ಶಿವಮೊಗ್ಗ | ದೆವ್ವ ಬಿಡಿಸುವ ನೆಪದಲ್ಲಿ ಅಮಾಯಕ ತಾಯಿಯ ಕೊಲೆ: ಮಗ ಸೇರಿ ಮೂವರ ಬಂಧನ

Date:

Advertisements

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಂಬರಘಟ್ಟೆ ಗ್ರಾಮದಲ್ಲಿ ದೆವ್ವ ಬಿಡಿಸುವ ನೆಪದಲ್ಲಿ ಗೀತ ಎಂಬ ಮಹಿಳೆಯನ್ನು ಆಶಾ ಎಂಬ ಮಹಿಳೆ ಥಳಿಸಿ ಕೊಂದ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಾದ ಆಶಾ, ಅವರ ಪತಿ ಸಂತೋಷ್ ಹಾಗೂ ಮೃತಳ ಮಗ ಸಂಜಯ್ ಎಂಬುವರನ್ನು ಬಂಧಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿದೆ. ದೆವ್ವ ಬಿಡಿಸುವ ನೆಪದಲ್ಲಿ ಮೌಢ್ಯವನ್ನು ನಂಬಿ ಈ ಕೃತ್ಯ ಎಸಗಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದೇವೆ. ತನಿಖೆ ಮುಂದುವರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಗೀತಮ್ಮ (55) ಎಂಬ ಮಹಿಳೆ ಮೃತರು. ಗೀತಮ್ಮನಿಗೆ ಮೂರು ಜನ ಮಕ್ಕಳು. ಇಬ್ಬರು ಗಂಡುಮಕ್ಕಳು ಹಾಗೂ ಓರ್ವ ಹೆಣ್ಣು ಮಗಳು ಇದ್ದಾಳೆ. ಓರ್ವ ಮಗ ಜಂಬರಘಟ್ಟ ಗ್ರಾಮದಲ್ಲಿ ಗೀತಮ್ಮನ ಜೊತೆ ವಾಸವಾಗಿದ್ದಾರೆ. ಗೀತಮ್ಮಗೆ ಯಾರೋ ತೀರಿಕೊಂಡವರು ಮೈ ಮೇಲೆ ಬಂದಿದ್ದಾರೆ ಎಂದು ಗ್ರಾಮದವರು ಮಾತನಾಡಿಕೊಳ್ಳುತ್ತಿದ್ದರು ಎಂದು ಅವರ ಮಗ ಹೇಳಿದ್ದಾರೆ. ಅದೇ ಗ್ರಾಮದಲ್ಲಿ ಆಶಾ (45) ಅವರಿಗೆ ತನ್ನ ತಾಯಿ ಮೇಲೆ ದೆವ್ವ ಬಂದಿದೆ ಎಂದು ಮೃತಳ ಮಗ ಸಂಜಯ ತಿಳಿಸಿದ್ದ. ಆಗ ಆಶಾ ಹಾಗೂ ಆಕೆಯ ಗಂಡ ಸಂತೋಷ್​ ಭಾನುವಾರ ರಾತ್ರಿ ಗೀತಮ್ಮನನ್ನು ಕರೆದುಕೊಂಡು ಹೋಗಿ ಹೊಡೆದಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

Advertisements

ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ಸಿಕ್ಕಿದೆ. ನೀರು ಕೊಡಿ ಎಂದ್ರು ಬಿಟ್ಟಿಲ್ಲ.‌ ಸುಮಾರು ನಾಲ್ಕು ತಾಸು ಹೊಡೆದಿದ್ದಾರೆ‌. ಗೀತಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅದಾದ ಬಳಿಕ ಅರ್ಧ ಗಂಟೆಗೆ ಆಕೆ ಪ್ರಾಣ ಬಿಟ್ಟಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಗುಜರಾತ್‌ | ವಡೋದರದಲ್ಲಿ ಕುಸಿದ ಸೇತುವೆ; ಮೂವರ ಸಾವು, ನದಿಗೆ ಉರುಳಿದ 5 ವಾಹನಗಳು

ಮೂರು ಜನ ಆರೋಪಿತರಾದ ಎ-1 ಆಶಾ, ಎ-2 ಆಶಾ ಪತಿ ಸಂತೋಷ್ ಹಾಗೂ ಎ-3 ಮೃತಳ ಮಗ ಸಂಜಯ್ ಅವರನ್ನು ಬಂಧಿಸಲಾಗಿದೆ. ಮೃತಳು ನೀರು ಕೇಳಿದ್ದರೂ ಕೂಡ, ಕೊಡದೆ ಥಳಿಸಿದ್ದಾರೆ. ಆಶಾಳ ಹಿನ್ನೆಲೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿಂದೆ ಕೂಡ ಈ ರೀತಿಯಲ್ಲಿ ಏನಾದರೂ ನಡೆಸಿರುವ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. ಇಂದಿನ ಆಧುನಿಕ ಕಾಲಘಟ್ಟದಲ್ಲೂ ಈ ರೀತಿ ನಡೆದುಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯ ಆಗುತ್ತದೆ. ಈ ರೀತಿಯ ಘಟನೆ ಕಂಡುಬಂದರೆ ನಮಗೆ ತಿಳಿಸಬೇಕೆಂದು ಗ್ರಾಮಸ್ಥರಿಗೆ ತಿಳಿಸಲಾಗಿದೆ.ಯಾವುದೇ ಪ್ರದೇಶದಲ್ಲಿ ಈ ರೀತಿಯ ಮೌಢ್ಯ ಕಂಡು ಬಂದರೆ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.

ಮೌಢ್ಯಗಳಿಗೆ ಕಿವಿಗೊಡಬಾರದು ಎಂದು ತಾಕೀತು ಮಾಡಲಾಗಿದೆ. ದೇವರು, ದೆವ್ವ ಬಂದಿದೆ ಎಂದು ಹಲ್ಲೆ ನಡೆಸಬಾರದು. ಅವರವರ ನಂಬಿಕೆ ಅವರ ಮನೆಯಲ್ಲಿ ಇರಬೇಕು. ಈ ರೀತಿ ಮಾಡಬಾರದು ಎಂದು ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ....

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು,...

ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಖಂಡಿತಾ ನನಗೆ ಖುಷಿಯ ವಿಚಾರ...

Download Eedina App Android / iOS

X