ಶಿವಮೊಗ್ಗ | ಅವೈಜ್ಞಾನಿಕ ವಾರ್ಡ್ ವಿಂಗಡಣೆ; ಸರಿಪಡಿಸುವಂತೆ ಜೆಡಿಎಸ್ ಆಗ್ರಹ

Date:

Advertisements

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊಸದಾಗಿ ಸೃಷ್ಟಿಸಿರುವ ವಾರ್ಡ್‌ಗಳ ವಿಂಗಡಣೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಶೀಲಿಸಿ ಸರಿಪಡಿಸುವಂತೆ ಜೆಡಿಎಸ್‌ ಜಿಲ್ಲಾ ಘಟಕ ಆಗ್ರಹಿಸಿದೆ.

ಪಾಲಿಕೆ ಆಯುಕ್ತರ ಅಧಿಕೃತ ಜ್ಞಾಪನದಂತೆ ವಿಂಗಡಿಸಲಾಗಿರುವ ಹೊಸ ವಲಯ 01ರ ಕಚೇರಿ ನಗರದ ವಿನೋಬನಗರ ಪೊಲೀಸ್ ಚೌಕಿ ಬಳಿ ಇದ್ದು, ಹೊರಡಿಸಲಾಗಿರುವ ಹೊಸ ಆದೇಶದಂತೆ ಇದರ ವ್ಯಾಪ್ತಿಗೆ ವಾರ್ಡ್ ನಂ. 1, 2, 3, 4, 6, 7, 8, 9, 32, 33, 34 ಬರಲಿವೆ. ಸದರಿ ವಾರ್ಡುಗಳ ಪೈಕಿ 32, 33, ಹಾಗೂ 34 ಕ್ರಮವಾಗಿ ಟಿಪ್ಪು ನಗರ, ಸವಾಯಿ ಪಾಳ್ಯ ಹಾಗೂ ವಿದ್ಯಾನಗರ ದಕ್ಷಿಣ ಆಗಿದ್ದು, ಇವು ತುಂಗಾ ನದಿ ದಡದಲ್ಲಿರುವ ಪ್ರದೇಶಗಳಾಗಿವೆ.

ವಲಯ 1ರ ಕಚೇರಿ ವಿನೋಬನಗರದಿಂದ ಸುಮಾರು 5-6 ಕಿಮೀ ದೂರದಲ್ಲಿದೆ. ಹಾಗೆಯೇ ವಲಯ 03ರ ವ್ಯಾಪ್ತಿಗೆ ಬರುವಂತಹ ವಾರ್ಡ್ 12, 13, 14, 15, 16, 17, 18, 19, 23, 24, 25, 27, ಹಾಗೂ 28 ರ ಪೈಕಿ 18 ಮತ್ತು 19 ಕ್ರಮವಾಗಿ ವಿನೋಬನಗರ ದಕ್ಷಿಣ ಹಾಗೂ ಶರಾವತಿ ನಗರ ಆಗಿರುತ್ತದೆ. ವಲಯ 03 ರ ಕಚೇರಿ ಇರುವ ಪ್ರದೇಶಕ್ಕೂ ವಿನೋಬನಗರ ವಾರ್ಡ್ 18 ಹಾಗೂ ಶರಾವತಿ ನಗರ ವಾರ್ಡ್ 19ಕ್ಕೂ ಸುಮಾರು 5-6 ಕಿಮಿ ದೂರವಿರುತ್ತದೆ.

