ಶಿವಮೊಗ್ಗ | ವಿವಿಧ ಬೇಡಿಕೆಗೆ ಅಗ್ರಹಿಸಿ ಆಟೋ ಚಾಲಕ ಒಕ್ಕೂಟದ ಅಧ್ಯಕ್ಷ ಕಿರಣ್ ನೇತೃತ್ವದಲ್ಲಿ ಜಂಟಿ ಸಾರಿಗೆ ಆಯುಕ್ತರ ಭೇಟಿ

Date:

Advertisements

ಶಿವಮೊಗ್ಗ ಜಿಲ್ಲಾ ಆಟೋ ಚಾಲಕರ ಒಕ್ಕೂಟದಿಂದ ಸಾರಿಗೆ ಅಧಿಕಾರಿಯಾದ ಭೀಮನ ಗೌಡ ಪಾಟೀಲ್ ಜಂಟಿ ಸಾರಿಗೆ ಆಯುಕ್ತರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ಈ ಕೆಳಕಂಡ ಬೇಡಿಕೆಗಳನ್ನು ಅಧಿಕಾರಿಗಳಿಗೆ ತಿಳಿಸಿದ್ದು,

ಅದರಂತೆ ಮೊದಲನೇಯಾದಾಗಿ ತ್ವರಿತಗತವಾಗಿ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಿಪೇಯ್ಡ್ ಆಟೋ ಕೌಂಟರ್ ಆರಂಭ ಮಾಡಬೇಕು ಎಂದಿರುತ್ತಾರೆ.

ಎರಡನೇಯಾದಾಗಿ ಡ್ರೈವಿಂಗ್ ಲೈಸನ್ಸ್ ಇಲ್ಲದೆ ಆಟೋ ಚಾಲನೆ ಮಾಡುತ್ತಿರುವವರಿಗೆ ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮ ಜರುಗುಸಿಬೇಕು ಎಂದು ತಿಳಿಸಿದ್ದಾರೆ.ಹಾಗೂ ಹೆಚ್ಚಿನ ಆಟೋಗಳಿಗೆ ಪರ್ಮಿಟ್ ಇನ್ನು ಮುಂದೆ ನಿಲ್ಲಿಸಿ ಜೊತೆಗೆ ನಗರದಲ್ಲಿ ಹಾಲಿ ಇರುವ ಆಟೋಗಳಿಗೆ ಸೂಕ್ತ ಸ್ಟಾಂಡ್ ವ್ಯವಸ್ಥೆ ಇಲ್ಲದಾಗಿದೆ ಇದಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ತಿಳಿಸಿದ್ದಾರೆ.

Advertisements
1001578504

ಆಟೋ ಚಾಲಕರ ದಾಖಲೆಗಳು ಸರಿ ಇಲ್ಲದೆ ಇರುವ ಆಟೋಗಳನ್ನು ಅಧಿಕಾರಿಗಳು ಕೂಡಲೇ ಮಟ್ಟ ಹಾಕಬೇಕು ಎಂದು ತಿಳಿಸಿದ್ದಾರೆ. ನಗರದಲ್ಲಿ ಸಾವಿರಾರು ಆಟೋಗಳು ಆಗಿದ್ದು ಇದರ ಕುರಿತಾಗಿ ಮುಂದಿನ ದಿನಗಳಲ್ಲಿ ಈಗಿರುವ ಆಟೋಗಳನ್ನು ಹೊರತುಪಡಿಸಿ ಬೇರೆ ನೂತನ ಪರ್ಮಿಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ನಂತರ ಸಾರಿಗೆ ಆಯುಕ್ತರು ಮಾತನಾಡಿ ಪ್ರತಿಯೊಬ್ಬ ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು, ಆಟೋ ಮೀಟರ್ ಕಡ್ಡಾಯವಾಗಿ ಬಳಸಬೇಕು, ಆಟೋ ಚಾಲನೆ ಮಾಡುವಾಗ ಕಡ್ಡಾಯವಾಗಿ ದಾಖಲೆ ಲೈಸನ್ಸ್ ಇಟ್ಟುಕೊಳ್ಳತಕ್ಕದ್ದು ಎಂದಿದ್ದಾರೆ ಎಂಬ ಮಾಹಿತಿಯಾಗಿದೆ.

1001578506

ಹಾಗೆಯೇ ಬಹಳ ಆಟೋ ಚಾಲಕರು ನಗರದಲ್ಲಿ ಪ್ರಯಾಣಿಕರೊಂದಿಗೆ ದರ್ಪ ತೋರುತ್ತಿರುವುದು ಕಂಡು ಬರುತ್ತಿದೆ ಇದನ್ನು ಸರಿಪಡಿಸಿಕೊಂಡು ಪ್ರಯಾಣಿಕರಿಗೆ ಅನುಕೂಲವಾಗುವಂತೆ ನಡೆದುಕೊಳ್ಳಬೇಕು, ಇಲ್ಲವಾದರೆ ಕಾನೂನು ರೀತಿಯ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂಬ ಮಾಹಿತಿಯಾಗಿದೆ.

1001578503

ನಂತರ ಸಾರಿಗೆ ಆಯುಕ್ತರು ಆಟೋ ಚಾಲಕರ ಒಕ್ಕೂಟದವರಿಗೆ ನಿಮ್ಮ ಬೇಡಿಕೆಗಳನ್ನು ಮನವಿ ರೂಪದಲ್ಲಿ ನೀಡಿ ನಂತರ ಪರಿಷ್ಕರಿಸಿ ಮಾಹಿತಿ ತಿಳಿಸುತ್ತೇವೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷರಾದ ಕಿರಣ್, ಜಿಲ್ಲಾ ಉಪಾಧ್ಯಕ್ಷ ಯುಕೆ ವಿಜಯ್ ಕುಮಾರ್ ಉಪ್ಪಿನ ಮತ್ತು ಸತೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X