ಮಂಗಳೂರು | ಸಿಡಿಲಾಘಾತಕ್ಕೆ ಸುಟ್ಟು ಕರಕಲಾದ ದಿನಸಿ ಅಂಗಡಿ

Date:

Advertisements

ಸಿಡಿಲು ಬಡಿದ ಪರಿಣಾಮ ದಿನಸಿ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಮಂಗಳೂರು ನಗರ ಹೊರವಲಯದ ಮುನ್ನೂರು ಗ್ರಾಮದ ರಾಣಿಪುರದಲ್ಲಿ ನಡೆದಿದೆ.

ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದಿದ್ದು, ಸುಟ್ಟು ಕರಕಲಾಗಿದೆ.

ಘಟನೆಯ ವೇಳೆ ಪೀಟರ್ ಮತ್ತು ಮನೆಯವರು ನಿದ್ರೆಯಲ್ಲಿದ್ದರು. ದಾರಿಹೋಕರೊಬ್ಬರು ಅಂಗಡಿಗೆ ಬೆಂಕಿ ಬಿದ್ದಿರುವುದನ್ನು ಕಂಡು ಮನೆ ಮಂದಿಗೆ ತಿಳಿಸಿದ್ದಾರೆ.

Advertisements

ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ, ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.

ಈ ಘಟನೆಯಿಂದ ಮೂರು ರೆಫ್ರಿಜರೇಟರ್ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ದಾಸ್ತಾನು ಸುಟ್ಟು ಕರಕಲಾಗಿದೆ. ಇತರ ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ, ಮನೆ ಒಟ್ಟಿಗೆ ಇದ್ದ ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X