ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

Date:

Advertisements

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲುದ್ದೇಶಿಸಲಾಗಿದ್ದು, ಇದರ ಪೂರ್ವಸಿದ್ಧತೆಯ ಸಭೆಯನ್ನು ಆ.23 ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಆರು ಜಿಲ್ಲೆಗಳ ಅಹಿಂದ ನಾಯಕರು ಇದರಲ್ಲಿ ಪಾಲ್ಗೊಳ್ಳುವರು ಎಂದು ಅಹಿಂದ ರಾಜ್ಯ ಸಂಚಾಲಕ ಸಾಗರದ ತೀ.ನ. ಶ್ರೀನಿವಾಸ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 1996ರಲ್ಲಿ 43 ಸಾವಿರ ಎಕರೆ ಜಮೀನನ್ನು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿದೆ. ಅರಣ್ಯ ಇಲಾಖೆಯೇ 2೦ ಸಾವಿರ ಕುಟುಂಬಗಳಿಗೆ ಜಮೀನು ಮಂಜೂರು ಮಾಡಬೇಕೆಂದು ಶಿಫಾರಸ್ಸು ಮಾಡಿ, 25 ವರ್ಷಗಳಾದರೂ ಒಂದೂ ಕುಟುಂಬಕ್ಕೂ ಜಮೀನು ಮಂಜೂರಾತಿ ನೀಡಿಲ್ಲ. ರೈತರ ದಾಖಲೆ ಅರಣ್ಯಭವನದಲ್ಲಿ ನಾಶವಾಗಿದೆ ಎಂದು ಹೇಳುತ್ತಿದ್ದಾರೆ ಎಂದರು.

ವಿದ್ಯುತ್ ಯೋಜನೆ, ಕೃಷಿಗಾಗಿ ಅಣೆಕಟ್ಟು ಕಟ್ಟಲು ತಮ್ಮ ಭೂಮಿ, ಮನೆಗಳನ್ನು ತ್ಯಾಗಮಾಡಿದ ಶರಾವತಿ, ತುಂಗಭದ್ರ, ವರಾಹಿ, ಚಕ್ರಾ, ಸಾವೇಹಕ್ಲು, ಅಂಬ್ಲಿಗೊಳ ಮುಳುಗಡೆ ಸಂತ್ರಸ್ಥರಿಗೆ ಇನ್ನೂ ಜಮೀನು ಕೊಟ್ಟಿಲ್ಲ. ಅಹಿಂದ ವರ್ಗದವರು ಶೇ.೭೫ರಷ್ಟು ಜನಸಂಖ್ಯೆ ಇದ್ದರೂ ದೇಶದಲ್ಲಿ ಸಾಮಾಜಿಕ ನ್ಯಾಯ ಕೊಟ್ಟಿಲ್ಲ ಎಂದರು.

Advertisements

ವಿ.ಪಿ. ಸಿಂಗ್, ಮಂಡಲ್ ವರದಿ ಜಾರಿ, ದೇವರಾಜ ಅರಸು ಹಾಗೂ ಹಾವನೂರು ಆಯೋಗದ ವರದಿ ಜಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವ ಜನಪ್ರತಿನಿಧಿಗಳು ಈ ಬಗ್ಗೆ ಕಾರ್ಯ ಮಾಡಿಲ್ಲ.

ಕಾಂತ್‌ರಾಜ್ ಆಯೋಗ ವರದಿ, ಅಂಕಿಅಂಶ 1೦ ವರ್ಷದ ಹಿಂದಿನದ್ದು ಎಂದು ಹೇಳಿ ಸರ್ಕಾರ ಘೋಷಿಸಿದೆ. ಸರ್ಕಾರ ಸಾಮಾಜಿಕ ಹೊಸದಾಗಿ ಸರ್ವೆ ಮಾಡುವುದಾಗಿ ನ್ಯಾಯಕ್ಕೆ ಸಂಚಕಾರ ತಂದಿದ್ದು ಸಾಮಾಜಿಕ ಹೋರಾಟ ನ್ಯಾಯ ನೀಡಬೇಕು ಅದನ್ನು ಪಡೆಯುವ ಮಾಡಲು ತೀರ್ಮಾನ ಮಾಡಬೇಕಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

Download Eedina App Android / iOS

X