ಶಿವಮೊಗ್ಗ | ಭದ್ರಾಪುರದ ಸರ್ಕಾರಿ ಶಾಲೆಯಲ್ಲಿ ಸಾಕ್ಷರತಾ ದಿನಾಚರಣೆ, ಸಪ್ತಾಹ ಕಾರ್ಯಕ್ರಮ

Date:

Advertisements

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಈ ದಿನ ಸರ್ಕಾರಿ ಶಾಲೆಯಲ್ಲಿ ಸಾಕ್ಷರತಾ ದಿನಾಚರಣೆ ಆಚರಣೆ ಕುರಿತು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಕೂಡ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭದ್ರಾಪುರ ಶಾಲೆ ಆವರಣದಲ್ಲಿ ನಡೆದ ಸಾಕ್ಷರತಾ ದಿನಾಚರಣೆ ಮತ್ತು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅನಕ್ಷರಸ್ಥರು ಸರಳ ಓದು ಬರಹ ಲೆಕ್ಕಾಚಾರದ ಕೌಶಲಗಳನ್ನುಗಳಿಸುವ ಮೂಲಕ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬಹುದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್ ಹೇಳಿದರು.

1002208120

ಕಲಿತವರು ಕಲಿಯದವರಿಗೆ ಕಲಿಸುವ ಮೂಲಕ ಸಾಕ್ಷರತೆ ಪ್ರಮಾಣ ಹೆಚ್ಚಿಸಬೇಕು. ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ಈ ದಿಸೆಯಲ್ಲಿ ಪ್ರಯತ್ನಿಸಬೇಕು, ಸಂಪೂರ್ಣ ಸಾಕ್ಷರತೆ ಸಾಧಿಸಲು ಶ್ರಮಿಸಬೇಕೆಂದರು.

ಸಿ.ಆರ್.ಪಿ ದೊರಿಗ್ಯಾನಾಯ್ಕ ಸಾಕ್ಷರತಾ ಪ್ರಮಾಣ ವಚನ ಬೋಧಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹರೀಶ್ ಅದ್ಯಕ್ಷತೆ ವಹಿಸಿದ್ದರು.

ಸದಸ್ಯರಾದ ಪಾಲಾಕ್ಷಪ್ಪ ಜಗಧೀಶಪ್ಪ ,ಗ್ಯಾರಂಟಿ ಸಮಿತಿ ಸದಸ್ಯ ವಾಗೀಶ್, ಮುಖ್ಯ ಶಿಕ್ಷಕ ಕೆ.ಪ್ರಕಾಶ್, ಪಂಚಾಯತಿ ಅದ್ಯಕ್ಷೆ ರತ್ನಮ್ಮ ಉಪಾಧ್ಯಕ್ಷೆ ಅನ್ನಪೂರ್ಣ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಬಿಲ್ ಕಲೆಕ್ಟರ್ ಪ್ರಭಾಕರ್, ಶಿಕ್ಷಕ ವಿಜಯ ಕುಮಾರ್, ಅಬ್ಬನಗಟ್ಟೆ ರಂಗಪ್ಪ,ಕೂಡ್ಲಿ ಉಮೇಶಪ್ಪ ಶಿಕ್ಷಕಿಯರಾದ ವನಿತಾ, ದೀಪಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಾಕ್ಷರತಾ ಕಾರ್ಯಕ್ರಮದ ತಾಲ್ಲೂಕು ನೋಡೆಲ್ ಅಧಿಕಾರಿ ಧನಂಜಯ ಸ್ವಾಗತಿಸಿದರು. ಶಿಕ್ಷಕಿ ವಿನುತಾ ಪ್ರಾರ್ಥಿಸಿದರು. ಕೃಷ್ಣಮೂರ್ತಿ ನಿರೂಪಿಸಿ ಪಿ.ಕೆ. ರಮೇಶ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X