ಶಿವಮೊಗ್ಗ | ಮಹಿಳೆ ವಿರುದ್ದ ಅವಹೇಳನಕಾರಿ ಕಾಮೆಂಟ್; ಚಕ್ರವರ್ತಿ ಸೂಲಿಬೆಲೆಗೆ ಪೊರಕೆ ಸ್ವಾಗತ

Date:

Advertisements

ಮಹಿಳೆ ವಿರುದ್ದ ಚಕ್ರವರ್ತಿ ಸೂಲಿಬೆಲೆಯ ಅವಹೇಳನಕಾರಿ ಕಾಮೆಂಟ್​ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗದಲ್ಲಿ ಪೊರಕೆ ಸ್ವಾಗತ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ ಎಚ್ ರಸ್ತೆಯ ಕರ್ನಾಟಕ ಸಂಘದ ಬಳಿ ಪ್ರತಿಭಟನೆ ನಡೆಸಿದರು.

ಸೂಲಿಬೆಲೆ ಚಕ್ರವರ್ತಿ ಫೇಸ್​ ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ಕಾಮೆಂಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಸೂಲಿಬೆಲೆ ಅವರ ವಿರುದ್ದ ಶಿವಮೊಗ್ಗದ ವಿನೋಬನಗರದ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisements

ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಸೂಲಿಬೆಲೆಗೆ ನೊಟೀಸ್ ನೀಡಿ ಠಾಣೆಗೆ ಬಂದು ಹೇಳಿಕೆ ನೀಡುವಂತೆ ನಿರ್ದೇಶನ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಹಾಲಪ್ಪ ಆಚಾರ್ ಗನ್‌ಮ್ಯಾನ್‌ ವಿರುದ್ಧ ವಂಚನೆ ಆರೋಪ; ದೂರು ದಾಖಲು

ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್‌ ಠಾಣೆಗೆ ಬಂದ ವೇಳೆ ಮಹಿಳೆಯರು ಸೇರಿದಂತೆ ಇತರ ಸಂಘಟನೆ ಕಾರ್ಯಕರ್ತರು ಕೈಯಲ್ಲಿ ಪೊರಕೆ ಹಿಡಿದು ಚಕ್ರವರ್ತಿ ಸೂಲಿಬೆಲೆ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಚಕ್ರವರ್ತಿ ಸೂಲಿಬೆಲೆಯನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ...

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

Download Eedina App Android / iOS

X