ಶಿವಮೊಗ್ಗ | ಅಪರ ಜಿಲ್ಲಾಧಿಕಾರಿ ಏಕಪಕ್ಷಿಯ ನಿರ್ಧಾರದಿಂದ ಅನ್ಯಾಯ;ಪ್ರೊಫ್. ರಾಚಪ್ಪರಿಂದ ಜಿಲ್ಲಾಧಿಕಾರಿಗೆ ಮನವಿ

Date:

Advertisements

ತಾ: 6/5/2025 ರಂದು ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಭಗವಾನ್ ಬುದ್ಧರ ಜಯಂತಿಗೆ ಸಂಬಂಧಪಟ್ಟಂತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು ಎಂದು ಪ್ರೊಫ್. ರಾಚಪ್ಪ ತಿಳಿಸಿದ್ದು.ಅದರಂತೆ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆದು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು ಎಂದರು. ಅದರಂತೆ ಕಾರ್ಯಕ್ರಮದಲ್ಲಿ

ಪ್ರೊ|| ರಾಚಪ್ಪ ಇವರನ್ನು ವಿಶೇಷ ಉಪನ್ಯಾಸಕರನ್ನಾಗಿ ಆಹ್ವಾನಿಸುವುದು. ಭಗವಾನ್ ಬುದ್ಧರ ಕುರಿತ ಕಿರುಪುಸ್ತಕವನ್ನು ಸಭಿಕರಿಗೆ ಹಂಚುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಮೂವರನ್ನು ಸನ್ಮಾನಿಸುವುದು ಇತ್ಯಾದಿಗಳ ಬಗ್ಗೆ ಚರ್ಚಿಸಿ ಅವುಗಳನ್ನು ಒಪ್ಪಿಕೊಳ್ಳಲಾಗಿತ್ತು ಎಂದು ರಾಚಪ್ಪ ತಿಳಿಸಿದರು.

ಆದರೆ ತಾ. 7/5/2025 ರಂದು ಸದರಿ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಚರ್ಚಿಸಲು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಕಛೇರಿಗೆ ಹೋದಾಗ ಅಲ್ಲಿಯ ಸಿಬ್ಬಂದಿಗಳು ನೆನ್ನೆ ತೆಗೆದುಕೊಂಡಿರುವ ಮೂರು ವಿಚಾರಗಳು ಬದಲಾಗಿದೆ ಎಂದು ತಿಳಿಸಿದರಲ್ಲದೆ, ಹೆಚ್ಚಿನ ಮಾಹಿತಿಗಳಿಗೆ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಬೇಕೆಂದು ತಿಳಿಸಿದರು.

Advertisements
1001607567

ತಕ್ಷಣವೆ ಈ ಬಗ್ಗೆ ಅಪರ ಜಿಲ್ಲಾಧಿಕಾರಿಗಳನ್ನು ರಾಚಪ್ಪ ಅವರು ಭೇಟಿಯಾಗಿ ವಿಚಾರಿಸಿದಾಗ ಸಭೆಯಲ್ಲಿ ತೆಗೆದುಕೊಂಡ ಎಲ್ಲಾ ನಿರ್ಣಯಗಳನ್ನು ಬದಿಗಿಟ್ಟು ಏಕಪಕ್ಷೀಯವಾಗಿ ತಮ್ಮದೇ ತೀರ್ಮಾನಗಳನ್ನು ತೆಗೆದುಕೊಂಡಿರುವ ವಿಚಾರ ತಿಳಿದುಬಂತು ಎಂದು ತಿಳಿಸಿದರು.

ಈ ದಿಸೆಯಲ್ಲಿ ರಾಚಪ್ಪ ಅವರು ಸರ್ಕಾರದ ಗಮನಕ್ಕೆ ತರಬಯಸುವುದೇನೆಂದರೆ ಎಂದು ಪ್ರಶ್ನೆಗಳನ್ನು ಕೇಳಿದರು ಅದರಂತೆ

ಏಕಪಕ್ಷೀಯವಾಗಿ ತಮ್ಮ ಇಚ್ಛೆಗೆ ಬಂದಂತ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವು ಅಪರ ಜಿಲ್ಲಾಧಿಕಾರಿಗಳಿಗೆ ಇದೆಯೇ ಎಂದು ಕೇಳಿದರು?

ಅಪರ ಜಿಲ್ಲಾಧಿಕಾರಿಗಳು ಏಕಪಕ್ಷೀಯವಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದೇ ಆದಲ್ಲಿ ಸಭೆ ಕರೆಯುವ ಅವಶ್ಯಕತೆ ಏನಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು?

ಸಭೆಯಲ್ಲಿ ಪ್ರಜಾಸತ್ತಾತ್ಮಕವಾಗಿ ತೆಗೆದುಕೊಂಡ ತೀರ್ಮಾನಗಳಿಗೆ ಬೆಲೆ ಇಲ್ಲವೇ?ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ ಎಂದರು.

ಆದ್ದರಿಂದ ಸಂಬಂಧಪಟ್ಟವರಾದ ಜಿಲ್ಲಾಧಿಕಾರಿ ಅವರೇ ಈ ಬಗ್ಗೆ ಅಪರ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ-ನಿರ್ದೇಶಕರನ್ನು ವಿಚಾರಿಸಿ, ಸೂಕ್ತ ಮಾರ್ಗದರ್ಶನ ನೀಡುವುದರ ಮೂಲಕ ನಮ್ಮ ಅಹವಾಲುಗಳಿಗೆ ನ್ಯಾಯ ಒದಗಿಸಬೇಕೆಂದು ಈ ಮೂಲಕ ಕೋರುತ್ತೇವೆ ಎಂದು ಪ್ರೊಫ್. ರಾಚಪ್ಪರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮನವಿಗೆ ಸಾಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಈ ಕುರಿತು ಮಾಹಿತಿ ಪಡೆದು ತಿಳಿಸುತ್ತೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X