ಶ್ರೀರಂಗಪಟ್ಟಣ | ಕರಿಘಟ್ಟದಲ್ಲಿ ಶೇಷಾದ್ರಿಪುರಂ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಶ್ರಮದಾನ

Date:

Advertisements

ಪುರಾತನವಾದ ಗುಡಿಗಳು ಹಾಗೂ ಮಂಟಪಗಳು ಮತ್ತು ಅಲ್ಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಘವೇಂದ್ರ ತಿಳಿಸಿದರು.

ಭಾನುವಾರ, ಶ್ರೀರಂಗಪಟ್ಟಣ ಬಳಿಯ ಕರಿಘಟ್ಟದಲ್ಲಿ ಮೈಸೂರಿನ ಕಡಕೋಳ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೋಟರಿ ಸಂಸ್ಥೆ, ಶ್ರೀರಂಗಪಟ್ಟಣ ಮತ್ತು ಅಚೀವರ್ಸ್ ಅಕಾಡೆಮಿ ಆಯೋಜಿಸಿದ್ದ ‘ಸದೃಢ ದೇಹ – ಪ್ಲಾಸ್ಟಿಕ್ ಮುಕ್ತ ಪರಿಸರ’ ಅಭಿಯಾನ (ಪ್ಲಾಸ್ಟಿಕ್ ಮುಕ್ತ ಕರಿಘಟ್ಟ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಪರಿಸರವನ್ನು ಉಳಿಸಿ ಉತ್ತಮವಾದ ವಾತಾವರಣ ನಿರ್ಮಾಣ ಆಗಬೇಕು. ಇದಕ್ಕೆ ಎಲ್ಲ ಸಾರ್ವಜನಿಕರು ಕೈ ಜೋಡಿಸಬೇಕು. ಪ್ಲಾಸ್ಟಿಕ್‌ನಿಂದ ಪರಿಸರ ತುಂಬಾ ಹಾಳಾಗುತ್ತಿದೆ. ಕರಿಘಟ್ಟಕ್ಕೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಕವರುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಕಸದ ತೊಟ್ಟಿಯಲ್ಲಿ ಹಾಕಬೇಕು” ಎಂದು ಹೇಳಿದರು.

ಕಾಲೇಜುಗಳ ವಿದ್ಯಾರ್ಥಿಗಳು ಕರಿಘಟ್ಟ ಗುಡಿಯ ಪಕ್ಕದಲ್ಲಿರುವ ಪುರಾತನ ಮಂಟಪದ ಸುತ್ತ ಬೆಳೆದಿದ್ದ ಗಿಡ ಗಂಟೆಗಳನ್ನು ಕತ್ತರಿಸಿ ಸ್ವಚ್ಛ ಮಾಡದರು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿದರು.

Advertisements

ಅಭಿಯಾನದಲ್ಲಿ ಕಾಲೇಜು ವಿದ್ಯಾರ್ಥಿಗಳಾದ ಕರ್ಣ, ಹೃದಯ್, ದರ್ಶನ್, ಪುನೀತ್, ಅನನ್ಯ, ಧನುಷ್, ಪೂರ್ವಜ್, ಮನು, ಪಾಲಹಳ್ಳಿ ರವಿ, ಇನ್ನು ಮುಂತಾದವರು ಸೇರಿ ಈ ಶ್ರಮದಾನದಲ್ಲಿ ಪಾಲ್ಗೊಂಡರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X