ಶಿವಮೊಗ್ಗ | ಮೃತ ಮಂಜುನಾಥ್ ಕುಟುಂಬಕ್ಕೆ ಪರಿಹಾರ ಹೆಚ್ಚಿಸಿ ; ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

Date:

Advertisements

ಕಾಶ್ಮೀರದ ಪಹಾಲ್ಗಮ್ ನಲ್ಲಿ ಭಯೋತ್ಪಾದಕರ ದಾಳಿಗೆ ಮೃತರಾದ ಮಂಜುನಾಥ್ ಮನೆಗೆ ಇಂದು ಶಿವಮೊಗ್ಗ ಮುಸ್ಲಿಂ ಬಾಂಧವ್ಯ ವೇದಿಕೆ ನೀಡಿ ಸಾಂತ್ವನ ತಿಳಿಸಿದರು.

ಈ ಒಂದು ದುರ್ಘಟನೆಯನ್ನು ಖಂಡಿಸುತ್ತೇವೆ ಹಾಗೆ ಈ ಕುಟುಂಬಕ್ಕೆ ಆಗಿರುವ ದುಃಖ ಅಘಾತ ಯಾರಿಗೂ ಸಹ ಬರಬಾರದು ಎಂದು ವಿಷಾದ ವ್ಯಕ್ತಪಡಿಸಿದರು, ಈ ದುಃಖದ ಸಮಯದಲ್ಲಿ ಕುಟುಂಬದೊಂದಿಗೆ ನಾವು ಭಾಗಿದ್ದಾರರಾಗಿರುತ್ತೇವೆ ಎಂದರು. ಕುಟುಂಬದ ನೆರವಿಗೆ ನಾವು ಸದಾ ಇರುತ್ತೇವೆ ಎಂದರು.

IMG 20250506 WA0037

ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರು ನಿಜಕ್ಕೂ ಸೌಹಾರ್ದವಾಗಿ, ಸಮಾಜದಲ್ಲಿ ಇಂತಃ ಒಂದು ಕಷ್ಟದ ಪರಿಸ್ಥಿತಿಯಲ್ಲಿ ತುಂಬಾ ಗಟ್ಟಿಯಾಗಿ ನಿಂತು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.

Advertisements

ಎಲ್ಲೂ ಸಹ ಯಾವದಕ್ಕು ಕುಗ್ಗದೆ ಜಗ್ಗದೆ ದುಃಖದ ಸಮಯದಲ್ಲಿ ಕುಟುಂಬ ಹಾಗೂ ಸಮಾಜವನ್ನು ನಿಭಾಯಿಸಿರುವುದಕ್ಕೆ ಅಭಿನಂದನೆಗಳನ್ನ ತಿಳಿಸಿದರು.

ಇಂತಹ ಉಗ್ರ ಪಾಪಿಗಳ ವಿರುದ್ದ ನಾವೆಲ್ಲರೂ ಸಹ ಒಂದಾಗಿರುತ್ತೇವೆ ಇದು ನಮ್ಮ ಹೃದಯದ ಮಾತಾಗಿದೆ ಎಂದು ತಿಳಿಸಿದರು.ಮುಸ್ಲಿಂ ಬಾಂಧವ್ಯ ವೇದಿಕೆ ಎಂದಿಗೂ ನಿಮಗೆ ನಿಮ್ಮ ಕುಟುಂಬಕ್ಕೆ ಸಹಕಾರದಿಂದ ಇರುತ್ತೇವೆ ಹಾಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮೃತ ಮಂಜುನಾಥ್ ಕುಟುಂಬಕ್ಕೆ ಪರಿಹಾರದ ಮೊತ್ತವನ್ನು ಮತ್ತಷ್ಟು ಹೆಚ್ಚಿಸಿ ಎಂದು ಈ ಮೂಲಕ ಅಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.

1001572417

ಹಾಗೆಯೇ ಕುಟಂಬಕ್ಕೆ ಆರ್ಥಿಕವಾಗಿ ನೆರವಾಗಿ ನಿಲ್ಲುವ ಮೂಲಕ ಕುಟುಂಬವನ್ನು ಸದೃಢಗೊಳಿಸಬೇಕೆಂದು ತಿಳಿಸಿದರು.

ನಮ್ಮ ಈದಿನ ಡಾಟ್ ಕಾಮ್ ನೊಂದಿಗೆ ಮಾತಾಡಿದ ಮೃತ ಮಂಜುನಾಥ್ ಪತ್ನಿ ಪಲ್ಲವಿ, ಹಲವರು ದಿನ ನಿತ್ಯ ಆಗಮಿಸಿ ಸಾಂತ್ವನ ತಿಳಿಸುತ್ತಿದ್ದಾರೆ, ಮುಸ್ಲಿಂ ಬಾಂಧವ್ಯ ವೇದಿಕೆ ಆಗಮಿಸಿ ಸಾಂತ್ವನ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಇವರುಗಳಿಗೆ ಧನ್ಯವಾದಗಳನ್ನು ತಿಳಿಸಲು ಬಯುಸುತ್ತೇನೆ ಎಂದರು.

1001572415

ರಾಜ್ಯದ ಹಲವು ಭಾಗದಿಂದ ಮುಸ್ಲಿಂ ಬಾಂಧವ್ಯ ವೇದಿಕೆಯ ಮುಖಂಡರು ಇಂದು ಆಗಮಿಸಿ ಮೃತರ ಆತ್ಮಕ್ಕೆ ಶಾಂತಿ ಕೋರುವ ಮೂಲಕ ಕುಟಂಬಕ್ಕೆ ಧೈರ್ಯ ತುಂಬಿ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಮುಶ್ತಾಕ್ ಹನ್ನೆಬೈಲ್, ಸೊಹೈಲ್, ವಹಾಬ್, ಆಯೇಷಾ, ಹಾಗೂ ಮತ್ತಿತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X