ಶಿವಮೊಗ್ಗ | ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ; ರವಿಕುಮಾರ್

Date:

Advertisements

ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ ಎಂದು ಭೋವಿ ಸಮಾಜದ ಜನರಿಗೆ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ಹೆಚ್ .ಎನ್, ನಾಗಮೋಹನ್ ದಾಸ್ ಅವರ ನೇತೃತ್ವದ ಏಕ ಸದಸ್ಯ ಆಯೋಗದ ಮೂಲಕ ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಭೋವಿ ಸಮಾಜದ ಜನರು, ಕಡ್ಡಾಯವಾಗಿ ಪಾಲ್ಗೊಳ್ಳುವುದರ ಜತೆಗೆ ಯಾವುದೇ ಗೊಂದಲಕ್ಕೆ ಸಿಲುಕದ ಜಾತಿ ಕಾಲಂನಲ್ಲಿ ಭೋವಿ ಅಥವಾ ವಡ್ಡರ ಎಂದೇ ನಮೂದಿಸಬೇಕೆಂದು ಮನವಿ ಮಾಡಿದರು.

ರಾಜ್ಯಾದ್ಯಂತ ಸಮೀಕ್ಷೆ ಕಾರ್ಯವು ಮೇ. ೫ ರಿಂದಲೇ ಆರಂಭಗೊಂಡಿದೆ. ಜಿಲ್ಲೆಯಲ್ಲೂ ಸಮೀಕ್ಷೆಗೆ ನಿಯೋಜಿತಗೊಂಡ ಸಿಬ್ಬಂದಿ ಮನೆ ಮನೆಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಸಮಾಜದ ಜನರು ಯಾವುದೇ ನೆಪ ಹೇಳಿ ತಪ್ಪಿಸಿಕೊಳ್ಳದೆ ಅಥವಾ ತಾತ್ಸಾರ ಮಾಡದೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕಿದೆ.

Advertisements

ಯಾಕೆಂದರೆ ಈ ಸಮೀಕ್ಷೆಯಲ್ಲಿನ ಜಾತಿವಾರು ಅಂಕಿಅಂಶಗಳು ನಮ್ಮ ಸಮಾಜದ ಮುಂದಿನ ಭವಿಷ್ಯವನ್ನು ನಿರ್ಧಾರ ಮಾಡಲಿದೆ. ಜಾತಿವಾರು ಜನಸಂಖ್ಯೆಯ ಆಧಾರದ ಮೇಲೆಯೇ ಒಳ ಮೀಸಲು ಹಂಚಿಕೆಯಾಗುವ ಸಾಧ್ಯತೆಗಳಿವೆ. ಹಾಗಾಗಿ ಸಮಾಜದ ಜನರು ಯಾವುದೇ ಕಾರಣಕ್ಕೂ ಸಮೀಕ್ಷೆ ಕಾರ್ಯದಿಂದ ಮಾಡಿದ್ದಾರೆ ಎಂದಿದ್ದಾರೆ.

ಸಮೀಕ್ಷೆಯ ಸಂದರ್ಭದಲ್ಲಿ ಸಮೀಕ್ಷೆಗೆ ನಿಯೋಜಿತವಾದ ಸಿಬ್ಬಂದಿ ಆದಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ಕೇಳುತ್ತಿದ್ದಾರೆನ್ನುವ ಬಗ್ಗೆ ಜನರು ದೂರಿದ್ದಾರೆ. ಇದು ಎಷ್ಟು ವಾಸ್ತವವೋ ಗೊತ್ತಿಲ್ಲ, ಆದರೆ ಪರಿಶಿಷ್ಟ ಜಾತಿಗಳ ಒಳ ಮೀಸಲು ಹಂಚಿಕೆಗೆ ಸಂಬಂಧಿಸಿದ ಸಮೀಕ್ಷೆ ಮಾತ್ರ ಇದಾಗಿರುವುದರಿಂದ ಸರ್ಕಾರದ ನಿರ್ಧಿಷ್ಟ ಸೂಚನೆಗಳ ಮೇಲೆಯೇ ಸಮೀಕ್ಷದಾರರು ಜಾತಿವಾರು ದತ್ತಾಂಶಗಳನ್ನು ದಾಖಲು ಮಾಡಿಕೊಳ್ಳಬೇಕೆ ಹೊರತು, ಅವರ ಇಚ್ಚೆಗೆ ಅನುಸಾರ ಮಾಹಿತಿ ಸಂಗ್ರಹಿಸುವಂತಿಲ್ಲ.

ಅಂತಹ ಯಾವುದೇ ಘಟನೆಗಳು ಕಂಡು ಬಂದಲ್ಲಿ ಅಥವಾ ಅಧಿಕಾರಿಗಳು ಜಾತಿ ಹೆಸರನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ನಮೂದಿಸಿಕೊಂಡಲ್ಲಿ ಸಮಾಜದ ಮುಖಂಡರ ಗಮನಕ್ಕೆ ತರಬಹುದು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X