ಶಿವಮೊಗ್ಗ | ಹೆಡ್ ಕಾನ್ಸ್’ಟೇಬಲ್ ಆನಂದ್ ಹೆಚ್ ವಿ ರಿಂದ ಮಾನವೀಯ ಕಾರ್ಯ

Date:

Advertisements

ಶಿವಮೊಗ್ಗ, ತಂದೆ – ತಾಯಿ ಮೃತರಾಗಿ ಪೋಷಕತ್ವದಿಂದ ವಂಚಿತರಾಗಿದ್ದ ಇಬ್ಬರು ಹೆಣ್ಣು ಮಕ್ಕಳಿಗೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಆಶ್ರಯ ಕಲ್ಪಿಸುವ ಮಾನವೀಯ ಕಾರ್ಯ ಮಾಡಿದ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸ್ ಸಿಬ್ಬಂದಿಯೋರ್ವರ ಕರ್ತವ್ಯವು ಮೆಚ್ಚುಗೆಗೆ ಪಾತ್ರವಾಗಿದೆ.

ಹೆಡ್ ಕಾನ್ಸ್’ಟೇಬಲ್ ಆನಂದ್ ಹೆಚ್ ವಿ ಎಂಬುವರೆ, ಸಮಾಜಮುಖಿ ಕಾರ್ಯದ ಮೂಲಕ ಗಮನ ಸೆಳೆದವರಾಗಿದ್ದಾರೆ. ಈ ಕುರಿತಂತೆ ಆಗಸ್ಟ್ 8 ರಂದು ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ನೆರಹವಿನಹಸ್ತ

Advertisements

ಆಗಸ್ಟ್ 4 ರಂದು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮದಡಿ, ಆನಂದ್ ಹೆಚ್ ವಿ ಅವರು ಗ್ರಾಮಸ್ಥರ ಅಹವಾಲು ಆಲಿಸುತ್ತಿದ್ದರು.

ಈ ವೇಳೆ 9 ಹಾಗೂ 3 ವರ್ಷ ವಯೋಮಾನದ ಇಬ್ಬರು ಹೆಣ್ಣು ಮಕ್ಕಳು, ಪೋಷಕತ್ವದಿಂದ ವಂಚಿತರಾಗಿರುವ ಮಾಹಿತಿ ಅವರ ಗಮನಕ್ಕೆ ಬಂದಿತ್ತು. ಸುಮಾರು 1 ವರ್ಷದ ಹಿಂದೆ ಸದರಿ ಬಾಲಕಿಯರ ತಂದೆ – ತಾಯಿ ವಿಧಿವಶರಾಗಿದ್ದ ಸಂಗತಿ ಗೊತ್ತಾಗಿತ್ತು.

ಮಕ್ಕಳಿಗೆ ಸೂಕ್ತ ಆಶ್ರಯ ಕಲ್ಪಿಸಲು ನಿರ್ಧರಿಸಿದ ಆನಂದ್ ಹೆಚ್ ವಿ ಅವರು, ಭದ್ರಾವತಿಯ ಡಾನ್ ಬಾಸ್ಕೋ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ರಂಗನಾಥ್ ಅವರನ್ನು ಸಂಪರ್ಕಿಸಿ ಮಾಹಿತಿ ತಿಳಿಸಿದ್ದರು.

ಸದರಿ ಸಂಸ್ಥೆಯ ಮೂಲಕ ಪುಟ್ಟ ಹೆಣ್ಣು ಮಕ್ಕಳನ್ನು, ಶಿವಮೊಗ್ಗದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸುಪರ್ದಿಗೆ ಒಪ್ಪಿಸಿ, ಮಕ್ಕಳಿಗೆ ಆಶ್ರಯ ಕಲ್ಪಿಸಿಕೊಡುವ ಮಾನವೀಯ ಕಾರ್ಯ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X