ಶಿವಮೊಗ್ಗ | ಜು.26ರಂದು ಪತ್ರಿಕಾ ದಿನಾಚರಣೆ: ಸಾಧಕ ಪತ್ರಕರ್ತರಿಗೆ ಸನ್ಮಾನ

Date:

Advertisements

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ,ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 26ರ ಶನಿವಾರದಂದು ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗದ ಪತ್ರಕರ್ತರ ಸಂಘದ ನಿರ್ದೇಶಕರಾದ ಸದಸ್ಯರಾದ ಎನ್ ರವಿಕುಮಾರ್ ತಿಳಿಸಿದರು.

ಶಿವಮೊಗ್ಗ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನೆಯನ್ನು ಸಂಸದ ಬಿ. ವೈ. ರಾಘವೇಂದ್ರ ನಡೆಸಲಿದ್ದಾರೆ. ದಿಕ್ಸೂಚಿ ಉಪನ್ಯಾಸವನ್ನು ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ನೆರವೇರಿಸುವರು. ಸಾಧಕ ಪತ್ರಕರ್ತರಿಗೆ ಸನ್ಮಾನ ನಡೆಯಲಿದ್ದು, ಇದರಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಕೂಡ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಸಬಹುದು: ಸಚಿವ ಎನ್ ಚೆಲುವರಾಯಸ್ವಾಮಿ

Advertisements

ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಕೆ. ವಿ. ಶಿವಕುಮಾ‌ರ್ ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಕ್ಷರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಸಿ. ಎಸ್. ಚಂದ್ರಭೂಪಾಲ್, ಶಿವಮೊಗ್ಗ ಜಿಲ್ಲಾ ವಾರ್ತಾಧಿಕಾರಿಗಳಾದ ಆರ್. ಮಾರುತಿ, ಭಂಡಿಗಡಿ ನಂಜುಂಡಪ್ಪ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಹುಮಾಯೂನ್ ಹರ್ಲಾಪುರ ಮತ್ತು ಸಂಗಡಿಗರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಾದ ಸಂಘದ ವೈದ್ಯನಾಥ್, ಸೋಮನಾಥ್, ಅರುಣ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X