ಶಿವಮೊಗ್ಗ | ಸೂಳೆಬೈಲು ವೃತ್ತದಲ್ಲಿ ವ್ಯಕ್ತಿ ಮೇಲೆ ಹಲ್ಲೆ ; ಆಸ್ಪತ್ರೆಗೆ ದಾಖಲು

Date:

Advertisements

ಶಿವಮೊಗ್ಗ ನಗರದ ಸೂಳೆಬೈಲು ವೃತ್ತದಲ್ಲಿ 32 ವರ್ಷದ ಯುವಕನೊರ್ವನಿಗೆ ಬರ್ಬರವಾಗಿ ಹಲ್ಲೆ ಮಡಲಾಗಿದ್ದು ಆತನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ವರ್ಷದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ಹಲ್ಲೆ ನಡೆದಿದೆ ಎಂಬ ಮಾಹಿತಿಯಾಗಿದೆ.

ಉರಗಡೂರಿನ ತುಂಗಾನಗರ ಪಿ.ಎಸ್. ವ್ಯಾಪ್ತಿಯಲ್ಲಿ ವೈಯಕ್ತಿಕ ಕಾರಣಗಳಿಗಾಗಿ ಈ ಒಂದು ಘಟನೆ ನಡೆದಿದೆ ಎಂಬ ಮಾಹಿತಿಯಾಗಿದೆ.ಫರ್ದೀನ್ ಮತ್ತು ಆತನ ಸಹೋದರ ಮತ್ತು ಸ್ನೇಹಿತನ ಮೇಲೆ ಆರೋಪಗಳಿವೆ..ಅವರು ಶಬ್ಬೀರ್ ಮತ್ತು ಶಬಾಜ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಫರ್ದೀನ್ ಶಬ್ಬೀರ್ ಅವರ ಸಹೋದರಿ ಸಲ್ಮಿಯಾ ಅವರನ್ನು ಮದುವೆಯಾಗಿದ್ದಾರೆ.ಆದ್ದರಿಂದ ಫರ್ದೀನ್ ತನ್ನ ಸ್ವಂತ ಮಾವನ ಮೇಲೆ ಹಲ್ಲೆ ಮಾಡಲಾಗಿದೆ. ಈ ಘಟನಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಫರ್ದೀನ್ ಮತ್ತು ಸಲ್ಮಿಯಾ ಕೆಲವು ವರ್ಷಗಳ ಹಿಂದೆ ವಿವಾಹವಾಗಿದ್ದರು.ಇದು ಪ್ರೇಮ ವಿವಾಹವಾಗಿತ್ತು ಮತ್ತು ಹುಡುಗಿಯ ಕುಟುಂಬವು ಇದನ್ನು ವಿರೋಧಿಸುತ್ತಿತ್ತು ಎಂಬುದು ಮಾಹಿತಿ.

ಫರ್ದೀನ್ ಮತ್ತು ಸಲ್ಮಿಯಾ ಕೆಲವು ವರ್ಷಗಳಿಂದ ಕೆಲವು ವಿವಾದಗಳಿಂದಾಗಿ ಒಟ್ಟಿಗೆ ವಾಸಿಸುತ್ತಿರಲಿಲ್ಲ.ಶಬ್ಬೀರ್ ಮತ್ತು ಶಬಾಜ್ ಮತ್ತು ಆತನ ಸಹೋದರ ಫರ್ದೀನ್ ಅವರನ್ನು ಯಾವಾಗಲೂ ಬೆದರಿಸುತ್ತಿದ್ದರು.

ಆದ್ದರಿಂದ ಈ ಅಪರಾಧ ಸಂಭವಿಸಿದೆ ಎಂಬುದು ಮಾಹಿತಿ. ಈ ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದಾರೆ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ತಿಳಿಸಿದ್ದಾರೆ..

ಪ್ರಕರಣ ಸಂಬಂಧ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ಪಿ ಕಾರ್ಯಪ್ಪ, ತುಂಗ ನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಮತ್ತಿತರೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X