ಶಿವಮೊಗ್ಗ | ಏ.12ರಂದು ಕಾಂತರಾಜ್‌ ವರದಿ ಕುರಿತ ವಿಚಾರ ಸಂಕಿರಣ, ʼಅರಿವೇ ಅಂಬೇಡ್ಕರʼ ಸಂಚಿಕೆ ಬಿಡುಗಡೆ

Date:

Advertisements

ಕಾಂತರಾಜ್ ಆಯೋಗದ ವರದಿಯ ಜಾಗೃತಿ ಅಂಗವಾಗಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಏ.12ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ವಿಚಾರ ಸಂಕಿರಣ-ಸಾರ್ವಜನಿಕ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್ ಕಾಂತರಾಜ್‌ ಇರಲಿದ್ದಾರೆ.

1001452935

‌ನಿಮ್ಮ ಈದಿನ ಡಾಟ್‌ ಕಾಮ್ ಮತ್ತೊಂದು ಹೊಸ ಪ್ರಯತ್ನ ಮಾಡಿದೆ. ಕನ್ನಡದಲ್ಲಿ ಮೊತ್ತಮೊದಲ ಬಾರಿಗೆ ಡಾ.ಬಿ.ಆರ್. ಅಂಬೇಡ್ಕರರ ಮಹತ್ವದ ಕೃತಿಗಳ ಸಾರಸಂಗ್ರಹವನ್ನು ಒಂದೇ ಪುಸ್ತಕದಲ್ಲಿ ಹಿಡಿದಿಡುವ ವಿನೂತನ ಪ್ರಯೋಗ ನಡೆಸಿದೆ. ಈ ವಿಶೇಷ ಸಂಚಿಕೆಯನ್ನು ಎಚ್ ಕಾಂತರಾಜ ಅವರು ಬಿಡುಗಡೆ ಮಾಡಲಿದ್ದಾರೆ.

1001452951

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಶಾಸಕ ಆರ್ ಕೆ ಸಿದ್ದರಾಮಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಶಿವಮೊಗ್ಗ ಅಧ್ಯಕ್ಷ ವಿ ರಾಜು, ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ತಿ ನ ಶ್ರೀನಿವಾಸ್, ಹಿಂದುಳಿದ ಜನ ಜಾಗೃತಿ ಮಹಿಳಾ ಘಟಕದ ಸಂಚಾಲಕಿ ಎಸ್ ವಿ ರಾಜಮ್ಮ, ಅಖಿಲ ಕರ್ನಾಟಕ ಹಿಂದುಳಿದ ವರ್ಗಗಳ ಮತ್ತು ಅತೀ ಹಿಂದುಳಿದ ವರ್ಗಗಳ ಜನ ಜಾಗೃತಿ ವೇದಿಕೆ ಶಿವಮೊಗ್ಗದ ಸಂಚಾಲಕ ಆರ್ ಮೋಹನ್, ಅಣ್ಣಪ್ಪ ಆಯನೂರ್ ಕೋಟೆ ಮಿಲಿಂದ ಅಧ್ಯಕ್ಷರು ಸಂಸ್ಕೃತಿಕ ಸಂಸ್ಥೆ ಶಿವಮೊಗ್ಗ, ಸೋಲಿಡಾರಿಟಿ ಯೂಥ್ ಮೂವ್ಮೆಂಟ್ ನ ಅಧ್ಯಕ್ಷರಾದ ಹಬೀಬುಲ್ಲ ಹಾಗೂ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಪ್ರೊ. ರಾಚಪ್ಪ ಇರಲಿದ್ದಾರೆ.

Advertisements
1001453128

ಇದೊಂದು ಅತ್ಯುತ್ತಮ ಪುಸ್ತಕವಾಗಿದ್ದು ಖರೀದಿಸಬೇಕಾಗಿ ಹಾಗೂ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಕ ಸಂಕಿರಣದ ಪ್ರಯೋಜನ ಪಡೆಯಬೇಕಾಗಿ ಹಿಂದುಳಿದ ಜನ ಜಾಗೃತಿ ವೇದಿಕೆಯ ಜಿಲ್ಲಾ ಸಂಚಾಲಕ ಆರ್ ಟಿ ನಟರಾಜ್ ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X