ಶಿವಮೊಗ್ಗ | ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳು ಹಾಗೂ ಕಾರ್ಯಕ್ರಮ

Date:

Advertisements

ಶಿವಮೊಗ್ಗ ಮಹಾನಗರ ಪಾಲಿಕೆಯು ಸೆ. 22 ಮತ್ತು 23 ರಂದು ಕುವೆಂಪು ರಂಗಮಂದಿರ, ಎನ್.ಇ.ಎಸ್. ಮೈದಾನ ಹಾಗೂ ಅಂಬೇಡ್ಕರ್ ಭವನದಲ್ಲಿ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಸೆ. 22 ರಂದು ಬೆಳಗ್ಗೆ 9.00ಕ್ಕೆ ಕುವೆಂಪು ರಂಗಮಂದಿರ ಹಾಗೂ ಎನ್.ಇ.ಎಸ್. ಮೈದಾನದಲ್ಲಿ 5 ರಿಂದ 7ನೇ ತರಗತಿ ವಿಧ್ಯಾರ್ಥಿಗಳಿಗೆ ಮತ್ತು 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ದೆ, ಶಿವಮೊಗ್ಗ ದಸರಾ ವೈವಿದ್ಯತೆ ಬಗ್ಗೆ ಪ್ರಬಂಧ ಸ್ಪರ್ಧೆ, ಛದ್ಮವೇಷ, 1 ನಿಮಿಷದಲ್ಲಿ ಪ್ಲಾಸ್ಟಿಕ್ ಬಾಟಲಿಗೆ ಬೊಗಸೆಯಿಂದ ನೀರು ತುಂಬಿಸುವುದು, ದೇಶಭಕ್ತಿ ಗೀತೆ ಸ್ಪರ್ದೆ, ಶಾಟ್‌ಪುಟ್ ಸ್ಪರ್ದೆ ಹಾಗೂ 100&200 ಮೀ.

ಸೆ. 23 ರಂದು ಬೆಳಗ್ಗೆ 9.00ಕ್ಕೆ ಮಕ್ಕಳ ಜಾಥಾ ಹಮ್ಮಿಕೊಂಡಿದ್ದು ಡಿ.ವಿ.ಎಸ್. ಶಾಲೆಯಿಂದ ಶಿವಮೂತಿ ಸರ್ಕಲ್ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ, ಕೃಷಿ ಇಲಾಖೆಯಿಂದ ಓ.ಟಿ.ರಸ್ತೆಯ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ, ಮಿಳಘಟ್ಟ ಕಡೆಯಿಂದ ಅಶೋಕವೃತ್ತದ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ, ಹೊಳೆ ಬಸ್ ಸ್ಟಾಪ್ ರಸ್ತೆಯ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ ಹಾಗೂ ಜೈಲ್ ರಸ್ತೆಯಿಂದ ಗೋಪಿ ವೃತ್ತದ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ ಸಾಗುತ್ತದೆ.

ಅಂದು ಸಂಜೆ 5.00ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಕ್ಕಳ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X