ಶಿವಮೊಗ್ಗ | ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Date:

Advertisements

ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು 8, ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಕೆ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಆರ್ ಎಂಎಲ್​ ನಗರದಲ್ಲಿ ನಡೆದಿದೆ.

ದೂರುದಾರರು ಅಡಿಕೆಯನ್ನು ಸಿಪ್ಪೆ ಸುಲಿದು, ಶಿವಮೊಗ್ಗದ ಬಾಬು ಆರ್.ಎಂ.ಎಲ್. ನಗರದಲ್ಲಿರುವ ತಮ್ಮ ಮಳಿಗೆಯಲ್ಲಿ ಇರಿಸಿದ್ದರು.ಸುಮಾರು 3 ತಿಂಗಳ ಹಿಂದೆ ಬೆಳೆದಿದ್ದ ಈ ಅಡಿಕೆಯನ್ನು ಒಣಗಿಸಿ ಮಾರಾಟಕ್ಕೆ ಸಿದ್ಧಪಡಿಸಲು ಸ್ಥಳಾವಕಾಶದ ಇಲ್ಲದೇ ಇದುದ್ದರಿಂದ.

ಸೆಪ್ಟೆಂಬರ್ 21, 2025ರಂದು ಬೆಳಿಗ್ಗೆ ತಮ್ಮ ಮಳಿಗೆಯಿಂದ ಅನುಪಿನಕಟ್ಟೆಯಲ್ಲಿರುವ ಶೀಟಿನ ಗೋಡೌನ್‌ಗೆ ಹಾಕಿಸಿದ್ದರು. ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ ಜವಬ್ದಾರಿಯನ್ನು ವಹಿಸಿದ್ದರು.ಆ ಪರಿಚಯಸ್ಥರು ಸೆಪ್ಟೆಂಬರ್ 22, ರಾತ್ರಿ ಸುಮಾರು 8:00 ಗಂಟೆಯವರೆಗೆ ಗೋಡೌನ್‌ನಲ್ಲಿ ಇದ್ದು, ನಂತರ ಬೀಗ ಹಾಕಿ ಹೋಗಿದ್ದರು.

ಮರುದಿನ, ಸೆಪ್ಟೆಂಬರ್ 23, 2025ರ ಮಧ್ಯಾಹ್ನ ಸುಮಾರು 1:00 ಗಂಟೆಗೆ ಗೋಡೌನ್ ಬಳಿ ಹೋದಾಗ, ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಒಡೆದಿರುವುದು ಕಂಡುಬಂದಿದೆ.ಬಾಗಿಲು ತೆಗೆದು ಒಳಗೆ ಹೋಗಿ ಪರಿಶೀಲಿಸಿದಾಗ, ದೂರುದಾರರರಿಗೆ ಶಾಕ್​ ಎದುರಾಗಿದ್ದು, ಗೋಡೌನ್‌ನಲ್ಲಿದ್ದ ಅಡಿಕೆ ತುಂಬಿದ ಒಟ್ಟು 20 ಚೀಲಗಳು ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಈ ಸಂಬಂಧ ತುಂಗಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ವಿಧಾನಸಭೆ, ಲೋಕಸಭೆಯಲ್ಲಿ ಒಬಿಸಿಗೂ ಮೀಸಲಾತಿ ಬೇಕು : ಕೆ.ಎನ್.ರಾಜಣ್ಣ

ಪರಿಶಿಷ್ಟ ಜಾತಿ-ಪಂಗಡದವರಿಗೆ ಇರುವಂತೆ ಚುನಾವಣೆಗಳಲ್ಲಿ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರಗಳಲ್ಲಿ ಹಿಂದುಳಿದ...

ಬೀದರ್‌ | ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಲಿ : ರಾಜಕುಮಾರ್‌ ಅಲ್ಲೂರೆ

ಈಗ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಬೇಕು ಎಂದು...

ಹಾವೇರಿ | ಡಿಜಿಟಲ್ ವಂಚನೆ ಬಗ್ಗೆ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು: ಮುಹಮ್ಮದ್ ಇಸ್ಮಾಯಿಲ್

"ಸೈಬರ್ ವಂಚನೆಯಿಂದ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂಪಾಯಿ ಜನರು ವಂಚನೆಗೆ ಒಳಗಾಗುತ್ತಿದ್ದಾರೆ....

Download Eedina App Android / iOS

X