ಶಿವಮೊಗ್ಗ | ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಕಾರಾಗೃಹವಾಸ ಸಜೆ

Date:

Advertisements

ಶಿವಮೊಗ್ಗ, ಮೇ 08 ರಂದು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್‌ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶಿಸಿರುತ್ತಾರೆ.

ಲಕ್ಕಿನಕೊಪ್ಪ ಕಡೆಗೆ ಬರುವ ಸಾರ್ವಜನಿಕ ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಸಂಖ್ಯೆ ಕೆ.ಎ 14 ಇಎ 5998 ರಲ್ಲಿ ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೇ ಕಾನೂನು ಬಾಹಿರವಾಗಿ, ಗಾಂಜಾ ಮಾರಾಟ ಮಾಡುವ ಹಾಗೂ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ದಿ: 08-07-2021 ರಂದು ತಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊAದಿಗೆ ದಾಳಿ ಮಾಡಿ ಸದರಿ ಬೈಕ್‌ನಲ್ಲಿ ಕಾನೂನು ಬಾಹಿರವಾಗಿ ಆರೋಪಿತರು ಸಾಗಾಣಿಕೆ ಮಾಡುತ್ತಿದ್ದ 3 ಕೆಜಿ 380 ಗ್ರಾಮ್ ತೂಕದ ಒಣ ಗಾಂಜಾವನ್ನು ಪಂಚರ ಸಮಕ್ಷಮ ಅಮಾನತುಪಡಿಸಿಕೊಂಡು ಆರೋಪಿತರಾದ ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ಇವರ ವಿರುದ್ದ ಪ್ರಕರಣ ದಾಖಲಿಸಿ, ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣವು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಸಾಕ್ಷಿಗಳ ಸಾಕ್ಷö್ಯದ ಮತ್ತು ಇನ್ನಿತರ ಪೂರಕ ಸಾಕ್ಷಾö್ಯಧಾರಗಳ ಆಧಾರದ ಮೇಲೆ ಹಾಗೂ ಸರ್ಕಾರದ ಪರ ಅಭಿಯೋಜಕರು ಮಂಡಿಸಿದ ವಾದವನ್ನು ನ್ಯಾಯಾಲಯವು ಪುರಸ್ಕರಿಸಿ, ಆರೋಪಿಗಳ ಮೇಲಿನ ಆರೋಪ ದೃಢಪಟ್ಟಿದ್ದರಿಂದ ಆರೋಪಿಗಳಿಗೆ 4 ವರ್ಷಗಳ ಸಾಮಾನ್ಯ ಕಾರಾಗೃಹ ವಾಸ ಸಜೆ ಮತ್ತು ರೂ. 25 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿರುತ್ತಾರೆ.

Advertisements

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀ ಸುರೇಶ್ ಕುಮಾರ್ ಎ.ಎಂ ವಾದವನ್ನು ಮಂಡಿಸಿದ್ದರು ಎಂದು ಸರ್ಕಾರಿ ಅಭಿಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X