ಶಿವಮೊಗ್ಗ | ಮಹಾನಗರ ಪಾಲಿಕೆ, ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; ಸ್ಥಳೀಯರ ಆಕ್ರೋಶ

Date:

Advertisements

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಎದುರಿನ ಜಾಗದಲ್ಲಿ ಮೆಸ್ಕಾಂ(ಕೆಇಬಿ)ನವರು, ಲೈನ್‌ಗೆ ಅಡ್ಡ ಬಂದಿರುವ ಮರಗಳ ರೆಂಬೆ-ಕೊಂಬೆ ಹಾಗೂ ಎಲೆಗಳನ್ನು ನಿನ್ನೆ ಬೆಳಿಗ್ಗೆ ಕತ್ತಿರಿಸಿದ್ದರು. ಆದರೆ ರಸ್ತೆಯ ಫುಟ್‌ಪಾತ್‌ಗಳು ಸೇರಿದಂತೆ ಎಲೆಂದರಲ್ಲಿ ಬಿದ್ದಿರುವ ಮರಗಳ ತ್ಯಾಜ್ಯವನ್ನು ವಿಲೇವಾರಿ ಮಾಡದೆ ಹಾಗೆಯೇ ಬಿಟ್ಟು ಹೋಗಿದ್ದಾರೆ.

ಇಲ್ಲಿ ಸುತ್ತಮುತ್ತಲಿನಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು, ಹೋಟೆಲ್‌ಗಳು ಇರುವುದರಿಂದ ಸಾರ್ವಜನಿಕ ಸಂಚಾರ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ರೋಗಿಗಳಿಗೆ ಅನಾನುಕೂಲವಾಗುತ್ತಿದೆ.

“ಆಸ್ಪತ್ರೆಯಿಂದ ಮೆಡಿಕಲ್‌ಗೆ ಓಡಾಡಲು ಹಿಂಸೆ ಎನಿಸುತ್ತಿದೆ. ಅವಸರದಲ್ಲಿ ಬರುತ್ತಿರುವಾಗ ಕಡ್ಡಿಗಳು ಕಾಲಿಗೆ ತಾಕಿ ನಾವೇ ಬಿದ್ದು ಆಸ್ಪತ್ರೆ ಸೇರುತ್ತೇನೋ ಎನ್ನುವ ಆತಂಕ ಎದುರಾಗಿದೆ. ಮೆಸ್ಕಾಂನವರು ಮರದ ರೆಂಬೆಕೊಂಬೆಗಳನ್ನು ಕಡಿದು ಎಲ್ಲೆಂದರಲ್ಲಿ ಬಿಸಾಕಿರುವುದನ್ನು ತೆರವುಗೊಳಿಸಬೇಕು” ಎಂದು ಸಾರ್ವಜನಿಕರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದರು.

Advertisements

ವಿಯಯಕ್ಕೆ ಸಂಬಂಧಿಸಿದಂತೆ ಈ‌ ದಿನ.ಕಾಮ್ ಮೆಸ್ಕಾಂ ಇಂಜಿನಿಯರ್ ನಂದೀಶ್ ಎಇಯವರನ್ನು ಸಂಪರ್ಕಿಸಿದಾಗ ಮಾತನಾಡಿ, “ಮಹಾನಗರ ಪಾಲಿಕೆಗೆ ತಿಳಿಸಿ, ಸ್ವಚ್ಛತೆ ಮಾಡಿ ಸರಿಪಡಿಸಿಕೊಡಲು ಹೇಳುತ್ತೇನೆ” ಎಂದರು.

ನಂತರ ಪ್ರಭುರಾಜ್ ಮಹಾನಗರ ಪಾಲಿಕೆ ಅರೋಗ್ಯಧಿಕಾರಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಗರದಲ್ಲಿ ಪದೇ ಪದೆ ಈ ರೀತಿ ಘಟನೆಗಳು ಆಗುತ್ತಿರುತ್ತವೆ, ನಮ್ಮ ಗಮನಕ್ಕೆ ತರುವುದಿಲ್ಲ. ಮರಗಳ ಎಲೆ, ರೆಂಬೆ ಕೊಂಬೆ ಕಡಿಯುವ ಮುನ್ನ ಹಾಗೆಯೇ ಅಧಿಕೃತವಾಗಿ ನಮಗೆ ಯಾವುದೇ ಆದೇಶ ಇಲ್ಲ. ಮೆಸ್ಕಾಂನಿಂದ ಜೊತೆಗೆ Man Power ಹಾಗೂ ವಾಹನದ ವ್ಯವಸ್ಥೆ ಮೆಸ್ಕಾಂ ಬಳಿ ಇಲ್ಲ. ಹಾಗಾಗಿ ಮೌಖಿಕವಾಗಿ ನಮಗೆ ತಿಳಿಸುತ್ತಾರೆ” ಎಂದು ಹೇಳಿದರು.

