ತೀರ್ಥಹಳ್ಳಿ | ಗುಡ್ಡ ಕುಸಿತ: ಮಗು ಸೇರಿ ಮೂವರ ಸಾವು, ಕೂಲಿಗಾಗಿ 4 ದಿನದ ಹಿಂದಷ್ಟೇ ಊರು ಬಿಟ್ಟಿದ್ದ ಕುಟುಂಬ

Date:

ದುಡಿಮೆ ಅರಸಿ ಹೋಗಿದ್ದ ಕೊಪ್ಪಳದ ಕುಟುವೊಂದು ಪ್ರಕೃತಿ ವಿಕೋಪಕ್ಕೆ ಪ್ರಾಣ ತೆತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಬಡ ಕುಟುಂಬವೊಂದು ಸಮಾಧಿಯಾಗಿದೆ. ತಾವು ವಾಸವಿದ್ದ ಶೆಡ್ ಮೇಲೆ ಗುಡ್ಡ ಕುಸಿತ ಉಂಟಾದ ಪರಿಣಾಮ ಗಂಡ-ಹೆಂಡತಿ ಮತ್ತು ಮಗು ಮಣ್ಣಿನ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.

- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ಕಾರ್ಮಿಕ ಮಲ್ಲಿಕಾರ್ಜುನ ಮತ್ತು ನಾಗವೇಣಿ ದಂಪತಿ ತಮ್ಮೊಟ್ಟಿಗೆ 3 ವರ್ಷದ ಮಗುವನ್ನು ಕಟ್ಟಿಕೊಂಡು ದುಡಿಯಲು ವಲಸೆ ಹೋಗಿದ್ದರು. ಮೊಹರಂ ಹಬ್ಬಕ್ಕೆ ಊರಿಗೆ ಬಂದಿದ್ದ ಕುಟುಂಬ, 4 ದಿನಗಳ ಹಿಂದಷ್ಟೇ ಖುಷಿ ಖುಷಿಯಾಗಿ ಶಿವಮೊಗ್ಗಕ್ಕೆ ತೆರಳಿತ್ತು. ಆದರೆ ವಿಧಿ ಅವರ ಬಾಳಲ್ಲಿ ಅಟ್ಟಹಾಸ ಮೆರೆದಿದೆ. ಮಧ್ಯರಾತ್ರಿ ಮಲಗಿದ್ದಾಗ ಏಕಾಏಕಿ ಗುಡ್ಡದ ಮೇಲಿಂದ ಜಾರಿಬಂದ ಮಣ್ಣು, ಶೆಡ್ ಮೇಲೆ ಬಿದ್ದಿದೆ. ಪರಿಣಾಮ ಶೆಡ್‌ನಲ್ಲಿ ಮಲಗಿದ್ದ ಕುಟುಂಬ ಸ್ಥಳದಲ್ಲೇ ಕೊನೆಯುಸಿರೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಪೊಲೀಸರು ವ್ಯಕ್ತಿಗೆ ಮನಸೋ ಇಚ್ಛೆ ಹೊಡೆದು ಕೊಂದ ಆರೋಪ: ಲಾಕಪ್‌ ಡೆತ್‌ ಪ್ರಕರಣ ದಾಖಲು

ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಸುಮಾರು 10 ಗಂಟೆಗಳ ಕಾಲ ಸತತವಾಗಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇತ್ತ ಸಾವಿನ ಸುದ್ದಿ ಕೇಳುತ್ತಿದ್ದಂತೆ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಏನೇ ಆಗಲಿ, ಹೊಟ್ಟೆ ಪಾಡಿಗಾಗಿ 4 ದಿನಗಳ ಹಿಂದೆ ಕೊಪ್ಪಳದಿಂದ ತೀರ್ಥಹಳ್ಳಿಗೆ ಬಂದಿದ್ದ ಕುಟುಂಬ ದುರಂತ ಅಂತ್ಯ ಕಂಡಿದ್ದು ನಿಜಕ್ಕೂ ಘನಘೋರ. ದಂಪತಿಯ ಇಬ್ಬರು ಹೆಣ್ಣು ಮಕ್ಕಳು ಈಗ ಅನಾಥರಾಗಿದ್ದು, ಈ ಘಟನೆ ಪ್ರತಿಯೊಬ್ಬರ ಮನ ಕಲಕುವಂತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...