ಶಿವಮೊಗ್ಗ | ಚಾಲಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬಾಡಿಗೆ ಕಾರು ಹೊತ್ತೊಯ್ದ ಮಹಿಳೆ

Date:

Advertisements

ತನ್ನನ್ನು ಪಿಕಪ್ ಮಾಡಲು ಬಂದ ವಾಹನವನ್ನೇ ಮಹಿಳೆಯೋರ್ವಳು ಕಳುವು ಮಾಡಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶೃಂಗೇರಿಯಿಂದ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಹಿಳೆಯನ್ನು ಪಿಕ್ ಅಪ್ ಮಾಡಲು ಸ್ವಿಫ್ಟ್ ಡಿಸೈರ್ ಕಾರು ಬಂದಿತ್ತು. ರಮೇಶ್ ಗೌಡ ಎನ್ನುವವರು ಚಾಲಕರಾಗಿದ್ದು, ತಾಹೀರ್ ಅಹಮದ್ ಕಾರು ಮಾಲಿಕರಾಗಿದ್ದಾರೆ. ಕಾರನ್ನು ಮೊಬೈಲ್ ಮೂಲಕ ಬುಕ್ ಮಾಡಿದ್ದ ಮಹಿಳೆಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಹತ್ತಿಸಿಕೊಂಡು ಸಾಗರ ರಸ್ತೆಯಲ್ಲಿರುವ ಬ್ಲೂ ಮೂನ್ ಲಾಡ್ಜ್ ಗೆ ವಿಶ್ರಾಂತಿಗಾಗಿ ಕರೆದುಕೊಂಡು ಬಂದಿದ್ದರು.

ಈ ವೇಳೆ ಮಹಿಳೆಯು ವಾಶ್ರೂಮ್ ಬಳಸುವಂತೆ ಹಾಗೂ ಕೊಂಚ ವಿಶ್ರಮಿಸುವಂತೆಯೂ ಸಹ ಚಾಲಕನಿಗೆ ಹೇಳಿದ್ದಳು. ಚಾಲಕ ವಾಶ್ ರೂಮ್ ಗೆ ಹೋಗುತ್ತಿದ್ದಂತೆಯೇ ಕೊಠಡಿಯ ಬಾಗಿಲನ್ನು ಎಳೆದುಕೊಂಡು ಕಾರ್ ತೆಗೆದುಕೊಂಡು ಮಹಿಳೆ ಪರಾರಿಯಾಗಿದ್ದಾಳೆ. ವಿಷಯ ಅರಿತ ಮಾಲೀಕ ಶೃಂಗೇರಿಯಿಂದ ಶಿವಮೊಗ್ಗ ಬಂದಿದ್ದು ತುಂಗಾ ನಗರ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ಪೊಲೀಸರು ಲಾಡ್ಜ್ ತಪಾಸಣೆ ಮಾಡಿದ್ದಾರೆ.

Advertisements

ಆದರೆ ಮಾಲಿಕನ ಹೇಳಿಕೆ ಬೇರೆ ರೀತಿಯಾಗಿದೆ. ಕಾರಿನ ಚಾಲಕ ನನ್ನ ಬಳಿ ಕುಟುಂಬದೊಂದಿಗೆ ಪ್ರವಾಸ ಹೋಗುತ್ತಿರುವುದಾಗಿ ಕಾರು ಪಡೆದುಕೊಂಡು ಹೋಗಿದ್ದಾರೆ. ಈಗ ಮಹಿಳೆ ಎಲ್ಲೋ ಬೋರ್ಡ್ ಕಾರನ್ನು ಕಳುವು ಮಾಡಿಕೊಂಡು ಹೋಗಿರುವುದಾಗಿ ಹೇಳಿದ್ದಾರೆ ಎಂದಿದ್ದಾರೆ. ಆಧಾರ್ ಕಾರ್ಡ್ ಪ್ರಕಾರ ಮಹಿಳೆ ಬೆಳಗಾವಿ ಜಿಲ್ಲೆಯ ವಸುಂಧರಾ ಎಂದು ತಿಳಿದು ಬರುತ್ತಿದೆ ಎಂದು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X