ಶಿವಮೊಗ್ಗ | ನೀರಿನ ಬಾಟಲಿ ಮೇಲೆ ರಾಷ್ಟ್ರಧ್ವಜದ ಚಿತ್ರ ; ಶೀಘ್ರ ತೆರವಿಗೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

Date:

Advertisements

ಶಿವಮೊಗ್ಗ, ರಿಲಯನ್ಸ್ ಸಂಸ್ಥೆಯ ಸಹ ಬಾಗಿತ್ವದಲ್ಲಿರುವ ಕ್ಯಾಂಪಾ ಕೋಲ ಕುಡಿಯುವ ನೀರಿನ ಬಾಟಲಿಯ ಮೇಲೆ ಪ್ಲಾಸ್ಟಿಕ್‌ನಲ್ಲಿ ರಾಷ್ಟ್ರಧ್ವಜದಂತೆ ಕಾಣುವ ಚಿತ್ರವನ್ನು ಮುದ್ರಿಸಿ, ಸಗಟು ಮಾರಟ ಹಾಗೂ ಚಿಲ್ಲರೇ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಕರವೇ ಸ್ವಾಭಿಮಾನಿ ಬಣ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮುಂದುವರೆದು ಮಾತನಾಡಿದ ಜಿಲ್ಲಾಧ್ಯಕ್ಷ ಕಿರಣ್, ಕೆಲವೊಂದು ಆಹಾರ ಪದಾರ್ಥದ ಚೀಲದ ಮೇಲೂ ಸಹ ರಾಷ್ಟ್ರಧ್ವಜವನ್ನು ಹೋಲುವ ಚಿಹ್ನೆ ಸಹ ಮುದ್ರಿತವಾಗಿರುತ್ತದೆ.

ಈ ಬಾಟಲಿಯು ಜನರು ಕುಡಿದ ಮೇಲೆ ಎಲ್ಲಿಂದಲ್ಲಿ ಎಸೆಯುವ ಪ್ರವೃತ್ತಿಯನ್ನು ಹೊಂದಿರುತ್ತಾರೆ. ಅಲ್ಲದೇ ಆ ಬಾಟಲಿಯನ್ನು ಎಲ್ಲರೂ ತುಳಿದುಕೊಂಡು ಓಡಾಡುವ ಸಂದರ್ಭ ಇರುತ್ತದೆ. ಈ ಬಾಟಲಿಯ ಮೇಲೆ ನಮ್ಮ ದೇಶದ ರಾಷ್ಟ್ರಧ್ವಜ ಹೋಲುವ ಚಿತ್ರವನ್ನು ಮುದ್ರಿಸುವುದರಿಂದ ಅದನ್ನು ತುಳಿಯುವುದು ಎಸೆಯುವುದು ಅಗೌರವ ತೋರಿದಂತಾಗುತ್ತದೆ ಎಂದು ಅಕ್ಷಪಿಸಿದ್ದಾರೆ.

Advertisements

ನಾಳೆ ಸ್ವಾತಂತ್ರ್ಯ ದಿನಾಚರಣೆ ಅಂಗಾವಾಗಿ ಧ್ವಜಾರೋಹಣಕ್ಕೆ ಸಾವಿರಾರು ಸಂಖ್ಯೆ ಜನರು ಸೇರುವುದರಿಂದ ಎಲ್ಲೆಂದರಲ್ಲಿ ನೀರಿನ ಬಾಟಲಿಗಳು ಎಸೆಯುವ ಸಾಧ್ಯತೆ ಹೆಚ್ಚಿದ್ದು, ಆದ್ದರಿಂದ ಧ್ವಜದ ರೀತಿ ಕಾಣುವ ಚಿಹ್ನೆಗೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತಾಗುತ್ತದೆ.

ಹಾಗಾಗಿ ಆ ಬಾಟಲಿಯ ಮೇಲೆ ಇರುವ ಚಿತ್ರವನ್ನು ನಿಷೇಧಿಸುವಂತೆ ಈ ಕೂಡಲೇ ಕ್ರಮ ಕೈಗೊಳ್ಳಬೇಕಾಗಿ ದೂರು ನೀಡುತ್ತಿದ್ದೇವೆ ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X