಾಗುತ್ತಿದೆ. ಅವಕಾಶ ವಂಚಿತರಾದ ಸಾಮಾಜಿಕ ಕಳಂಕಿತರಾದವರು ಕಣಿ ಹೇಳುವ, ಧಾರ್ಮಿಕ ಭಿಕ್ಷಾಟನೆ ಮಾಡುತ್ತಿದ್ದ ಪ.ಜಾತಿಯ ಅಲೆಮಾರಿಗಳಾಗಿದ್ದಾರೆ ಎಂದರು.

Advertisements

2016 ರಲ್ಲಿ ದೊಂಬರ, ಸುಡುಗಾಡುಸಿದ್ದ, ಕೊರಚ, ಕೊರಮ, ಹಂದಿ ಜೋಗಿ, ಶಿಳ್ಳೆಕ್ಯಾತ, ಬುಡುಗಜಂಗಮ, ಘಂಟಿಚೋರ, ಮುಕ್ರಿ, ಚನ್ನ ದಾಸರ, ಮಾಲದಾಸರ, ಮಾಂಗ್, ಗಾರುವಾಡಿ, ಗೋಸಂಗಿ, ಸಿಂಧೋಳ್ಳು, ಪಾಲೆ, ಅಜಿಲ, ಆದಿಲ ಇತ್ಯಾದಿ 51 ಸಮುದಾಯಗಳು ಅಲೆಮಾರಿಗಳು, ಮುಕ್ತ ಬುಡಕಟ್ಟು ಅತೀ ಸೂಕ್ಷ್ಮ ಎಂದು ಗುರುತಿಸಿದೆ ಎಂದರು.

24 ಜಿಲ್ಲೆಗಳ ಪ್ರವಾಸ ಮಾಡಿ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದೇನೆ. ತಿಳುವಳಿಕೆ ಶಿಕ್ಷಣ ಇಲ್ಲದೆ ಹೊಟ್ಟೆಪಿಗಾಗಿ ವಿವಿಧ ಕೆಲಸ ಮಾಡುತ್ತಿದ್ದಾರೆ. ವೋಟರ್ ಐಡಿ, ಕ್ಯಾಸ್ಟ್ ಚೋಪಡಿಯಲ್ಲಿ ವಾಸಚಾಗಿರುವ ವಿಶೇಷ ತಜ್ಞರ ಆಯೋಗವು ಹೋಬಳಿ ಮಟ್ಟದಲ್ಲಿ ಅಲೆಮಾರಿ ವಿಶೇಷ ಸಮೀಕ್ಷೆ ಕಾರ್ಯಕ್ರಮ ಕೈಗೊಳ್ಳಬೇಕು ಎಂದರು.

ನಿಗಮದಿಂದ ಪ್ರತ್ಯೇಕ ಸಮೀಕ್ಷೆ ಮಾಡಲು ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ಮತ್ತು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆಯೋಗ ಈ ಬಗ್ಗೆ ಕ್ರಮ ಜರುಗಿಸಿಲ್ಲ. ವಿಖಾಸವಿಲ್ಲದೆ ಬದುತ್ತಿರುವ ಈ ಸಮುದಾಯಕ್ಕೆ ಜಿಲ್ಲಾ ಅನುಷ್ಠಾನ ಸಮಿತಿ ನೀಡಬೇಕು. ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ದೂರಿದರು. ಪ್ರವಾಸದಿಂದ ವಿಶೇಷ ಶಿಬಿರ ನಡೆಸಿ ಸ್ಥಳ ಮಹಜರ್ ಮಾಡಿ ವಂಶವೃಕ್ಷ, ಜಾತಿ ಸೆರ್ಟಿಫಿಕೇಟ್ ನೀಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X