ಶಿವಮೊಗ್ಗ | ಧಾರ್ಮಿಕ ಆಚರಣೆಗಳು ಶಾಂತಿಯುತವಾಗಿರಲಿ ; ಗುರುದತ್ತ ಹೆಗಡೆ

Date:

Advertisements

ಶಿವಮೊಗ್ಗ ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಶಿವಮೊಗ್ಗದಲ್ಲಿ ನಡೆಯುವ ಯಾವುದೇ ಧರ್ಮದ ಧಾರ್ಮಿಕ ವಿಧಿಗಳು, ಹಬ್ಬದ ಆಚರಣೆಗಳು ಶಾಂತಿಯುತವಾಗಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿಯೂ ಸದಾ ಕೂಡಿ ಬಾಳುವ, ನಾಡಿಗೆ ಏಕತೆ, ಭಾವೈಕ್ಯತೆಯ ಸಂದೇಶ ಸಾರುವ ನೆಲ ನಮ್ಮದಾಗಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಅವರು ಬುಧವಾರ ಮುಸ್ಲಿಂ ಸಮುದಾಯದ ಪವಿತ್ರ ಹಬ್ಬ ಬಕ್ರೀದ್ ಆಚರಣೆಯ ಕುರಿತು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಾಂತಿ ಸೌಹಾರ್ಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಬ್ಬಗಳು ಸಡಗರ, ಸಂಭ್ರಮಗಳಿಂದ ಆಚರಿಸಬೇಕು. ಶಾಂತಿ ಸಂದೇಶದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ಕುಟುಂಬಗಳ ನೆಮ್ಮದಿಯ ಬದುಕಿದೆ. ವೈಯಕ್ತಿಗೆ ಏಳಿಗೆ ಅಡಗಿದೆ . ವಿಶೇಷವಾಗಿ ಇಂತಹ ಕಾಲದಲ್ಲಿ ಎಲ್ಲರೂ ನಿರ್ಭಯವಾಗಿ ಆತಂಕ ರಹಿತ ಜೀವನ ನಿರ್ವಹಿಸುವಂತಾಗಬೇಕು ಎಂದ ಅವರು, ಎಲ್ಲರೂ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು. ನಡೆಯುವ ಸಂಭಾವ್ಯ ಅಹಿತಕರ ಘಟನೆಗಳ ಸಂದರ್ಭದಲ್ಲಿ ಜಿಲ್ಲಾಡಳಿತ ತಮ್ಮ ನೆರವಿಗೆ ಧಾವಿಸಲಿದೆ ಎಂದವರು ನುಡಿದರು.

ಒಬ್ಬ ವ್ಯಕ್ತಿಯ ನೋವಿನಲ್ಲಿ ಮತ್ತೊಬ್ಬರು ಸಂಭ್ರಮಿಸುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಪರಸ್ಪರರಲ್ಲಿ ಸಾಮರಸ್ಯ, ಸೌಹಾರ್ಧತೆ ಮೂಡಬೇಕು. ಅಂತಹ ವಾತಾವರಣವನ್ನು ನಾವೇ ಸೃಜಿಸಿಕೊಳ್ಳಬೇಕು. ವದಂತಿಗಳನ್ನು ನಂಬಬೇಡಿ ಹಾಗೂ ಅವುಗಳನ್ನು ಹರಡಬೇಡಿ. ಯುವಜನತೆ ತಾಳ್ಮೆಯಿಂದ ವರ್ತಿಸುವಂತೆ ಹಿರಿಯರು ಸಕಾಲಿವಾಗಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.ಎಲ್ಲರೂ ಕಾನೂನನ್ನು ಗೌರವಿಸಿ, ಅಂತೆಯೇ ಪಾಲಿಸಿ.

Advertisements

ಆಕಸ್ಮಿಕ ಘಟನೆಗಳು ನಡೆದಾಗ ತಕ್ಷಣದ ಅಗತ್ಯಗಳಿಗಾಗಿ ಪೊಲೀಸ್‌ಇಲಾಖೆ ಅಧಿಕಾರಿಗಳು ಹಾಗೂ ಸಮೀಪದ ಅಧಿಕಾರಿಗಳನ್ನು ಸಂಪರ್ಕಿಸಿ, ಚರ್ಚಿಸಿ. ತಕ್ಷಣದ ಪರಿಹಾರಕ್ಕಾಗಿ ಏಕಪಕ್ಷೀಯವಾದ ಆತುರದ ನಿರ್ಧಾರಗಳು ಬೇಡ ಎಂದವರು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್‌ಅವರು ಮಾತನಾಡಿ, ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಎಲ್ಲಾ ಧರ್ಮದ ಬಾಂಧವರು ಸಹಕರಿಸಬೇಕು. ಸುಳ್ಳು ಸುದ್ದಿಗಳಿಗೆ ಕಿವಿಕೊಡಬೇಡಿ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X