ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ಗೆ ಕಪ್ಪು ಬಾವುಟದ ಸ್ವಾಗತ: ರೈತ ನಾಯಕರ ನಿರ್ಧಾರ

Date:

Advertisements

ಹಿರಿಯ ರೈತ ನಾಯಕ ದಲ್ಲೇವಾಲ ಅವರ ಪ್ರಾಣ ಉಳಿಸಲು ಆಗ್ರಹಿಸಿ ಕೇಂದ್ರ ಕೃಷಿ ಸಚಿವರಿಗೆ ಕಪ್ಪು ಬಾವುಟದ ಸ್ವಾಗತ ಕೋರಿ ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ನಿರ್ಧರಿಸಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶಿವಮೊಗ್ಗ ಜಿಲ್ಲೆ ಸಾಗರಕ್ಕೆ ಶನಿವಾರ (ಜ.18) ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಆನ್ ಲೈನ್ ಮೂಲಕ ತುರ್ತು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ಪದಾಧಿಕಾರಿಗಳು ಸಭೆ ಸೇರಿ ಕೇಂದ್ರ ಕೃಷಿ ಸಚಿವರನ್ನು ಕಪ್ಪು ಪ್ರದರ್ಶನ ಮೂಲಕ ಸ್ವಾಗತಿಸಲು ನಿರ್ಧರಿಸಿದ್ದಾರೆ.

ಸಭೆಯಲ್ಲಿ ರೈತ ನಾಯಕರಾದ ಬಡಗಲಪುರ ನಾಗೇಂದ್ರ, ಹೆಚ್ ಆರ್ ಬಸವರಾಜಪ್ಪ, ಎಸ್ ಆರ್ ಹಿರೇಮಠ್, ಕೆ ವಿ ಭಟ್, ನೂರ್ ಶ್ರೀಧರ್, ಟಿ ಯಶವಂತ, ವಸಂತ ಭಾಗವಹಿಸಿದ್ದರು.

Advertisements

“ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಖಾತರಿಗೆ ಕಾನೂನು, ಸಾಲ ಮನ್ನಾ, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ನೀತಿ ಚೌಕಟ್ಟು ವಾಪಸ್ಸಾತಿ ಸೇರಿದಂತೆ ಐತಿಹಾಸಿಕ ದೆಹಲಿ ಹೋರಾಟದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಮರಣಾಂತ ಉಪವಾಸ ನಡೆಸುತ್ತಿರುವ ಹಿರಿಯ ರೈತ ನಾಯಕ ದಲ್ಲೇವಾಲ ಅವರ ಪ್ರಾಣವನ್ನು ಉಳಿಸಲು ಕೇಂದ್ರ ಸರ್ಕಾರ ಆಸಕ್ತಿ ವಹಿಸದೆ ಅತೀವ ನಿರ್ಲಕ್ಷ್ಯ ತೋರಿ ಇಡೀ ದೇಶದ ರೈತಾಪಿ ಸಮುದಾಯಕ್ಕೆ ಅವಮಾನ ಎಸಗಿದೆ. ಈ ಹಿನ್ನೆಲೆಯಲ್ಲಿ ಸಾಗರಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರವರಿಗೆ ಕಪ್ಪು ಬಾವುಟದ ಸ್ವಾಗತ ಕೋರುವ ಮೂಲಕ ಪ್ರತಿಭಟಿಸಲು ಸಭೆ ತೀರ್ಮಾನಿಸಿದೆ” ಎಂದು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

“ಅತ್ಯಂತ ಕಷ್ಟದಲ್ಲಿ ಇರುವ ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಕೇಂದ್ರ ಕೃಷಿ ಸಚಿವರು ಬರುವುದು ಮತ್ತು ಈ ಬೆಳೆಗಾರರ ಅಹವಾಲು ಆಲಿಸುವುದು ಸ್ವಾಗತಾರ್ಹ ವಿಷಯ ಆಗಿದ್ದರೂ ಇಡೀ ದೇಶದ ಕೃಷಿ ಉಳಿಸಲು ಹಾಗೂ ರೈತರನ್ನು ಕಾಪಾಡಲು ದಲ್ಲೆವಾಲರವರ ಉಪವಾಸ ಸತ್ಯಾಗ್ರಹ ಕೊನೆಗಾಣಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಕೂಡ ಬಹಳ ಮುಖ್ಯ ವಾಗಿದೆ. ಆದರೆ, ಕೇಂದ್ರ ಕೃಷಿ ಸಚಿವರು ಹಾಗೂ ಕೇಂದ್ರ ಸರ್ಕಾರ ದಲ್ಲೇವಾಲರವರ ಪ್ರಾಣ ಉಳಿಸಲು ಕ್ರಮ ಕೈಗೊಳ್ಳದೇ ರೈತ ಸಮುದಾಯವನ್ನು ಅಪಮಾನಿಸುತ್ತಿದೆ ಮತ್ತು ಕೆರಳಿಸುತ್ತಿದೆ” ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರತಿಭಟನೆಯಲ್ಲಿ ಶಿವಮೊಗ್ಗ ಹಾಗೂ ಸುತ್ತಲಿನ ಜಿಲ್ಲೆ ಗಳ ಸಂಯಕ್ತ ಹೋರಾಟ ಕರ್ನಾಟಕದ ಎಲ್ಲಾ ಸಹಭಾಗಿ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಕೃಷಿ ಸಚಿವರಿಗೆ ರೈತ ಸಮುದಾಯದ ಆಕ್ರೋಶವನ್ನು ವ್ಯಕ್ತಪಡಿಸಬೇಕು” ಎಂದು ಸಭೆ ವಿನಂತಿಸಿದೆ.

ಪ್ರತಿಭಟನೆ ಸ್ಥಳ ,ವೇಳೆ ಮತ್ತಿತರ ಅಗತ್ಯ ಮಾಹಿತಿಗಾಗಿ ರಾಜ್ಯ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತ ಅವರನ್ನು (ಮೊ.78925 39141) ಅವರನ್ನು ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X