ಶಿವಮೊಗ್ಗ | ಮೇ-17ರ ಶನಿವಾರ ಹಿಂದುಳಿದ ವರ್ಗಗಳ ಮುಖಂಡರ ಭೇಟಿ

Date:

Advertisements

ಜಿಲ್ಲೆಯಲ್ಲಿ ಹಿಂದುಳಿದ ಜಾತಿಗಳ ಸಂಘಟನೆ ಸಲುವಾಗಿ ರಾಜ್ಯದ ಹಿಂದುಳಿದ ವರ್ಗಗಳ ಮುಖಂಡರು ಇದೆ ಮೇ-17 ರಂದು ಶನಿವಾರ ಶಿವಮೊಗ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಸಂಚಾಲಕರಾದ ಆರ್ ಟಿ ನಟರಾಜ್ ತಿಳಿಸಿದರು.

ಅಂದು ಸಂಜೆ ನಾಲ್ಕು ಗಂಟೆಗೆ ನಗರದ ಆರ್.ಟಿ.ಒ. ರಸ್ತೆಯಲ್ಲಿರುವ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಸಭೆ ಏಪಾ೯ಟಾಗಿದ್ದು ಸ್ಥಳೀಯ ಹಾಗು ಜಿಲ್ಲೆಯ ಹಿಂದುಳಿದ ವಗ೯ಗಳ ನಾಯಕರ ಜೊತೆ ಮಾತುಕತೆ ಜರುಗಲಿದೆ ಎಂದರು.

ಅಬಕಾರಿ ಇಲಾಖೆ, ಆದಾಯ ತೆರಿಗೆ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ರೈಲ್ವೆ ಇನ್ನಿತರೆ ಇಲಾಖೆಗಳಲ್ಲಿ ಅತ್ಯುನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಹಿಂದುಳಿದ ವರ್ಗಗಳ ಮುಖಂಡರು ಹಿಂದುಳಿದ ಜಾತಿಗಳ ಸಂಘಟನೆಗಾಗಿ ಕೈಗೊಳ್ಳಬಹುದಾದ ಕಾಯ೯ಕ್ರಮಗಳ ಕುರಿತು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದಾರೆ.

Advertisements
1001606680

ಈ ಹಿನ್ನೆಲೆಯಲ್ಲಿ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಸಭೆ ಸೇರಿದ್ದ ಹಿಂದುಳಿದ ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಮೇ-17 ರ ಹಿಂದುಳಿದ ವರ್ಗಗಳ ಮುಖಂಡರ ಸಭೆಯನ್ನು ಯಶಸ್ವಿಯಾಗಿ ನಡೆಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಚಚಿ೯ಸಿದರು.

ಹಿಂದುಳಿದ ಜನ ಜಾಗೃತಿ ವೇದಿಕೆ ಸಂಚಾಲಕ ಆರ್.ಟಿ. ನಟರಾಜ್ ಸವ೯ರನ್ನು ಸ್ವಾಗತಿಸಿ ವಿಷಯ ಪ್ರಸ್ತಾಪಿಸಿದರು, ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್, ಉಪಾಧ್ಯಕ್ಷರುಗಳಾದ ಪ್ರೊ. ಜಿ. ಪರಮೇಶ್ವರಪ್ಪ, ಪ್ರೊ. ಉಮೇಶ್ ಯಾದವ್, ಪಾಂಡುರಂಗಪ್ಪ, ರಘು ಮಲ್ಲಣ್ಣನವರ್, ಸಂಘಟನಾ ಕಾಯ೯ದಶಿ೯ ಚನ್ನವೀರಪ್ಪ ಗಾಮನಗಟ್ಟಿ, ನರಸಿಂಹ, ಮಹಿಳಾ ಘಟಕದ ಸಂಚಾಲಕಿ ಎಸ್.ವಿ. ರಾಜಮ್ಮ, ಪ್ರಭಾವತಿ, ವರಲಕ್ಷ್ಮಿ ತೀಥ೯ಹಳ್ಳಿ, ವನಜಾಕ್ಷಿ, ಲತಾ ತೀಥ೯ಹಳ್ಳಿ, ರೋಹಿಣಿ, ಲತಾ ಬೊಮ್ಮನಕಟ್ಟೆ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X