ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ₹5.5 ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ಮಾಲೀಕರೊಬ್ಬರು ಕಳೆದ ಒಂದು ವರ್ಷದಿಂದ ಇಬ್ಬರು ವ್ಯಕ್ತಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದರು.
ಜುಲೈ 8 ರಂದು, ಈ ಇಬ್ಬರು ಆರೋಪಿಗಳು ಕಾಳುಮೆಣಸು ನೀಡುವುದಾಗಿ ಹೇಳಿ ಮಂಡಿ ಮಾಲೀಕರಿಂದ ಮುಂಗಡವಾಗಿ ಹಣ ಪಡೆದಿದ್ದಾರೆ.
ಒಬ್ಬ ಆರೋಪಿ ₹2.5 ಲಕ್ಷ ಮತ್ತು ಇನ್ನೊಬ್ಬ ಆರೋಪಿ ₹2.5 ಲಕ್ಷ – ಹೀಗೆ ಒಟ್ಟು ₹5 ಲಕ್ಷ ಪಡೆದಿದ್ದಾರೆ ಎನ್ನಲಾಗಿದೆಆದರೆ, ಹಣ ಪಡೆದ ನಂತರವೂ ಆರೋಪಿಗಳು ಕಾಳುಮೆಣಸು ಪೂರೈಸದೆ ಮತ್ತು ಹಣವನ್ನು ಸಹ ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆ ಎಂದು ಮಂಡಿ ಮಾಲೀಕರು ಆರೋಪಿಸಿದ್ದಾರೆ.
ಈ ವಂಚನೆಯ ಕುರಿತು ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.