ಶಿವಮೊಗ್ಗ | ಒಳಮೀಸಲಾತಿಯಡಿ ನೇಮಕಾತಿಗೆ ಆಗ್ರಹಿಸಿ ಮಾದಾರ ಮಹಾಸಭಾ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

Date:

ಕಳೆದ 35 ಹೋರಾಟ ವರ್ಷಗಳ ಹೋರಾಟದ ಫಲವಾಗಿ ಹಾಗೂ ಸುಪ್ರೀಂ ಕೋರ್ಟಿನ ಆದೇಶದಂತೆ ಜಾರಿಯಾದ ಒಳ ಮೀಸಲಾತಿಯಂತೆ ಮಾದಿಗ ಸಂಬಂಧಿತ ಜಾತಿಗಳಿಗೆ ನೇಮಕಾತಿ ನೀಡಬೇಕು. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಮಾದರ ಮಹಾಸಭಾ ನೇತೃತ್ವದಲ್ಲಿ ದಲಿತ ಸಂಘಟನೆಗಳು ಇಂದು ಶಿವಮೊಗ್ಗ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

- Advertisement -
1003912481

ಮಾದಿಗ ಸಮಾಜದ ಮುಖಂಡ ಆರ್ ಶಿವಣ್ಣ ಮಾತನಾಡಿ “ಮಾದಿಗ ಸಮುದಾಯದ ಸಂಬಂಧಿತ 17 ಜಾತಿಗಳನ್ನು ಶತಮಾನಗಳಿಂದಲೂ ಕೀಳಾಗಿ ಕಂಡು ಶೋಷಣೆಗೊಳಪಡಿಸಿದ್ದಾರೆ. ಈ ನೆಲೆಯಲ್ಲಿ ನಮ್ಮ ನ್ಯಾಯಕ್ಕಾಗಿ 35 ವರ್ಷಗಳಿಂದಲೂ ಒಳಮೀಸಲಾತಿ ಜಾರಿಗಾಗಿ ಸಂಘಟನೆಗಳು, ಹಿರಿಯರು ಎಲ್ಲರೂ ಸೇರಿ ಹೋರಾಟ ಮಾಡಿದ್ದೇವೆ. ಇದೆಲ್ಲದರ ಪರವಾಗಿ ಸದಾಶಿವ ಆಯೋಗದಂತೆ ನಮಗೆ ಶೇಕಡ ಏಳರಷ್ಟು ಒಳಮೀಸಲಾತಿ ದೊರಕಬೇಕಿತ್ತು. ಯಾವ ಸರ್ಕಾರಗಳು ನಮಗೆ ನ್ಯಾಯ ಒದಗಿಸಿಲ್ಲ.‌ ಸುಪ್ರೀಂ ಕೋರ್ಟ್ ನ ಆದೇಶದ ನಂತರ ಶೇಕಡಾ ಆರು ಒಳಮೀಸಲಾತಿ ನೀಡಿ ಸರ್ಕಾರ ವಿಧಾನಸಭೆ ಮತ್ತು ರಾಜ್ಯಪಾಲರ ಒಪ್ಪಿಗೆ ಪಡೆದು ಕಾಯ್ದೆ ರೂಪಿಸಿದೆ. ಆದರೆ ಈಗ ಇಲ್ಲದ ನೆಪ ಒಡ್ಡಿ 56 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಒಳಮೀಸಲಾತಿ ಹೊರತುಪಡಿಸಿ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು. ಇದು ಮಾದಿಗ ಸಮುದಾಯ, ಸಾಮಾಜಿಕ ನ್ಯಾಯಕ್ಕೆ, ದಲಿತರಿಗೆ ಮಾಡಿದ ದ್ರೋಹ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...
1003912482

“ಹಿಂದಿನಿಂದಲೂ ಮೀಸಲಾತಿಯನ್ನು ಕಬಳಿಸಿದ ಬಲಾಢ್ಯರು ನಮ್ಮ ಸಮುದಾಯಕ್ಕೆ ಒಳಮೀಸಲಾತಿಯ ನ್ಯಾಯ ಪಡೆಯಲು ಬಿಡುತ್ತಿಲ್ಲ. ಹಳೆ ಮೀಸಲಾತಿಯಂತೆ ನೇಮಕಾತಿಗೆ ಒತಾಯಿಸುತ್ತಿದ್ದಾರೆ. ಆದರೆ ನಾಗಮೋಹನ್ ದಾಸ್ ಆಯೋಗದ ವರದಿಯಂತೆ, ರಾಜ್ಯ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ಒಳಮೀಸಲಾತಿ ನೀಡಿ ನೇಮಕಾತಿ ನಡೆಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬೀದಿಗಿಳಿದು ಮಾದಿಗ ಮಹಾಸಭಾ ಮತ್ತು ದಲಿತ ಸಂಘಟನೆಗಳು ಉಗ್ರವಾದ ಹೋರಾಟ ನಡೆಸಲಿವೆ. ಇದರ ವಿರುದ್ಧ ಕ್ರಾಂತಿಯೇ ಪ್ರಾರಂಭವಾಗಲಿದೆ” ಎಂದು ಎಚ್ಚರಿಸಿದರು.

1003912483

ಜಿಲ್ಲಾ ಮಾದರ ಮಹಾಸಭಾ ಕಾರ್ಯದರ್ಶಿ ತಿರುಕಣ್ಣ ಮಾತನಾಡಿ “ನಮ್ಮ 35 ವರ್ಷದ ಬೇಡಿಕೆ ಮತ್ತು ಹೋರಾಟದ ಫಲವಾಗಿ ಜಾರಿಯಾದ ಒಳಮೀಸಲಾತಿಯಂತೆ ನಮಗೆ ಶೇ. 6 ಒಳಮೀಸಲಾತಿಯಡಿ ನೇಮಕಾತಿ ಮಾಡಿ ಮಾದಿಗ ಸಂಬಂಧಿತ ಜಾತಿಗಳಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮಾರ್ಚ್ 27ರಿಂದ ಉಗ್ರವಾದ ಹೋರಾಟ ಪ್ರಾರಂಭವಾಗಲಿದೆ. ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟಿಸುತ್ತೇವೆ” ಎಂದು ಎಚ್ಚರಿಸಿದರು.

ಶಿವಮೊಗ್ಗ | ಬಜೆಟ್ 2026-27ರಲ್ಲಿ ಜಿಲ್ಲೆಗೆ ನೀಡಿದ ಅನುದಾನ ಹಾಗೂ ಘೋಷಣೆಗಳೆಷ್ಟು?ಈ ಸುದ್ದಿ ಓದಿದ್ದೀರಾ?

ಪ್ರತಿಭಟನೆಯಲ್ಲಿ ಮಾದಾರ ಮಹಾಸಭಾ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಮಾದಿಗ ಸಂಬಂಧಿತ ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...