ಶಿವಮೊಗ್ಗ | ಜಯನಗರ ಪಿಎಸ್ಐ ನವೀನ್ ರಿಂದ ಆರೋಪಿ ಕಾಲಿಗೆ ಗುಂಡೇಟು

Date:

Advertisements

ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು, ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಬಿದ್ದಿದೆ. ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು ತಗುಲಿದೆ. ಬೆಂಗಳೂರಿನ‌ ಕಲ್ಕೆರೆ ನಿವಾಸಿಯಾದ ಆರೋಪಿ ಮಂಜುನಾಥ್ ಕಳ್ಳತನಕ್ಕಾಗಿ ಶಿವಮೊಗ್ಗ ನಗರದಲ್ಲಿ ಮೂರ್ನಾಲ್ಕು ದಿನದಿಂದ ಓಡಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಇತನ ವಿರುದ್ಧ 72 ಪ್ರಕರಣ ದಾಖಲಾಗಿವೆ ಇದರಲ್ಲಿ ಬಹುತೇಕ ಕಳ್ಳತನ ಪ್ರಕರಣಗಳಿದ್ದವು.

ನಗರದ ಗಾಂಧಿನಗರದಲ್ಲಿ ಮನೆಗಳ್ಳತನ ನಡೆದಿದ್ದ ಕುರಿತು ಏಪ್ರಿಲ್ ಅಲ್ಲಿ ನಡೆದ ಮನೆಗಳ್ಳತನದ ಬಗ್ಗೆ ನಿತಿನ್ ಎಂಬುವರು ದೂರದ ಠಾಣೆಯಲ್ಲಿ ದೂರು ನೀಡಿದ್ದರು. ಮನೆಯ ಒಳಗೆ ಇದ್ದ ಐ 20 ಕಾರ್ ನ್ನ ಹಾಗೂ ಸುಮಾರು 11,30,000 ಚಿನ್ನಾಭರಣ, ನಗದು ಹಾಗೂ ಇತರ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿದ್ದ ಪ್ರಕರಣ ದೂರು ದಾಖಲಾಗಿತ್ತು.

ಖಚಿತ ಮಾಹಿತಿ ಮೇರೆಗೆ ಜಯನಗರ ಠಾಣೆಯ ಪೊಲೀಸರು ಬಂಧನ ಮಾಡಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಮುಂದಾಗಿದ್ದು. ಪೊಲೀಸ್ ಸಿಬ್ಬಂದಿ ದ್ಯಾಮಪ್ಪನ ಮೇಲೆ ಕಲ್ಕೆರೆ ಮಂಜ ಹಲ್ಲೆ ಮಾಡಿದ್ದನು. ಪಿಎಸ್ಐ ನವೀನ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿ, ಎಚ್ಚರಿಕೆ ನೀಡಿದ್ರೂ ಚಾಕುವಿನಿಂದ ಹಲ್ಲೆ ನಡೆಸಿದ್ದನು.

Advertisements

ಈ ವೇಳೆ ಆತ್ಮರಕ್ಷಣೆಗೆ ನವೀನ್ ಕುಮಾರ್ ಆರೋಪಿ ಮಂಜನ ಕಾಲಿಗೆ ಫೈಯರ್ ಮಾಡಲಾಗಿದೆ. ಜಯನಗರ ಠಾಣೆ ಪಿಎಸ್ಐ ನವೀನ್ ಬ್ಯಾಕೋಡು ಫೈರಿಂಗ್ ಮಾಡಿದ್ದಾರೆ. ಬಳಿಕ ಆರೋಪಿ ಬಂಧನವಾಗಿದೆ.ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಹ ಆಸ್ಪತ್ರೆಗೆ ದಾಖಲು. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X