Advertisements

ಮುಂದುವರೆದು ವಿನೋಬನಗರದಲ್ಲೇ ಇರುವ ವಲಯ 01 ರ ಕಚೇರಿ ವ್ಯಾಪ್ತಿಗೆ ಬರುವ ವಾರ್ಡ್ 18 ವಿನೋಬನಗರ ದಕ್ಷಿಣ ಹಾಗೂ ವಾರ್ಡ್ 19 ಶರಾವತಿ ನಗರ ಪ್ರದೇಶಗಳನ್ನು ವಲಯ 03ಕ್ಕೆ ಹಾಗೂ ವಲಯ 03 ರ ಕಚೇರಿ ವ್ಯಾಪ್ತಿಗೆ ಬರುವ ವಾರ್ಡ್ 32 ಟಿಪ್ಪು ನಗರ, ವಾರ್ಡ್ 33 ಸವಾಯಿ ಪಾಳ್ಯ ಹಾಗೂ ವಾರ್ಡ್ 34 ವಿದ್ಯಾನಗರ ದಕ್ಷಿಣ ಪ್ರದೇಶಗಳನ್ನು ವಲಯ 01ಕ್ಕೆ ಅದ್ಯಾವ ತಾಂತ್ರಿಕ ಕಾರಣಗಳಿಂದಾಗಿ ಸೇರಿಸಲಾಗಿದೆಯೋ ಗೊತ್ತಿಲ್ಲ. ಆದರೆ ಇದರಿಂದ ನಗರದ ನಾಗರಿಕರಿಗೆ ತೊಂದರೆ ಆಗುತ್ತಿದೆ ಎಂದು ಜೆಡಿಎಸ್ ಮುಖಂಡರು ಆರೋಪಿಸುತ್ತಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ವಲಯಗಳನ್ನು ಸೃಜಿಸುವಾಗ ಭೌಗೋಳಿಕವಾಗಿ ಶಿವಮೊಗ್ಗ ನಗರವನ್ನು ಪರಿಗಣಿಸಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಕ್ರಮಕೈಗೊಳ್ಳಬೇಕಿತ್ತು. ಆದರೆ ಹೊರಡಿಸಲಾಗಿರುವ ಪಾಲಿಕೆ ಅದೇಶದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಯಾವುದೇ ಹಂತದಲ್ಲಿ ಚಿಂತನೆ ನಡೆಸಿರುವುದು ಕಂಡುಬಂದಿಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.

1001371075

ಇದೊಂದು ಅವೈಜ್ಞಾನಿಕ ಕ್ರಮವಾಗಿದ್ದು ಇದರಿಂದ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಿ ವಿನೋಬನಗರ ವಾರ್ಡ್ 18 ಹಾಗೂ ಶರಾವತಿ ನಗರ ವಾರ್ಡ್ 19 ಗಳನ್ನು ವಲಯ 01 ರ ವ್ಯಾಪ್ತಿಗೆ ಹಾಗೂ ಟಿಪ್ಪು ನಗರ ವಾಡ್ 32, ಸವಾಯಿ ಪಾಳ್ಯ ವಾರ್ಡ್ 33 ಹಾಗೂ ವಿದ್ಯಾನಗರ ವಾರ್ಡ್ 34 ಇವುಗಳನ್ನು ವಲಯ 03 ರ ವ್ಯಾಪ್ತಿಗೆ ಸೇರಿಸಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಸರಿಪಡಿಸಿ ಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ/ಆದೇಶ ನೀಡಬೇಕು ಎಂದು ನಾಗರಿಕರ ಪರವಾಗಿ ಜೆಡಿಎಸ್‌ ವಿನಂತಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ದೀಪಕ್ ಸಿಂಗ್ ಇವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಈ ವೇಳೆ ಶಿವಮೊಗ್ಗ ನಗರದ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ಜೆಡಿಎಸ್ ಮುಖಂಡರಾದ ಉಮಾಶಂಕರ್ ಉಪಾಧ್ಯಯ, ಕೃಷ್ಣ, ವೆಂಕಟೇಶ್, ವಿಜಯ್ ಕುಮಾರ್, ನಗರ ಯುವ ಜೆಡಿಎಸ್ ಅಧ್ಯಕ್ಷ ಸಂಜಯ್ ಕಶ್ಯಪ್, ದಯಾನಂದ್ ಸಾಲಾಗಿ, ಮಾಧವ ಮೂರ್ತಿ, ಸಿದ್ದೇಶ್, ಗೋವಿಂದ ರಾಜ್, ಗೋಪಿ ಮೊದಲಿಯರ್, ನಿಹಾಲ್ ಖಾನ್, ನೀಲು, ರುದ್ರೇಶ್, ಮೂರ್ತಿ, ಪ್ರಪುಲ, ಚಂದ್ರಶೇಖರ್, ಚನ್ನು, ಬಸಪ್ಪ, ಪುಷ್ಪ, ಲಕ್ಷ್ಮಿ, ಸರಿತ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X