ವಿಜಯಪುರ ಅಭಿವೃದ್ಧಿಯಲ್ಲಿ ಶಿವಾನಂದ ಪಾಟೀಲರ ಪಾತ್ರ ಎಳ್ಳಷ್ಟೂ ಇಲ್ಲ: ಮಾಜಿ ಸಚಿವ ಎಸ್‌ ಕೆ ಬೆಳ್ಳುಬ್ಬಿ

Date:

Advertisements

ವಿಜಯಪುರ ಮತಕ್ಷೇತ್ರದ ಅಭಿವೃದ್ಧಿ ನನ್ನ ಹೋರಾಟದ ಫಲ. ಜಿಲ್ಲೆಯ ಕೊರ್ತಿ ಕೊಲ್ಹಾರ ಸೇತುವೆ ನಿರ್ಮಾಣಕ್ಕಾಗಿ ನಡೆದ ಹೋರಾಟ, ನೀರಾವರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಹಾಗೂ ಹೊಸ ತಾಲೂಕುಗಳ ರಚನೆಯಲ್ಲಿ ಸಚಿವ ಶಿವಾನಂದ ಪಾಟೀಲರ ಪಾತ್ರ ಎಳ್ಳಷ್ಟೂ ಇಲ್ಲ, ಈ ಕುರಿತು ಮಾತನಾಡುವ ಯಾವ ಹಕ್ಕು ಸಹ ಅವರಿಗೆ ಇಲ್ಲ ಎಂದು ಮಾಜಿ ಸಚಿವ ಎಸ್‌ ಕೆ ಬೆಳ್ಳುಬ್ಬಿ ಹೇಳಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೊರ್ತಿ ಕೊಲ್ಹಾರ ಸೇತುವೆ, ಮುಳವಾಡ ಏತ ನೀರಾವರಿ ಮೊದಲನೇ ಹಂತ ಹೀಗೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ನಾನು ಹೋರಾಟದ ಮೂಲಕ ಹಾಗೂ ನಂತರ ಬಸವನ ಬಾಗೇವಾಡಿ ಶಾಸಕನಾಗಿದ್ದ ಅವಧಿಯಲ್ಲಿ ಸಾಕಾರಗೊಳಿಸಿದ್ದೇನೆ. ಆದರೆ ಈ ಸಾಧನೆಯನ್ನು ತಮ್ಮ ಸಾಧನೆಯ ಲೇಬಲ್ ಹಚ್ಚಿಕೊಳ್ಳುವುದನ್ನು ಸಚಿವ ಶಿವಾನಂದ ಪಾಟೀಲ ಬಿಡಬೇಕು” ಎಂದು ಒತ್ತಾಯಿಸಿದರು.

“ಈ ಹಿಂದೆ ಸಣ್ಣ ಸೇತುವೆ ಮಳೆಗಾಲ ಸಮಯದಲ್ಲಿ ಬಂದ್ ಆಗುತ್ತಿತ್ತು. ಶಾಶ್ವತವಾಗಿ ಸೇತುವೆ ಮುಳುಗುವ ಹಂತಕ್ಕೂ ಬಂದಿತ್ತು, ಆಗ ಶಾಶ್ವತ ಸೇತುವೆ ನಿರ್ಮಾಣಕ್ಕಾಗಿ ಒಂದು ದೊಡ್ಡ ಹೋರಾಟ ಮಾಡಿದೆ. ಕೊಲ್ಹಾರದಿಂದ ವಿಜಯಪುರ ನಗರಕ್ಕೆ ನೀರು ಸಂಪರ್ಕ ಬಂದ್ ಮಾಡಿ ದೊಡ್ಡಮಟ್ಟದ ಹೋರಾಟ ನಡೆದಿತ್ತು. ಈ ವೇಳೆ ನಮ್ಮನ್ನು ಬಂಧಿಸಲು ಆಗಮಿಸಿದ ಪೊಲೀಸ್ ಅಧಿಕಾರಿಗಳು ಈ ಸೇತುವೆ ಅನಿವಾರ್ಯತೆ ಮನಗಂಡು ಬಂಧಿಸಲಿಲ್ಲ. ಈ ಹೋರಾಟಕ್ಕೆ ಅನೇಕ ಬಾರಿ ಶಾಸಕರಾಗಿದ್ದ ದಿವಂಗತ ಬಿ ಎಸ್ ಪಾಟೀಲ ಮನಗೂಳಿಯವರೂ ಕೂಡ ಬೆಂಬಲಿಸಲಿಲ್ಲ. ಹಾಲಿ ಸಚಿವರಾಗಿರುವ ಶಿವಾನಂದ ಪಾಟೀಲರು ಕೂಡ ಅಂದು ಈ ಹೋರಾಟಕ್ಕೆ ಬಂದಿರಲಿಲ್ಲ” ಎಂದರು.

Advertisements

ಇದನ್ನೂ ಓದಿದ್ದೀರಾ? ಬೆಳಗಾವಿ | ಅತ್ಯಾಚಾರ ಆರೋಪ: ಮೇಖಳಿಯ ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ, ಬಂಧನ

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಮುಖಂಡ ರಾದ ಕಲ್ಲಪ್ಪ ಸೊನ್ನದ, ಇಸ್ಮಾಯಿಲ್ ತಹಶೀಲ್ದಾರ್, ಪರಶುರಾಮ ಗಣಿ‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X