1001648420

“ನಮಗೆ ಕೂಡ ತಕ್ಷಣ ವ್ಯವಸ್ಥೆ ಮಾಡಿಕೊಡಲು ತೊಂದರೆ ಉಂಟಾಗುತ್ತೆ ಯಾಕಂದ್ರೆ ನಮ್ಮ ಮಹಾನಗರ ಪಾಲಿಕೆಯವರು ಮತ್ತು ವಾಹನ ಬೇರೆ ಬೇರೆ ಕೆಲಸದ ನಿಮಿತ್ತ ತೆರಳಿರುತ್ತವೆ. ಹಾಗಾಗಿ ನಮ್ಮ ಗಮನಕ್ಕೆ ಮಾಹಿತಿ ಬಂದಿದೆ. ಈಗ ಸ್ವಚ್ಛತೆ ಮಾಡಲು ವ್ಯವಸ್ಥೆ ಮಾಡಿಸುತ್ತೇನೆ” ಎಂದು ತಿಳಿಸಿದ್ದಾರೆ.

ನಗರದಲ್ಲಿ ಎಲ್ಲ ಕಡೆ ಮೆಸ್ಕಾಂನವರು ಈ ರೀತಿಯ ಅವ್ಯವಸ್ಥೆ ಮಾಡುತ್ತಾರೆ ಎಂಬುದು ವ್ಯಾಪಾರಸ್ಥರು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ Underground ಎಲೆಕ್ಟ್ರಿಕಲ್ ಲೈಲ್‌ಗಳನ್ನು ತರಲಾಗಿತ್ತು. ಆದರೆ ಅದರಿಂದ ಸಾಕಷ್ಟು ಸಮಸ್ಯೆಗಳು ಉಂಟಾದ ಕಾರಣ ಈಗ ಕೈಬಿಡಲಾಗಿದೆ ಎಂಬುದು ಮಾಹಿತಿಯಾಗಿದೆ. ಹಾಗಾಗಿ ನಗರದ ಹಲವು ಕಡೆ ಎಲೆಕ್ಟ್ರಿಕಲ್ ಲೈನ್ ಕಂಬಗಳು ಇರುವ ಕಾರಣ ಈ ರೀತಿ ಮರಗಳ ಕೊಂಬೆ ಎಲೆಗಳನ್ನು ಕತ್ತರಿಸುತ್ತಿರುತ್ತಾರೆ. ಆದರೆ ಮೆಸ್ಕಾಂ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ಜರುಗುಸಿಬೇಕು” ಎಂಬುದು ನಗರದ ಪ್ರಜ್ಞಾವಂತ ನಾಗರಿಕರ ಒತ್ತಾಯ.

1001648422

ಈ ರೀತಿ ದಿನಗಟ್ಟಲೆ ಸ್ವಚ್ಛತೆ ಮಾಡದಿರುವುದು, ಮಳೆ ಬರುತ್ತಿರುವ ಕಾರಣ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಹಾಗೆಯೇ ಇದರ ಮೇಲೆ ಕೆಲವರು ಉಗಿಯುವುದು ಹಾಗೂ ಪ್ರಾಣಿಗಳ ಮಲ ಮೂತ್ರದಿಂದ ಸಾಂಕ್ರಾಮಿಕ ರೋಗಕ್ಕೆ ಆಹ್ವಾನವಾಗುತ್ತಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

1001648547

ಮೆಸ್ಕಾಂ ಅವರು ಮರದ ಎಲೆ, ರೆಂಬೆ-ಕೊಂಬೆಗಳನ್ನು ಕಡಿದು, ತಮಗೆ ಇದುಕ್ಕೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುವುದು ನಾಗರಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನಗರದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ ಮೆಸ್ಕಾಂ ಅಧಿಕಾರಿಗಳು ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕಿದೆ. ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಮಹಾನಗರ ಪಾಲಿಕೆ ಸ್ವಚ್ಛತೆ ಮಾಡಬೇಕಾಗಿದೆ. ಮೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಕಾರ್ಯ ನಿರ್ವಹಿಸಬೇಕು ಎಂಬುದು ನಾಗರಿಕರ ಅಗ್ರಹವಾಗಿದೆ.

raghavendra 1
+ posts

ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಾಘವೇಂದ್ರ
ರಾಘವೇಂದ್ರ
ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X