ರಾಜ್ಯದ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರಿಗೆ ಯಾರು ಹೆಚ್ಚು ಬೈಯ್ಯುತ್ತಾರೆ ಎಂಬುದರ ಮೇಲೆ ಅವರಿಗೆ ಪ್ರಮೋಷನ್ ಕೊಡುತ್ತಾರೋ ಏನೋ ಗೊತ್ತಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ಭ್ರಷ್ಟಾಚಾರ ನಡೆಸುವ ಅವಶ್ಯಕತೆ ಇಲ್ಲ. ಡಿಸಿಸಿ ಬ್ಯಾಂಕ್ನಲ್ಲಿ ಯಾವ ಯಾವ ಸಂದರ್ಭದಲ್ಲಿ ಏನಾಯ್ತು. ರೈತರ ಹಣ ಏನಾಯ್ತು ಎಂಬುದನ್ನು ಆಯಾ ಇಲಾಖೆಯ ಚೌಕಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ. ತನಿಖೆಗಳನ್ನು ಮುಚ್ಚಿ ಹಾಕಲು ಕೆಲವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.
ಏಳನೇ ವೇತನ ಆಯೋಗಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಡಿದ್ದರು. ಆದರೆ, ಇಂದಿನ ಸರ್ಕಾರ ಅದನ್ನು ಮುಂದೂಡುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.