ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

Date:

ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು.

- Advertisement -

ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ ಚೋಳನಹಳ್ಳಿ (ಶಾಸಕರ ಹುಟ್ಟೂರು) ಗ್ರಾಮದಲ್ಲಿ ಮತಯಾಚನೆಗೆ ಅವರು ತೆರಳಿದ್ದರು. ಈ ವೇಳೆ, ಗ್ರಾಮಸ್ಥರು ಅವರಿಗೆ ಅದ್ದೂರಿ ಸ್ವಾಗತ ಕೋರಿದರು. ಬಳಿಕ ಮತನಾಡಿದ ಬಾಲಕೃಷ್ಣ, “ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ನೀಡಿದ ಸಮಸ್ತ ಜನತೆಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ನನ್ನನ್ನು ಎರಡು ಬಾರಿ ಶಾಸಕನನ್ನಾಗಿ ಮಾಡಿದ್ದೀರಾ, ನಿಮ್ಮೆಲ್ಲರ ಬೆಂಬಲ, ಸಹಕಾರದ ಮೂಲಕ ಮೂರನೇ ಬಾರಿ ಶಾಸಕನಾಗಿ ನಿಮ್ಮೆಲ್ಲರ ಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಬೇಕು” ಎಂದು  ಗ್ರಾಮಸ್ಥರಲ್ಲಿ ಮನವಿ ಮಾಡಿದರು.

“ನಿಮ್ಮೂರಿನ ಮನೆಮಗ ಮೂರನೇ ಬಾರಿ ಶಾಸಕನಾಗುವ ಸುವರ್ಣ ಅವಕಾಶವನ್ನು ಮನಸ್ಸಿನಲ್ಲಿಟ್ಟುಕೊಂಡು ಎಲ್ಲ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನನಗೆ ಮತ ನೀಡಬೇಕು” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಮನೆಗೆ ಹೋಗುವ ಖಾತರಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ: ರೇವಣ್ಣ

ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗೇಟ್‌ನಿಂದ ಬೈಕ್‌ ರ‍್ಯಾಲಿ ಮೂಲಕ ಜೆಡಿಎಸ್ ಕಾರ್ಯಕರ್ತರು ಸ್ವಾಗತ ಕೋರಿದರು. ಗ್ರಾಮಕ್ಕೆ ಆಗಮಿಸಿದ ಶಾಸಕರಿಗೆ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು. ಗ್ರಾಮದ ಮುಖಂಡರು ಹೂವು ಎರಚುವ ಮೂಲಕ ಸ್ವಾಗತ ಕೋರಿದರು. ಬಳಿಕ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪ್ರಚಾರ ಮಾಡಿ ಮತಯಾಚನೆ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...