ಶಿವಮೊಗ್ಗ | ಆಫ್ರಿಕಾದ ಕಿಲಿಮಂಜರೋ ಪರ್ವತ ಏರಿದ ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿ

Date:

Advertisements

ಶಿವಮೊಗ್ಗ, ಪ್ರಪಂಚದ 19,340 ಅಡಿ ಎತ್ತರ ಶಿಖರ ಆಗಿರುವ ಆಫ್ರಿಕಾದಲ್ಲಿರುವ ಕಿಲಿ ಮಂಜಾರೋ ಪರ್ವತದ ತುತ್ತ ತುದಿಯನ್ನ ತಲುಪಿದ ಶ್ರೇಷ್ಠ ಸಾಧಕರ ಪಟ್ಟಿಯಲ್ಲಿ ನಿತ್ಯ ರಾವ್ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

ಸಮುದ್ರಮಟ್ಟದಿಂದ 5895 ಮೀಟರ್ ಎತ್ತರದಲ್ಲಿರುವ ಈ ಪರ್ವತವನ್ನು 6 ರಿಂದ 8 ದಿನಗಳ ಕಾಲ ಡೆಮೋಸಿ ಮಾರ್ಗದ ಮೂಲಕ ಶೂನ್ಯ ಉಷ್ಣಾಂಶದ ಕಠಿಣ ದಾರಿಯಲ್ಲಿ ಜ್ವಾಲಾಮುಖಿಯಿಂದ ನಿರ್ಮಿತವಾದ ಪರ್ವತವನ್ನ ಹತ್ತಿದ್ದಾರೆ.

ಇವರು ನಗರದ ಜ್ಞಾನದೀಪ ಶಾಲೆಯ ಮೇಲಿನ ಅಭಿಮಾನದಿಂದ ಹಾಗೂ ಹೆಮ್ಮೆಯಿಂದ ಜ್ಞಾನದೀಪ ಶಾಲೆಯ ಬಾವುಟವನ್ನು ಪರ್ವತದ ಮೇಲೆ ಹಾರಿಸಿದ್ದಾರೆ.

Advertisements

ಇವರು ಶಿವಮೊಗ್ಗದ ಪ್ರತಿಷ್ಠಿತ ಉಷಾ ನರ್ಸಿಂಗ್ ಹೋಮ್ ಆಸ್ಪತ್ರೆಯ ಡಾ|| ರಕ್ಷಾ ರಾವ್ ರವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇವರು ಶಿವಮೊಗ್ಗದ ಜ್ಞಾನದೀಪ ಶಾಲೆಯಲ್ಲಿ ೧೦ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇವರ ಶಿಖರ ಆರೋಹಣದ ಆಸಕ್ತಿಯನ್ನು ಗಮನಿಸಿದ ಶಾಲೆ ಸಂಪೂರ್ಣವಾಗಿ ಬೆಂಬಲವಾಗಿ ನಿಂತು ಸಾಧನೆಯಲ್ಲಿ ತನ್ನ ಪಾತ್ರವನ್ನು ನಿರ್ವಹಿಸಿತು.

ಈ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಜ್ಞಾನದೀಪ ಶಾಲೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಹಾಗೂ ಸಿಬ್ಬಂದಿ ವರ್ಗದವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X