ಶಿವಮೊಗ್ಗ | ಧರ್ಮಾದಾಯ ದತ್ತಿ ತಿದ್ದುಪಡಿ ಮಸೂದೆಗೆ ಸಹಿ ಹಾಕದ ರಾಜ್ಯಪಾಲರ ವಿರುದ್ಧ ಗರಂ ಆದ ಕಲ್ಲೂರು‌ ಮೇಘರಾಜ್

Date:

Advertisements

ಶಿವಮೊಗ್ಗ, ರಾಜ್ಯ ಸರ್ಕಾರ ತಂದಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2024 ರಲ್ಲಿ ಉದ್ದೇಶಿಸಿದಂತೆ ‘ಎ’ ವರ್ಗದ ದೇವಸ್ಥಾನಗಳಿಂತತ್ವದ ಸಂಗ್ರಹವಾಗುವ ನಿಧಿಯಲ್ಲಿ ಶೇ.10% ಭಾಗ ಪ್ರತ್ಯೇಕಿಸಿ, ರಾಜ್ಯದಲ್ಲಿ ದುಸ್ಥಿತಿಯಲ್ಲಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ನೀಡಿ ಆ ದೇವಸ್ಥಾನಗಳ ಮತ್ತು ಅರ್ಚಕರ ಅಭಿವೃದ್ಧಿಗೆ ವಿನಿಯೋಗಿಸುವ ಸದುದ್ದೇಶದ ವಿಧೇಯಕಕ್ಕೆ ಕರ್ನಾಟಕ ರಾಜ್ಯದ ರಾಜ್ಯಪಾಲರು ಸಹಿ ಮಾಡದೇ ರಾಜ್ಯ ಸರ್ಕಾರಕ್ಕೆ ವಾಪಾಸ್‌ ಕಳುಹಿಸಿರುವುದು ಖಂಡನೀಯ ಎಂದು ಶಾಂತವೇರಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಟ್ರಸ್ಟನ‌ ಮುಖ್ಯಸ್ಥ ಕಲ್ಲೂರು‌ ಮೇಘರಾಜ, ಪ್ರತಿ ವಿಷಯದಲ್ಲಿಯೂ ರಾಜ್ಯಪಾಲರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಆರೋಪಿಸಿದರು.

ರಾಜ್ಯದಲ್ಲಿ ಮುಜರಾಯಿ ಇಲಾಖೆಯಲ್ಲಿ ‘ಎ’ ವರ್ಗದ 205, ‘ಚ’ ವರ್ಗದ 195 ಮತ್ತು ‘ಸಿ’ ವರ್ಗದ 34,217 ದೇವಾಲಯಗಳವೆ ಎಂದು ಇಲಾಖೆಯ ಅಂಕಿ ಅಂಶಗಳು ಹೇಳುತ್ತವೆ. `ಸಿ’ ವರ್ಗದ 34.217 ದೇವಸ್ಥಾನಗಳ ಪೈಕಿ 1,150 ‘ಸಿ’ ವರ್ಗದ ದೇವಸ್ಥಾನಗಳು ಬೆಂಗಳೂರು ನಗರದಲ್ಲಿವೆ. ‘ಸಿ ವರ್ಗದ ಬಹುತೇಕ ದೇವಾಲಯಗಳು ಗ್ರಾಮೀಣ ಪ್ರದೇಶಗಳಲ್ಲವೆ. ನಗರ ಪ್ರದೇಶಗಳ ದೇವಸ್ಥಾನಗಳಿಗೆ ನಿತ್ಯವೂ ಭಕ್ತರು ಭೇಟಿ ನೀಡುತ್ತಾರೆ ಮತ್ತು ಭಕ್ತರಿಂದ ಕಾಣಿಕೆ ಹಣ ಸಂಗ್ರಹವಾಗುತ್ತೆ. ಆದರೆ ಗ್ರಾಮೀಣ ಭಾಗದ ದೇವಾಲಯಗಳ ಸ್ಥಿತಿ ಬೇರೆಯೇ ಆಗಿದೆ.

Advertisements

ಊರಹಬ್ಬ, ಜಾತ್ರೆ ಮತ್ತು ಕೆಲವು ವಿಶೇಷ ದಿನಗಳನ್ನು ಹೊರತುಪಡಿಸಿ ಗ್ರಾಮೀಣ ದೇವಾಲಯಕ್ಕೆ ಹೋಗುವವರ ಭಕ್ತಾಧಿಗಳ ಸಂಖ್ಯೆ ಅತೀ ವಿರಳ. ಹಾಗಾಗಿ ಈ ಗ್ರಾಮೀಣ ಭಾಗದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ, ಸುಣ್ಣ-ಬಣ್ಣಕ್ಕೆ ಮತ್ತು ಅರ್ಚಕರಿಗೆ ತಸ್ತಿಕ್ ಹಣ ನೀಡುವುದು ಅಸಾಧ್ಯವಾಗಿದೆ ಎಂದರು.

ಈ ಹಿನ್ನಲೆಯಲ್ಲಿ ‘ಎ’ ವರ್ಗದ ದೇವಸ್ಥಾನಗಳಿಂದ ಸಂಗ್ರಹವಾಗುವ ನಿಧಿಯಲ್ಲಿ ಶೇ.10 ರ ಅನುದಾನವನ್ನು ಪ್ರತ್ಯೇಕಿಸಿ ‘ಸಿ’ ವರ್ಗದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಮತ್ತು ಅರ್ಚಕರ ಜೀವನಾಭಿವೃದ್ಧಿಗೆ ಬಳಸಲು ನಿರ್ಧರಿಸಿ, ರಾಜ್ಯದ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಅನುಮೋದನೆಗೊಂಡ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2024 ಕ್ಕೆ ರಾಷ್ಟ್ರಪತಿಗಳು ಅನುಮೋದನೆ ನೀಡಬೇಕೆಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ತಿದ್ದುಪಡಿ ಕಾನೂನಿನಲ್ಲಿ ಅರ್ಚಕರಿಗೆ ನೀಡುವ ತಸ್ತಿಕ್ ಹಣವನ್ನು ರೂ.5,000/- ಗಳಿಂದ ರೂ.10,000/- ಗಳಿಗೆ ಹೆಚ್ಚಿಸಬೇಕೆಂದು ನಮ್ಮ ಸಂಘಟನೆಯು ಇದೇ ಸಂದರ್ಭದಲ್ಲಿ ಒತ್ತಾಯಿಸುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿನ‌‌ ಸದಸ್ಯರಾದ ನಾಗೇಶರಾವ, ಹೊಳೆಮಡಿಲು ವೆಂಕಟೇಶ , ಜನಮೇಜಿರಾವ್, ಸಂಗಯ್ಯ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X