ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಸಾಗುವಳಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಇಂದು ಜಿಲ್ಲಾಧಿಕಾರಿಗಳಿಗೆ ಬಗರ್ ಹುಕುಂ ಸಮಿತಿಯ ಸದಸ್ಯ ಗಿರೀಶ್ ಮನವಿ ಮಾಡಿದರು.
ಮನವಿಯ ಬಳಿಕ ಮಾತನಾಡಿದ ಅವರು, ಸುಮಾರು 30 40 ವರ್ಷಗಳಿಂದ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ ರೈತರು1990-1991, ಹಾಗೂ 1998-99 ರವರೆಗೆ ಫಾರಂ ನಂಬರ್ 50 ,53 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು ಈಗಾಗಲೇ ಬಗರಕುಂ ಸಮಿತಿ ರಚನೆಯಾಗಿದೆ ಹಾಗೂ ಉಪ ವಿಭಾಗಾಧಿಕಾರಿಗಳು ಮೇಲ್ಮನವಿಯಲೂ ಸಹ ಅನುಮತಿಯನ್ನು ಪಡೆದಿದ್ದು ಸದರಿ ಅನುಮತಿ ಪತ್ರ ಗ್ರಾಮ ಲೆಕ್ಕಾಧಿಕಾರಿಗಳ ವರದಿಗೆ ಹೋದ ನಂತರ ವರದಿ ನೀಡದೆ ಜಿಲ್ಲಾಧಿಕಾರಿ ಗಳಾದ ತಮ್ಮಮೇಲೆ ನೆಪವೊಡ್ಡಿ ನಿರಾಕರಿಸುತ್ತಿದ್ದಾರೆ ಎಂದರು.
ಸರ್ಕಾರದ ಸುತ್ತೊಲೆಯಂತೆ ಫಾರಂ-57ರಡಿಯಲ್ಲಿ ಅರ್ಜಿ ಸಲ್ಲಿಸಿದ್ದ ರೈತರಿಗೆ ಮಾತ್ರ 10 ಕಿ. ಮೀ ನಗರ ವ್ಯಾಪ್ತಿ ಇರುವುದರಿಂದ ವರದಿ ನೀಡಬಾರದೆಂದು ಸರ್ಕಾರದ ಆದೇಶವಿದೆ ಎಂದರು.
ಈ ಆದೇಶವು 50,53ಅರ್ಜಿಗೆ ಅನ್ವಯಿಸುವುದಿಲ್ಲ. ಹಾಗೂ ಈ ಇಂದೇ ಸರ್ವೇ ಇಲಾಖೆಯವರು ನೀಡಿದ ವರದಿಯು ಅವೈಜ್ಞಾನಿಕವಾಗಿದ್ದು,ವರದಿಯನ್ನು ಪುನರ್ ಪರಿಶೀಲಿಸಿ ಹಾಗೂ 50, 530ಅರ್ಜಿಯನ್ನು ಪರಿಗಣಿಸಿ ರೈತರಿಗೆ ಸಾಗುವಳಿ ನೀಡುವಂತೆ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕಾಗಿ ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಹಾಸನ | ಜಿಲ್ಲೆಯಲ್ಲಿ ಹೆಚ್ಚಾದ ಹಠಾತ್ ಸಾವು: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆ
ಈ ಸಂಧರ್ಭದಲ್ಲಿ ಎಸ್ ಗಿರೀಶ್ ಸದಸ್ಯರು ಬಗರ್ ಹುಕುಂ ಸಮಿತಿ ಶಿವಮೊಗ್ಗ, ಕಲಗೋಡು ರತ್ನಾಕರ್ ನಾಗೇಂದ್ರಪ್ಪ ಫಾರಂ, ಸೊಗನೆ ಕೃಷ್ಣಪ್ಪ, ಪ್ರವೀಣ್, ಮಧುಸೂದನ್, ವೇಲು ಕಲ್ಲಾಪುರ, ಮಂಜಣ್ಣ, ವೆಂಕಟೇಶ್, ಕಟೀಕೆರೆ ಹುಚ್ಚಪ್ಪ, ಮಂಜುನಾಥ್, ಸಂಜಯ್, ಮಂಜನಾಯ್ಕ್ ಕಲ್ಲಾಪುರ, ಹರೀಶ್ ನಾಯ್ಕ ನಿದಿಗೆ ಕುಮಾರ್ ಇನ್ನು ಹಲವರು ಉಪಸ್ಥಿತರಿದ್ದರು.