ಶಿವಮೊಗ್ಗ | ಸಂಚಾರಿ ನಿಯಮ ಉಲ್ಲಂಘನೆ, 50% ರಿಯಾಯಿತಿ : 20 ದಿನಗಳಲ್ಲಿ ₹1 ಕೋಟಿ 58 ಲಕ್ಷ ರೂಪಾಯಿ ದಂಡ ಸಂಗ್ರಹ

Date:

Advertisements

ಶಿವಮೊಗ್ಗ, ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇಕಡ 50ರಷ್ಟು ರಿಯಾಯಿತಿ ನೀಡಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೇವಲ 20 ದಿನಗಳಲ್ಲಿ ₹1,58,51,750 ದಂಡ ಸಂಗ್ರಹವಾಗಿದ್ದು, ಇಂದು ನಗರದ ಹಲವೆಡೆ ದಂಡ ಕಟ್ಟಲು ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ.

1002224775

ರಾಜ್ಯ ಸರ್ಕಾರವು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಈ ರಿಯಾಯಿತಿಯನ್ನು ಘೋಷಿಸಿತ್ತು. ಇದನ್ನು ಸದುಪಯೋಗಪಡಿಸಿಕೊಂಡ ವಾಹನ ಸವಾರರು ದಂಡ ಪಾವತಿಸಲು ಮುಂದಾಗಿದ್ದಾರೆ. ಇದುವರೆಗೂ ಜಿಲ್ಲಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಒಟ್ಟು 26,728 ಪ್ರಕರಣಗಳನ್ನು ವಾಹನ ಸವಾರರು ಇತ್ಯರ್ಥಪಡಿಸಿಕೊಂಡಿದ್ದಾರೆ.

ಇಂದು ರಿಯಾಯಿತಿ ಯೋಜನೆಯ ಕೊನೆಯ ದಿನವಾದ್ದರಿಂದ ದಂಡ ಕಟ್ಟಲು ನಗರದಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನಗರದ ಗೋಪಿ ವೃತ್ತ, ದುರ್ಗಿಗುಡಿ ಸೇರಿದಂತೆ ವಿವಿಧೆಡೆ ಪೊಲೀಸರು ದಂಡ ಸಂಗ್ರಹ ಮಾಡುತ್ತಿದ್ದಾರೆ.

2023ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಸಂಗ್ರಹವಾಗಬೇಕಿದ್ದ ದಂಡದ ಮೊತ್ತವು ₹19 ಕೋಟಿಗೂ ಹೆಚ್ಚಾಗಿದೆ. ಹಾಗೂ ಇಂದು ಕೊನೆ ದಿವಸವಾಗಿರುವ ಕಾರಣ ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಇದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದ್ದಾರೆ.

1002224806

ರಿಯಾಯಿತಿ ಯೋಜನೆ ಮುಗಿಯಲು ಕಡಿಮೆ ಸಮಯ ಉಳಿದಿರುವುದರಿಂದ, ವಾಹನ ಸವಾರರು ಸಂಚಾರಿ ಠಾಣೆಯ ಪೊಲೀಸರನ್ನು ಹುಡುಕಿಕೊಂಡು ಬಂದು ದಂಡ ಪಾವತಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X