ಶಿವಮೊಗ್ಗ | ಜಿಲ್ಲೆಯಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆ, ಯಾರು ಯಾರು ಎಲ್ಲಿಗೆ;ಸಂಪೂರ್ಣ ಮಾಹಿತಿ

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದ ಆದೇಶದಂತೆ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಅಂತೆಯೇ ಪೊಲೀಸ್ ಠಾಣೆಗಳಲ್ಲಿ ತಮ್ಮ ಕನಿಷ್ಠ ಸೇವಾವಧಿಯನ್ನು ಪೂರೈಸಿರುವ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಗಳ ಪ್ರಸ್ತಾವನೆಯನ್ನು ಸಂಬಂಧಪಟ್ಟ ಇಲಾಖಾ ಸಚಿವರ ಮುಖಾಂತರ ಅನುಮೋದಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

ಅದರಂತೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ವಿವಿದ್ದ ಪೊಲೀಸ್ ಠಾಣೆಗಳಲ್ಲಿ 5 ವರ್ಷ ಮೇಲ್ಪಟ್ಟು ಸೇವೆಯನ್ನು ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಎಎಸ್‌ಐ/ಮಎಎಸ್‌ಐ, ಸಿಹೆಚ್‌ಸಿ/ಮಹೆಚ್‌ಸಿ ಹಾಗೂ ಸಿಪಿಸಿ/ಮಪಿಸಿ ವೃಂದದ ಸಿಬ್ಬಂದಿ ವರ್ಗದವರುಗಳನ್ನು

ದಿನಂಕ:20.ಜೂನ್.2025ರಂದು ಡಿ.ಎ.ಆರ್ ಪೊಲೀಸ್ ಸಭಾಂಗಣ, ಶಿವಮೊಗ್ಗ ಇಲ್ಲಿ ಕೌನ್ಸಲಿಂಗ್ ಮುಖಾಂತರ ಅವರುಗಳು ಒಪ್ಪಿರುವಂತೆ ಅವರ ಹೆಸರಿನ ಮುಂದೆ ಕಾಲಂ:05ರಲ್ಲಿ ನಮೂದಿಸಿರುವ ಪೊಲೀಸ್ ಠಾಣೆ/ಸ್ಥಳಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

Advertisements
1001779504
IMG 20250620 WA00351
1001779603

ಅಂತೆಯೇ ಈ ಕೆಳಕಂಡ ಎಎಸ್‌ಐ/ಐಎಎಸ್‌ಐ, ಸಿಹೆಚ್ಸಿ/ಮಹೆಚ್ಸಿ ಮತ್ತು ಸಿಪಿಸಿ/ಮಪಿಸಿ ರವರನ್ನು ಅವರ ಹೆಸರಿನ ಮುಂದೆ ಕಾಲಂ-(4) ರಲ್ಲಿ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಪರಸ್ಪರ/ಕೋರಿಕೆ ಹಾಗೂ ವೈದ್ಯಕೀಯ ಕಾರಣಗಳ ಮೇರೆಗೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

1001779632
1001779633
1001779634

ಮೇಲ್ಕಂಡ ಅಧಿಕಾರಿ / ಸಿಬ್ಬಂದಿಯವರುಗಳು ಸೇರುವಿಕೆ ಕಾಲ / ಯಾವುದೇ ಭತ್ಯೆಗೆ ಅರ್ಹರಿರುವುದಿಲ್ಲ.ಆದ್ದರಿಂದ, ಸಂಬಂಧಪಟ್ಟ ಠಾಣಾಧಿಕಾರಿಗಳು ಮೇಲ್ಕಂಡ ಅಧಿಕಾರಿ / ಸಿಬ್ಬಂದಿರವರುಗಳನ್ನು ತಕ್ಷಣವೇ ಠಾಣಾ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಸ್ಥಳ ನಿಯುಕ್ತಿಗೊಳಿಸಿರುವ ಠಾಣೆಗೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿ ಕಳುಹಿಸುವುದು, ಈ ಕುರಿತು ಮೇಲ್ಕಂಡ ಅಧಿಕಾರಿ/ಸಿಬ್ಬಂದಿಯವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದ ಮತ್ತು ಸ್ಥಳ ನಿಯುಕ್ತಿಗೊಳಿಸಿದ ಠಾಣೆಯ ಕರ್ತವ್ಯಕ್ಕೆ ವರದಿ ಮಾಡಿಕೊಂಡ ಬಗ್ಗೆ ಪಾಲನಾ ವರದಿಯನ್ನು ತಪ್ಪದೇ ಸಲ್ಲಿಸಬೇಕಾಗಿ ತಿಳಿಸಿರುತ್ತಾರೆ.ಮಿಥುನ್ ಕುಮಾರ್ ಜಿ ಕೆ. ಭಾ.ಪೊ.ಸೇ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ

ಹಾಗೂ ಎಲ್ಲಾ ಎಎಸ್‌ಐ/ಐಎಎಸ್‌ಐ, ಸಿಹೆಚ್ಸಿ/ಮಹೆಚ್‌ಸಿ ಮತ್ತು ಸಿಪಿಸಿ/ಮಪಿಸಿ ರವರುಗಳನ್ನು ದಿ:05.07.2025 ರೊಳಗಾಗಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಠಾಣಾ ಕರ್ತವ್ಯದಿಂದ ಕಡ್ಡಾಯವಾಗಿ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟ ಠಾಣಾಧಿಕಾರಿರವರುಗಳಿಗೆ ಸೂಚಿಸಿಲಾಗಿದೆ.

ಅಂತೆಯೇ ಸದರಿ ಮೇಲ್ಕಂಡ ಎಲ್ಲಾ ಸಿಬ್ಬಂದಿರವರುಗಳು ಠಾಣಾ ಕರ್ತವ್ಯದಿಂದ ಬಿಡುಗಡೆ ಹೊಂದಿದ ಕೂಡಲೇ ಸ್ಥಳ ನಿಯುಕ್ತಿಗೊಳಿಸಿ ವರ್ಗಾವಣೆಗೊಳಿಸಿದ ಠಾಣೆಗಳ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಇದ್ದಲ್ಲಿ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿಲಾಗಿದೆ.

ಈ ಕುರಿತು ಮೇಲ್ಕಂಡ ಸಿಬ್ಬಂದಿಗಳು ಠಾಣಾ ಕರ್ತವ್ಯದಿಂದ ಬಿಡುಗಡೆ ಹೊಂದಿದ ಮತ್ತು ಸ್ಥಳ ನಿಯುಕ್ತಿಗೊಳಿಸಿದ ಠಾಣೆಗೆ ವರದಿ ಮಾಡಿಕೊಂಡ ಕುರಿತು ಪಾಲನ ವರದಿಯನ್ನು. ಕಳುಹಿಸುವಂತೆ ಸೂಚಿಸಲಾಗಿದೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X